RIPPONPETE | ಹಿಂದೂ ಮಹಾಸಭಾ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ ಮೂಲೆಗದ್ದ ಶ್ರೀಗಳು
ರಿಪ್ಪನ್ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 58 ನೇ ಗಣೇಶೋತ್ಸವ ಸಮಿತಿಯವರು ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿ ವಿಶೇಷ ಪೂಜೆ ಸಲ್ಲಿಸಿ ಶ್ರೀ ಸ್ವಾಮಿಯ ದರ್ಶನ ಪಡೆದರು.
ಇದೇ ಸಂದರ್ಭದಲ್ಲಿ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿಯರನ್ನು ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 58ನೇ ಗಣೇಶೋತ್ಸವ ಸಮಿತಿಯವರು ಅಭಿನಂದಿಸಿದರು.
ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 58 ನೇ ಗಣೇಶೋತ್ಸವ ಸಮಿತಿಯ ಸುಧೀರ್ ಪಿ , ಕಾರ್ಯದರ್ಶಿ ಮುರುಳಿ ಕೆರೆಹಳ್ಳಿ ,ಭಾಸ್ಕರ್ , ವೈ ಜೆ ಕೃಷ್ಣ , ಆರ್ ರಾಘವೇಂದ್ರ , ರಾಘು ಆರ್ಟ್ಸ್ , ಶ್ರೀಧರ್ ಚಿಗುರು , ಶೈಲಾ ಆರ್ ಪ್ರಭು ಹಾಗೂ ಇನ್ನಿತರರು ಇದ್ದರು.