RIPPONPETE | ಬೆಳ್ಳೂರು , ಹೆದ್ದಾರಿಪುರ ವ್ಯಾಪ್ತಿಯಲ್ಲಿ ಭಾರಿ ಮಳೆ: ಉಕ್ಕಿ ಹರಿಯುತ್ತಿರುವ ಹಳ್ಳಗಳು , ಜನ ಜೀವನ ಅಸ್ತವ್ಯಸ್ತ
ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗವಾದ ಹೊಸನಗರ ತಾಲೂಕಿನಲ್ಲಿ ಮಳೆ ಆರ್ಭಟಕ್ಕೆ ಜನ ಕಂಗಾಲಾಗಿದ್ದಾರೆ. ಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆ ಇದೀಗ ಜನರನ್ನು ಹೈರಾಣು ಮಾಡಿದೆ.
ಹೊಸನಗರದ ಬೆಳ್ಳೂರು , ಹೆದ್ದಾರಿಪುರ ಸೇರಿದಂತೆ ಹಲವು ಗ್ರಾಮಗಳಲ್ಲಿ ಭಾರಿ ಮಳೆಯಾಗಿದ್ದು, ಹಳ್ಳ-ಕೊಳ್ಳಗಳು ಉಕ್ಕಿ ಹರಿಯಲು ಆರಂಭಿಸಿವೆ. ಕೆಲವು ಕಡೆಗಳಲ್ಲಿ ಮಳೆ ನೀರೇ ರಸ್ತೆಗಳ ಮೇಲೆ ಹರಿಯುತ್ತಿದೆ. ಪರಿಣಾಮವಾಗಿ ಸಾರ್ವಜನಿಕರಿಗೆ ಸಂಚಾರ ಕಷ್ಟವಾಗಿದೆ.
ಭತ್ತದ ಗದ್ದೆಗಳು ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಬೆಳೆ ನಾಶವಾಗುವ ಆತಂಕ ಮೂಡಿದೆ. ವ್ಯಾಪಾರ, ಶಾಲಾ-ಕಾಲೇಜು ಹಾಗೂ ದಿನಸಿ ಖರೀದಿಗೆ ತೆರಳುವ ಜನಜೀವನವೂ ಅಸ್ತವ್ಯಸ್ತವಾಗಿದೆ.
ಈ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕಾಡಿನೊಳಗಿನ ಹಳ್ಳಗಳು ಭೋರ್ಗರೆದು ಹರಿಯುತ್ತಿದ್ದು, ನದಿಗಳ ನೀರಿನ ಮಟ್ಟವೂ ಗಣನೀಯವಾಗಿ ಏರಿಕೆಗೊಂಡಿದೆ.
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್ನಲ್ಲಿ ಈಜಲು ತೆರಳಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…
ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…
ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…