ಕೊಡಚಾದ್ರಿ ಬೆಟ್ಟಕ್ಕೆ ತೆರಳುತಿದ್ದ ಪ್ರವಾಸಿಗರಿದ್ದ ಜೀಪ್ ಪಲ್ಟಿ

ಕೊಡಚಾದ್ರಿ ಬೆಟ್ಟಕ್ಕೆ ತೆರಳುತಿದ್ದ ಪ್ರವಾಸಿಗರಿದ್ದ ಜೀಪ್ ಪಲ್ಟಿ

ಕೊಲ್ಲೂರಿನಿಂದ ಕೊಡಚಾದ್ರಿಗೆ ಬೆಟ್ಟಕ್ಕೆ ತೆರಳುತಿದ್ದ ಪ್ರವಾಸಿಗರಿದ್ದ ಜೀಪ್ ಪಲ್ಟಿಯಾಗಿರುವ ಘಟನೆ ನಿಟ್ಟೂರು – ಕಟ್ಟಿನಹೊಳೆ ಮಾರ್ಗದ ಕುಂಬಳೆ ಬಳಿ ನಡೆದಿದೆ.

ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಕೇರಳ ಮೂಲದ ಎಂಟು ಜನ ಪ್ರವಾಸಿಗರಿದ್ದ ಜೀಪ್ ಕುಂಬಳೆ ಬಳಿ ಪಲ್ಟಿಯಾಗಿದೆ.ಘಟನೆಯಲ್ಲಿ ಪ್ರವಾಸಿಗರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಕೊಲ್ಲೂರು ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ..

ಕೊಡಚಾದ್ರಿ ಜೀಪ್ ಚಾಲಕರ ಉದ್ದಟತನಕ್ಕೆ ಬೀಳಬೇಕಿದೆ ಪೊಲೀಸರ ಅಂಕುಶ

ಕೊಲ್ಲೂರು ಹಾಗೂ ನಿಟ್ಟೂರು ಪ್ರದೇಶಗಳಿಂದ ಕೊಡಚಾದ್ರಿ ಬೆಟ್ಟಕ್ಕೆ ಪ್ರವಾಸ ಕೈಗೊಳ್ಳುವವರಿಗೆ ಜೀಪ್ ಬಾಡಿಗೆ ತೆಗೆದುಕೊಳ್ಳುವುದು ಅನಿವಾರ್ಯ. ಈ ಭಾಗದಲ್ಲಿ ಸುಮಾರು 200ಕ್ಕೂ ಹೆಚ್ಚು ಜೀಪ್‌ಗಳು ಸಂಚರಿಸುತ್ತಿವೆ.

ಆದರೆ, ಕೆಲವು ಜೀಪ್ ಚಾಲಕರ ವರ್ತನೆ ಪ್ರವಾಸಿಗರ ಸುರಕ್ಷತೆಗೆ ಗಂಭೀರ ಬೆದರಿಕೆಯಾಗಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಕರ್ತವ್ಯದ ವೇಳೆ ಮದ್ಯಪಾನ ಮಾಡಿ ವಾಹನ ಚಲಾಯಿಸುವುದು, ವಾಹನ ಪರವಾನಗಿ ಇಲ್ಲದೆ ಚಾಲನೆ ಮಾಡುವುದು, ಇನ್ಶುರೆನ್ಸ್ ಮತ್ತು ಫಿಟ್ನೆಸ್ ಅವಧಿ ಮುಗಿದ ವಾಹನಗಳನ್ನು ರಸ್ತೆಗಿಳಿಸುವುದು — ಇವು ಪ್ರವಾಸಿಗರ ಜೀವಕ್ಕೆ ಅಪಾಯ ತಂದೊಡ್ಡುವ ಅಂಶಗಳಾಗಿವೆ. ಕೊಡಚಾದ್ರಿ ಬೆಟ್ಟದಂತಹ ದುರ್ಗಮ ಹಾದಿಯಲ್ಲಿ ಯಾವುದೇ ಅಪಘಾತ ಸಂಭವಿಸಿದರೆ ಹೊಣೆ ಯಾರು ಎಂಬ ಪ್ರಶ್ನೆ ಪ್ರವಾಸಿಗರ ಮನದಲ್ಲಿ ಮೂಡಿದೆ.

ಇದೇ ಅಲ್ಲದೆ, ‘ರಿಪಬ್ಲಿಕ್ ಆಫ್ ಕೊಡಚಾದ್ರಿ’ ಎಂದು ತಮ್ಮನ್ನು ತಾವೇ ಘೋಷಿಸಿಕೊಂಡಂತೆ ವರ್ತಿಸುವ ಕೆಲ ಚಾಲಕರು ಮತ್ತು ಮಾಲೀಕರು ಪ್ರವಾಸಿಗರೊಂದಿಗೆ ಅಸಭ್ಯವಾಗಿ ನಡೆದುಕೊಳ್ಳುವುದೂ, ಬೇಕಾಬಿಟ್ಟಿ ಹಣ ವಸೂಲಿ ಮಾಡುವುದೂ ಮಾಮೂಲಿ ಸಂಗತಿಯಾಗಿದೆ.

ಇನ್ನೂ ಶುಕ್ರವಾರ ನಿಟ್ಟೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಜೀಪ್ ಚಾಲಕರು ಹಾಗೂ ಮಾಲೀಕರ ಕಾರ್ಯವೈಖರಿಯ ಬಗ್ಗೆ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಕೂಡ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ತುರ್ತು ಕ್ರಮ ಕೈಗೊಂಡು, ಎಲ್ಲಾ ಜೀಪ್‌ಗಳ ದಾಖಲೆಗಳನ್ನು ಪರಿಶೀಲಿಸಿ, ಪೊಲೀಸರ ವತಿಯಿಂದ ಪ್ರದರ್ಶನ ಕಾರ್ಡ್‌ಗಳನ್ನು ವಿತರಿಸುವ ಮೂಲಕ, ಭವಿಷ್ಯದಲ್ಲಿ ಸಂಭವಿಸಬಹುದಾದ ಭಾರಿ ಅನಾಹುತವನ್ನು ತಪ್ಪಿಸಲು ಕ್ರಮವಹಿಸುವ ಅಗತ್ಯವಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

1 hour ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

1 hour ago

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ

ಬೈಕ್ ಸವಾರನ ಮೇಲೆ ಮುಸಿಯ ದಾಳಿ; ಗಂಭೀರ ಗಾಯ A bike rider was seriously injured after a…

2 hours ago

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

10 hours ago

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

23 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

24 hours ago