ಗಣಪತಿ ಹಬ್ಬ : ಶಾಂತಿ – ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸಜ್ಜು , 80 ಕಿಡಿಗೇಡಿಗಳ ಗಡಿಪಾರು | ಎಸ್ಪಿ ಮಿಥುನ್ ಕುಮಾರ್  ಮಾಹಿತಿ

ಗಣಪತಿ ಹಬ್ಬ : ಶಾಂತಿ – ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸಜ್ಜು , 80 ಕಿಡಿಗೇಡಿಗಳ ಗಡಿಪಾರು | ಎಸ್ಪಿ ಮಿಥುನ್ ಕುಮಾರ್  ಮಾಹಿತಿ

ಶಿವಮೊಗ್ಗ: ಗೌರಿ ಮತ್ತು ಗಣೇಶ ಹಬ್ಬಗಳ ಹಿನ್ನಲೆಯಲ್ಲಿ ಗಣಪತಿ ಸಮಿತಿಗಳೊಂದಿಗೆ ಶಾಂತಿ ಸಭೆಗಳಿಗೆ ಚಾಲನೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಅವರು ಗಣಪತಿ ಸಮಿತಿಗಳಿಗೆ ಶಾಂತಿಯುತ ಮತ್ತು ವೈಭವದ ಹಬ್ಬ ಆಚರಣೆಗೆ ಸಲಹೆ ಸೂಚನೆಗಳನ್ನು ನೀಡಿದರು.

ಕೋಟೆ ರಸ್ತೆಯ ಹಿಂದೂ ಮಹಾಸಭಾ ಸಮಿತಿಯೊಂದಿಗೆ ಶಾಂತಿಸಭೆ ಪ್ರಾರಂಭಿಸಿದ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಅವರು ಗಣಪತಿ ಪ್ರತಿಷ್ಠಾಪನಾ ಸಮಿತಿ ಮತ್ತು ಅಲಂಕಾರ ಸಮಿತಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಮಾತಾನಾಡಿದ ಅವರು, ಪ್ರತಿ ವರ್ಷವೂ ಸಹ ಸ್ಥಳ ವಿಶೇಷತೆ ಇರುವ ಈ ಪುಣ್ಯ ಸ್ಥಳದಿಂದಲೇ ಗಣಪತಿ ಪ್ರತಿಷ್ಠಾಪನೆಗೆ ಸಂಬಂಧಪಟ್ಟಂತಹ ಸಭೆಗಳನ್ನು ನಡೆಸಲಾಗುತ್ತಿದ್ದು, ಅದೇ ರೀತಿ ಈ ಬಾರಿಯೂ ಸಹಾ ಪುಣ್ಯ ಕ್ಷೇತ್ರವಾದ ಕೋಟೆ ಭೀಮೇಶ್ವರ ದೇವಸ್ಥಾನ ದ ಈ ಸ್ಥಳದಿಂದಲೇ ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ನಡೆಸಲಾಗುವ ಶಾಂತಿ ಸಭೆಯನ್ನು ಪ್ರಾರಂಭಿಸುತ್ತಿದ್ದೇವೆ.

ಈ ಹಿಂದಿನ ವರ್ಷ ಜಿಲ್ಲೆಯಲ್ಲಿ ಒಟ್ಟು ಮೂರು ವರೆ ಸಾವಿರಕ್ಕೂ ಹೆಚ್ಚು ಗಣಪತಿಗಳ ಪ್ರತಿಷ್ಠಾಪನೆಯಾಗಿದ್ದು, ಈ ವರ್ಷವೂ ಸಹಾ ಮೂರು ಸಾವಿರದ ಆರು ನೂರು ಗಣಪತಿಗಳ ಪ್ರತಿಷ್ಠಾಪನೆಯಾಗುವ ನಿರೀಕ್ಷೆ ಇದೆ. ಗಣಪತಿ ಪ್ರತಿಷ್ಠಾಪನೆಯಿಂದ ಗಣಪ ವಿಸರ್ಜನೆಯಾಗುವ ವರೆಗೂ ಸಹಾ ಒಟ್ಟು ಒಂದುವರೆ ತಿಂಗಳುಗಳ ಕಾಲ ಪೊಲೀಸ್ ಇಲಾಖೆಯು ಸಾರ್ವಜನಿಕರ ಹಿತ ರಕ್ಷಣೆಯ ನಿಟ್ಟಿನಲ್ಲಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ, ಈ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ತಯಾರಿಯನ್ನು ಮಾಡಿಕೊಂಡಿರುತ್ತದೆ. ಸಾರ್ವಜನಿಕರಿಗಾಗಿ ನಾವು ಯಾವುದೇ ಹಿಂಜರಿಕೆ ಇಲ್ಲದೇ ಕರ್ತವ್ಯ ನಿರ್ವಹಿಸಲು ಸದಾ ಕಾಲ ಸಜ್ಜಾಗಿರುತ್ತೇವೆ ಎಂದು ತಿಳಿಸಿದರು.

2500 ಸಿಬ್ಬಂದಿಗಳು

ಹಬ್ಬದಲ್ಲಿ ಜನರ ರಕ್ಷಣೆಗಾಗಿಯೆ ಒಟ್ಟು ೨೫೦೦ ಕ್ಕೂ ಹೆಚ್ಚು ಜನ ಪೊಲೀಸ್ ಅಧಿಕಾರಿ ಸಿಬ್ಬಂಧಿಗಳು ಹಗಲಿರುಳು ಶ್ರಮಿಸುತ್ತೇವೆ. ಇದರೊಂದಿಗೆ 2500 ಯಿಂದ 3000 ದಷ್ಟು ಜನ ಹೊರ ಜಿಲ್ಲೆಯಿಂದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿತರಾಗಲಿದ್ದಾರೆ. ನಗರದಲ್ಲಿ 1000 ಕ್ಕೂ ಹೆಚ್ಚು ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು. ಆದ್ದರಿಂದ ನೀವುಗಳು ಸಹಾ ಹೆಚ್ಚಿನ ಜನರು ಸೇರುವ ಸ್ಥಳಗಳಲ್ಲಿ, ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿ. ಇದರಿಂದ ಹಬ್ಬದ ಆಚರಣೆ ಮತ್ತು ಪೂಜೆಗಳಲ್ಲಿ ಭಾಗವಹಿಸುವ ಸಾರ್ವಜನಿಕರ ಹಾಗೂ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯು ಸಾಧ್ಯ. ಹಬ್ಬದ ಆಚರಣೆ, ಅಲಂಕಾರ ಹಾಗೂ ಇತರೆ ಯಾವುದೇ ವಿಚಾರಗಳ ಕುರಿತು ಯಾರೊಂದಿಗಾದರೂ ಸಮಸ್ಯೆಗಳು ಬಂದಾಗ ಕೂಡಲೇ ಪೊಲೀಸ್ ಇಲಾಖೆಯ ಗಮನಕ್ಕೆ ತನ್ನಿ, ನಾವೆಲ್ಲರೂ ಸೇರಿ ಕಾನೂನಿನ ಚೌಕಟ್ಟಿಗೆ ಒಳಪಟ್ಟು ಸಮಸ್ಯೆಯನ್ನು ಬಗೆಹರಿಸೋಣ ಎಂದರು.

ಸಿಸಿ ಟಿವಿ ಕ್ಯಾಮೆರಗಳು ತುಂಬಾ ಸಹಾಯಕ್ಕೆ ಬರಲಿವೆ. ಎಷ್ಟೋ ಬಾರಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸುರುವುದನ್ನು ನೋಡಿಯೇ ಯಾವುದೇ ಕಿಡಿಗೇಡಿತನ / ಕಳ್ಳತನ ಮಾಡಲು ಹಿಂಜರಿಯುತ್ತಾರೆ. ನಒಂದು ವೇಳೆ ಯಾವುದೇ ಘಟನೆಗಳು ಜರುಗಿದರೂ ಸಹಾ ಆರೋಪಿತರನ್ನು ಶೀಘ್ರವಾಗಿ ಪತ್ತೆ ಮಾಡಲು ಸಾಧ್ಯವಿರುತ್ತದೆ. ಹಬ್ಬಕ್ಕೆ ಅಡಚಣೆಯನ್ನುಂಟು ಮಾಡುವಂತಹ ಸಂಭವನೀಯ 80 ಜನ ಕಿಡಿಗೇಡಿ ವ್ಯಕ್ತಿಗಳನ್ನು ಗುರುತಿಸಿ ಪೊಲೀಸ್ ಇಲಾಖೆಯು ಈಗಾಗಲೇ ಅಂತಹವರನ್ನು ಗಡಿಪಾರು ಮಾಡಿ, ಹಲವರ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಂಡಿರುತ್ತೇವೆ. ಇನ್ನೂ ಕೆಲವರನ್ನು ಗುರುತಿಸಿದ್ದು ಅವರ ಮೇಲೂ ಸಹಾ ಕ್ರಮ ಕೈಗೊಳ್ಳುತ್ತೇವೆ ಯಾರೋ ಕೆಲವು ಜನ ಕಿಡಿಗೇಡಿ ಮಾಡುವ ಕೃತ್ಯದಿಂದ ಇಡೀ ಸಮಾಜಕ್ಕೆ ಹಾಗೂ ಹಬ್ಬದ ಆಚರಣೆಗೆ ಮತ್ತು ವೈಭವಕ್ಕೆ ತೊಂದರೆಯಾಗಲಿದೆ, ಆದ್ದರಿಂದ ಸಾರ್ವಜನಿಕರ ಹಿತ ರಕ್ಷಣೆಯ ದೃಷ್ಠಿಯಿಂದ ಗಡಿಪಾರು ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಹಳೆಯ ವರ್ಷದ ಗಣಪತಿ ವಿಸರ್ಜನೆಯ ವಿಡಿಯೋ ಗಳನ್ನು ಗಮನಿಸಿ, ಜನ ಸಮೂಹದಲ್ಲಿ ಕೆಟ್ಟದಾಗಿ ನಡೆದುಕೊಳ್ಳುವುದು, ಹೆಣ್ಣು ಮಕ್ಕಳಿಗೆ ಕಿರಿ ಕಿರಿ ಮಾಡುವುದು, ಅವರೊಂದಿಗೆ ಅಸಭ್ಯವಾಗಿ ವರ್ತಿಸುವುದು, ಕಿಡಿಗೇಡಿತನ ಮಾಡುವುದು, ಪ್ರಚೋದನಾಕಾರಿಯಾಗಿ ಘೋಷಣೆ ಕೂಗುವುದು, ತಳ್ಳಾಟ ಮಾಡುವುದು ಈ ರೀತಿಯ ಕೃತ್ಯ ಮಾಡುವವರನ್ನು ಗುರುತಿಸಿ, ಅವರುಗಳ ಪೋಷಕರನ್ನು ಪೊಲೀಸ್ ಠಾಣೆಗೆ ಕರೆಸಿ ಸೂಕ್ತ ಎಚ್ಚರಿಕೆ ನೀಡಲಾಗಿರುತ್ತದೆ ಎಂದು ತಿಳಿಸಿದರು.

ಸಭೆಯಲ್ಲಿ ಹೆಚ್ಚುವರಿ ರಕ್ಷಣಾಧಿಕಾರಿಗಳಾದ ಕಾರಿಯಪ್ಪ ಎ ಜಿ., ಎಸ್ ರಮೇಶ್ ಕುಮಾರ್ , ಡಿವೈಎಸ್ಪಿ ಬಾಬು ಆಂಜನಪ್ಪ,, ಕೋಟೆ ಪೊಲೀಸ್ ಇನ್ಸ್ ಪೆಕ್ಟರ್ ಹರೀಶ್ ಪಾಟೀಲ್ ಮತ್ತು ಹಿಂದೂ ಮಹಾ ಸಭಾ ಗಣಪತಿ ಪ್ರತಿಷ್ಠಾಪನಾ ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…

5 hours ago

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶ

ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…

18 hours ago

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ

ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…

19 hours ago

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

23 hours ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

23 hours ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

23 hours ago