Breaking
12 Jan 2026, Mon

ಹೂವಿನಕೋಣೆ ಶಾಲೆ ವಿಷಪ್ರಾಷಣ ಪ್ರಕರಣ – ತನಿಖೆಯಲ್ಲಿ ಬಹಿರಂಗಗೊಂಡ ಶಾಕಿಂಗ್ ಸತ್ಯ , ಮಕ್ಕಳಾಟ ತಂದ ನಡುಕ

ಹೂವಿನಕೋಣೆ ಶಾಲೆ ವಿಷಪ್ರಾಷಣ ಪ್ರಕರಣ – ತನಿಖೆಯಲ್ಲಿ ಬಹಿರಂಗಗೊಂಡ ಶಾಕಿಂಗ್ ಸತ್ಯ , ಮಕ್ಕಳಾಟ ತಂದ ನಡುಕ

ಹೊಸನಗರ ತಾಲ್ಲೂಕಿನ ಹೂವಿನಕೋಣಿ ಗ್ರಾಮದ ಸರಕಾರಿ ಶಾಲೆಯಲ್ಲಿ ಸಂಭವಿಸಿದ ಕೀಟನಾಶಕ ಘಟನೆ ಮಹತ್ವದ ತಿರುವು ಪಡೆದುಕೊಂಡಿದೆ. ಕೆಲವು ದಿನಗಳ ಹಿಂದೆ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಘಟನೆ ರಾಜ್ಯದಾದ್ಯಂತ ಆತಂಕ ಮೂಡಿಸಿತ್ತು.

ಈ ಪ್ರಕರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಖುದ್ದಾಗಿ ಟ್ವೀಟ್ ಮಾಡಿ, “ಇದು ಭಯೋತ್ಪಾದನೆಯಿಗಿಂತಲೂ ಭಯಾನಕ,” ಎಂದು ತೀವ್ರ ಆತಂಕ ವ್ಯಕ್ತಪಡಿಸಿದ್ದರು. ಪೊಲೀಸರ ತಂಡ ಕೂಡ ಜಾಗೃತಗೊಂಡು, ತೀವ್ರ ತನಿಖೆ ಕೈಗೊಂಡಿತ್ತು. ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ನೇತೃತ್ವದಲ್ಲಿ ರಚನೆಯಾದ ಮೂರು ವಿಶೇಷ ತಂಡಗಳು, ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ಮಾರ್ಗದರ್ಶನದಲ್ಲಿ ತಂತ್ರಜ್ಞಾನ ಆಧಾರಿತ ತನಿಖೆ ನಡೆಸಿದವು.

ಆದರೆ ಯಾರೂ ಊಹಿಸದ ರೀತಿಯಲ್ಲಿ, ಈ ಪ್ರಕರಣದ ಹಿಂದೆ ಐದನೇ ತರಗತಿಯ ವಿದ್ಯಾರ್ಥಿಯಿರುವ ಸುದ್ದಿ ಇದೀಗ ಎಲ್ಲರನ್ನೂ ಶಾಕ್‌ಗೆ ತಳ್ಳಿದೆ. ಮಕ್ಕಳ ಹುಡುಗಾಟದ ಈ ಕೆಲಸ ಎಷ್ಟು ಭಯಾನಕ ಪರಿಣಾಮಗಳನ್ನು ಉಂಟುಮಾಡಬಹುದು ಎಂಬುದರ ಜ್ವಲಂತ ಉದಾಹರಣೆ ಇದು.

ಇನ್ನೂ ಈ ಬಗ್ಗೆ ಪೊಲೀಸರು ಎಲ್ಲಾ ಆಯಮಗಳಲ್ಲಿ ತನಿಖೆ ಕೈಗೊಂಡು ಸತ್ಯಾಂಶ ಹೊರಹಾಕಿದ್ದಾರೆ ಆದರೆ ಇಲ್ಲಿನ ಮಕ್ಕಳ ಹುಡುಗಾಟ ಇಡೀ ರಾಜ್ಯದ ಪೋಷಕರಲ್ಲಿ ಆತಂಕ ಮೂಡಿಸಿದಂತು ಸತ್ಯ….

About The Author

By ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Exit mobile version