RIPPONPETE | ಮದ್ಯಪಾನ ಮಾಡಿ ಬಸ್ ಚಾಲನೆ ಮಾಡಿದ ಖಾಸಗಿ ಬಸ್ ಚಾಲಕ – ಪ್ರಕರಣ ದಾಖಲಿಸಿದ ಪೊಲೀಸರು

RIPPONPETE | ಮದ್ಯಪಾನ ಮಾಡಿ ಬಸ್ ಚಾಲನೆ ಮಾಡಿದ ಖಾಸಗಿ ಬಸ್ ಚಾಲಕ – ಪ್ರಕರಣ ದಾಖಲಿಸಿದ ಪೊಲೀಸರು

ರಿಪ್ಪನ್ ಪೇಟೆ : ಮದ್ಯಪಾನ ಮಾಡಿ ಸಾರ್ವಜನಿಕರ ಪ್ರಾಣದೊಂದಿಗೆ ಆಟವಾಡುತ್ತಿದ್ದ ಖಾಸಗಿ ಬಸ್ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿರುವ ಘಟನೆ ಇಂದು ಮಧ್ಯಾಹ್ನ ಪಟ್ಟಣದಲ್ಲಿ ನಡೆದಿದೆ. ಸಮಯೋಚಿತವಾಗಿ ಪೊಲೀಸರು ಕ್ರಮ ಕೈಗೊಂಡದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಸಾಗರದಿಂದ ತೀರ್ಥಹಳ್ಳಿಯತ್ತ ತೆರಳುತ್ತಿದ್ದ ಖಾಸಗಿ ಬಸ್‌ನ ಚಾಲಕ ಕಂಠಪೂರ್ತಿ ಮದ್ಯ ಸೇವಿಸಿ ವಾಹನವನ್ನು ನಿರ್ಲಕ್ಷ್ಯದಿಂದ ಓಡಿಸುತ್ತಿದ್ದಾನೆಂಬ ಮಾಹಿತಿ ಬಸ್ಸಿನಲ್ಲಿದ್ದ ಪ್ರಯಾಣಿಕರೊಬ್ಬರು ಪೋಸ್ಟ್ ಮ್ಯಾನ್ ನ್ಯೂಸ್ ಕಚೇರಿಗೆ ನೀಡಿದ್ದಾರೆ. ತಕ್ಷಣವೇ ಸುದ್ದಿ ಕಚೇರಿಯಿಂದ ಸ್ಥಳೀಯ ಠಾಣಾಧಿಕಾರಿಗಳಿಗೆ ಮಾಹಿತಿ ತಲುಪಿಸಲಾಯಿತು. ಅದನ್ನು ಗಂಭೀರವಾಗಿ ಪರಿಗಣಿಸಿದ ರಿಪ್ಪನ್ ಪೇಟೆ ಠಾಣೆಯ ಪೊಲೀಸರು ವಿನಾಯಕ ವೃತ್ತದಲ್ಲಿ ಬಸ್ ತಡೆದು ಆಲ್ಕೋಮೀಟರ್ ಮೂಲಕ ತಪಾಸಣೆ ನಡೆಸಿದರು. ಪರೀಕ್ಷೆಯ ವೇಳೆ ಚಾಲಕ ಮದ್ಯಪಾನ ಮಾಡಿರುವುದು ದೃಢಪಟ್ಟಿದ್ದು, ಕೂಡಲೇ ಆತನ ವಿರುದ್ಧ ಕಾನೂನು ಪ್ರಕಾರ ಪ್ರಕರಣ ದಾಖಲಿಸಲಾಯಿತು.

ಬಸ್ಸಿನಲ್ಲಿ ಆಗಿದ್ದ ಪ್ರಯಾಣಿಕರ ಸಂಖ್ಯೆ ಸುಮಾರು 35-40ರಷ್ಟಿತ್ತು. ಚಾಲಕ ಮದ್ಯದ ಮತ್ತಿನಲ್ಲಿ ವಾಹನ ಹತ್ತಿರ ಹಾಕಿಕೊಂಡು ತಿರುಗಾಡುತ್ತಿರುವ ದೃಶ್ಯವನ್ನೇ ಕೆಲವರು ತಮ್ಮ ಮೊಬೈಲ್‌ನಲ್ಲಿ ವೀಡಿಯೋ ಮಾಡಿ ಶೇರ್ ಮಾಡಿದ್ದಾರೆ. ಪ್ರಯಾಣಿಕರು ತಮ್ಮ ಜೀವಕ್ಕೆ ತಾವು ಖಾತರಿಯಾಗಬೇಕಾದ ಪರಿಸ್ಥಿತಿ ಉಂಟಾಗಿದ್ದನ್ನು ವೀಡಿಯೋ ಸ್ಪಷ್ಟಪಡಿಸುತ್ತದೆ.

ಪ್ರಯಾಣಿಕರ ಪ್ರಾಣಕ್ಕೆ ಅಪಾಯ

ಪ್ರಯಾಣಿಕರನ್ನು ಸುರಕ್ಷಿತವಾಗಿ ತಲುಪಿಸುವ ಜವಾಬ್ದಾರಿ ಸಂಪೂರ್ಣವಾಗಿ ಚಾಲಕರ ಮೇಲಿರುತ್ತದೆ. ಆದರೆ ಈ ಘಟನೆಯಲ್ಲಿ ಬಸ್ ಚಾಲಕನ ನಿರ್ಲಕ್ಷ್ಯದಿಂದ ದುರಂತ ಸಂಭವಿಸುವಂತ ಸ್ಥಿತಿ ಉಂಟಾಗಿತ್ತು. ನೂರಾರು ಕುಟುಂಬಗಳು ಪ್ರತಿದಿನ ಖಾಸಗಿ ಬಸ್‌ಗಳ ಮೇಲೆ ಅವಲಂಬಿತವಾಗಿದ್ದು, ಸಾರ್ವಜನಿಕ ಸಾರಿಗೆ ಸುರಕ್ಷತೆಯ ಪ್ರಶ್ನೆ ಮತ್ತೊಮ್ಮೆ ಮೆರೆದಿದೆ.

ಕೇವಲ ಚಾಲಕರ ತಪ್ಪಲ್ಲ, ವ್ಯವಸ್ಥೆಯ ವೈಫಲ್ಯವೂ ಹೌದು

ಮದ್ಯಪಾನ ಮಾಡಿ ಬಸ್ ಓಡಿಸಿದ ಚಾಲಕ ಖಂಡಿತ ತಪ್ಪಿತಸ್ಥ. ಆದರೆ ಪ್ರಶ್ನೆ ಏನೆಂದರೆ – ಇಂತಹ ಚಾಲಕರನ್ನು ಕಂಪನಿಗಳು ಹೇಗೆ ನಿಯೋಜಿಸುತ್ತವೆ? ಪ್ರಯಾಣಿಕರ ಜೀವವನ್ನು ಹೊತ್ತೊಯ್ಯುವ ಮೊದಲು ವಾಹನ ಹಾಗೂ ಚಾಲಕರ ವೈದ್ಯಕೀಯ ಸ್ಥಿತಿ ಪರಿಶೀಲನೆ ಮಾಡಬೇಕಲ್ಲವೆ? ಸಾರಿಗೆ ಕಂಪನಿಗಳ ನಿರ್ಲಕ್ಷ್ಯವೂ ಈ ಘಟನೆಯ ಮೂಲ ಕಾರಣಗಳಲ್ಲಿ ಒಂದಾಗಿದೆ.

ರಿಪ್ಪನ್ ಪೇಟೆಯ ಈ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದರೂ, ಸಮಯೋಚಿತ ಪೊಲೀಸರ ಕ್ರಮದಿಂದ ದೊಡ್ಡ ದುರಂತ ತಪ್ಪಿದಂತಾಗಿದೆ. ಮದ್ಯಪಾನ ಚಾಲನೆಯ ವಿರುದ್ಧ ಕಾನೂನು ಕಠಿಣವಾದರೂ, ಇನ್ನೂ ಕೆಲವರು ಅದನ್ನು ಲಘುವಾಗಿ ತೆಗೆದುಕೊಳ್ಳುತ್ತಿರುವುದು ವಿಷಾದನೀಯ. ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಕಾನೂನು ಜಾರಿ ಮತ್ತು ಸಾರ್ವಜನಿಕ ಜಾಗೃತಿ ಎರಡೂ ಅಗತ್ಯ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ

ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…

35 minutes ago

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕದ ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ

ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…

49 minutes ago

ಸಿಎಂ ಡಿಕೆಶಿ ಮನವೊಲಿಕೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ

ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…

8 hours ago

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ!

ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…

12 hours ago

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ

ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…

12 hours ago

ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು!

ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು! ಅಧಿಕಾರದ ದರ್ಪದಲ್ಲಿ ನೈತಿಕತೆಯೇ ಬಲಿ,…

24 hours ago