ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ಹೊಸನಗರ:- 79ನೇ ಸ್ವಾತಂತ್ರ್ಯೋತ್ಸವವನ್ನು ತಾಲೂಕಿನ ಹಲವು ಮಸೀದಿಗಳಲ್ಲಿ ಸಂಭ್ರಮ ಹಾಗೂ ಸಡಗರದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿದರು.
ರಿಪ್ಪನ್ ಪೇಟೆ ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಅಧ್ಯಕ್ಷರಾದ ಹಸನಬ್ಬ ಬಾವ ಬ್ಯಾರಿ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದರು.
ಈ ಸಂಧರ್ಭದಲ್ಲಿ ಧರ್ಮಗುರುಗಳಾದ ಮುನೀರ್ ಸಖಾಫಿ ಗ್ರಾಪಂ ಸದಸ್ಯ ಆಸೀಫ್ ಹಾಗೂ ಇನ್ನಿತರರು ಇದ್ದರು
ನಿಟ್ಟೂರು ಜುಮ್ಮಾ ಮಸೀದಿಯ ಧರ್ಮಗುರುಗಳಾದ ಉಬೇದುಲ್ಲಾ ಸಖಾಫಿ ಮಸೀದಿಯ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ ” ಈ ದೇಶದ ಅನೇಕ ಮಹಾನ್ ನಾಯಕರುಗಳ ತ್ಯಾಗ ,ಬಲಿದಾನ, ಹೋರಾಟ ಮಾಡುವುದರ ಮೂಲಕ ಸ್ವಾತಂತ್ರ್ಯ ಲಭಿಸಿದೆ, ಮಹಾತ್ಮ ಗಾಂಧೀಜಿ, ನೆಹರು, ಮುಂತಾದ ನಾಯಕರುಗಳ ಕನಸಿನಂತೆ ಸಹೋದರತೆ ಭ್ರಾತೃತ್ವ ,ದೇಶದ ಐಕ್ಯತೆಗಾಗಿ ನಾವೆಲ್ಲರೂ ಜಾತಿ ಧರ್ಮಗಳೊಂದಿಗೆ, ಸೌಹಾರ್ದತೆಯನ್ನು ಬದುಕಬೇಕೆಂದು” ಸಮಾಜದ ಸದಸ್ಯರಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಹಿರಿಯರಾದ ಎಚ್ ಅಬ್ದುಲ್ಲಾ ಹಾಗೂ ಅಬ್ದುಲ್ ರೆಹಮಾನ್ ಹಾಗೂ ಮೊಹಮ್ಮದ್ ಅಸ್ಲಾಂ ಜಯರಾಮ್ ಶೆಟ್ಟಿ ಮಂಜುನಾಥ್ ಶೆಟ್ಟಿ ಇನ್ನಿತರರು ಉಪಸ್ಥಿತರಿದ್ದರು.
ಹೊಸನಗರ ಪಟ್ಟಣದ ಬದ್ರಿಯಾ ಹಾಗೂ ಜಾಮೀಯ ಜುಮ್ಮಾ ಮಸೀದಿಯಲ್ಲಿ ಸಡಗರ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಹೊಸನಗರ ಬದ್ರಿಯಾ ಜುಮ್ಮ ಮಸೀದಿ ಅಧ್ಯಕ್ಷರಾದ ಇಸಾಕ್ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಮೌಳಿ, ಪಿ ಎಲ್ ಡಿ ಬ್ಯಾಂಕಿನ ಅಧ್ಯಕ್ಷರಾದ ಎಂವಿ ಜಯರಾಮ್ , ಮಾಜಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಎಂ ಎನ್ ಸುಧಾಕರ್, ಪಟ್ಟಣ ಪಂಚಾಯತ್ ಸದಸ್ಯರಾದ ಅಶ್ವಿನಿ ಕುಮಾರ್ ಹಾಗೂ ಮಸೀದಿಯ ಧರ್ಮ ಗುರುಗಳು ಉಪಸ್ಥಿತರಿದ್ದರು
ಹೊಸನಗರ ತಾಲೂಕಿನ ಜಯನಗರದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಆವರಣದಲ್ಲಿ ಮಸೀದಿಯ ಧರ್ಮಗುರುಗಳು ಧ್ವಜಾರೋಹಣ ನೆರವೇರಿಸಿದರು.
ಹೊಸನಗರ ತಾಲೂಕಿನ ಬಟ್ಟೆಮಲ್ಲಪ್ಪ ಜುಮ್ಮಾ ಮಸೀದಿಯಲ್ಲಿ ಸಡಗರ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಮಸೀದಿ ಸಮಿತಿ ಅಧ್ಯಕ್ಷರಾದ ಸಾಧಿಕ್ ಕಚ್ಚಿಗೆಬೈಲ್ ಧ್ವಜಾರೋಹಣ ನೆರವೇರಿಸಿದರು.
ಹೊಸನಗರ ತಾಲೂಕಿನ ನಗರದ ಸುಲ್ತಾನ್ ಜುಮ್ಮಾ ಮಸೀದಿಯ ಆವರಣದಲ್ಲಿ ಮಸೀದಿಯ ಧರ್ಮಗುರುಗಳಾದ ಅಶ್ರಫ್ ಇಮಾಮಿ ಧ್ವಜಾರೋಹಣ ನೆರವೇರಿಸಿದರು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…
ಆಗುಂಬೆಯಿಂದ ರಿಪ್ಪನ್ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…
ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…
ಸಾಗರ ಬಸ್ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…
ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…