“ಧರ್ಮ, ಹಬ್ಬ, ಕರ್ತವ್ಯ – ಎಲ್ಲವನ್ನೂ ಒಟ್ಟುಗೂಡಿಸಿದ ತೀರ್ಥಹಳ್ಳಿ ಪೊಲೀಸ್‌ ಗಣಪತಿ ವಿಸರ್ಜನೆ”

“ಧರ್ಮ, ಹಬ್ಬ, ಕರ್ತವ್ಯ – ಎಲ್ಲವನ್ನೂ ಒಟ್ಟುಗೂಡಿಸಿದ ತೀರ್ಥಹಳ್ಳಿ ಪೊಲೀಸ್‌ ಗಣಪತಿ ವಿಸರ್ಜನೆ”

“ಮೆರವಣಿಗೆಯಲ್ಲಿ ಸಿಬ್ಬಂದಿಗಳೊಂದಿಗೆ ಕುಣಿದು ಕುಪ್ಪಳಿಸಿದ ಸಿಪಿಐ ಇಮ್ರಾನ್ ಬೇಗ್  – ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾದ ತೀರ್ಥಹಳ್ಳಿ”

ತೀರ್ಥಹಳ್ಳಿ : ಗಣಪತಿ ಹಬ್ಬ ಎಂದರೆ ಸದಾ ಸೌಹಾರ್ದ, ಸಂತೋಷ, ಏಕತೆ ತುಂಬಿದ ಹಬ್ಬ. ಸಾಮಾನ್ಯವಾಗಿ ವಿಸರ್ಜನೆ ವೇಳೆ ಪೊಲೀಸರು ಶಿಸ್ತಿಗಾಗಿ ಬೈಯುತ್ತಾರೆ, ನಿಯಮ ಪಾಲನೆಗೆ ಕಠಿಣವಾಗುತ್ತಾರೆ ಎಂಬ ಮಾತು ಕೇಳಿ ಬರುತ್ತದೆ. ಆದರೆ ತೀರ್ಥಹಳ್ಳಿಯ ಪೊಲೀಸರು ಈ ಬಾರಿ ತಮ್ಮ ಕಾರ್ಯ ಶೈಲಿಯಿಂದ ಜನಮನ ಗೆದ್ದಿದ್ದಾರೆ.

ಮೂರು ವರ್ಷಗಳಿಂದ ಪಟ್ಟಣದ ರಥಬೀದಿಯಲ್ಲಿರುವ ಪೊಲೀಸ್ ಠಾಣೆಯೇ ಗಣಪತಿ ಹಬ್ಬದ ವೇದಿಕೆಯಾಗಿ ಪರಿಣಮಿಸಿದೆ. ಈ ಬಾರಿ ಕೂಡ ಗಣಪತಿಯನ್ನು ಪ್ರತಿಷ್ಠಾಪನೆ ಮಾಡಿ ಇಂದು ಭಾವಪೂರ್ಣವಾಗಿ ವಿಸರ್ಜನೆ ಮಾಡಲಾಯಿತು. ಪೊಲೀಸ್ ಸಿಬ್ಬಂದಿಯೇ ಚಂಡೆ, ನಾಸಿಕ್ ಬ್ಯಾಂಡ್ ನಾದಕ್ಕೆ ತಾವು ಕುಣಿದು ಕುಪ್ಪಳಿಸಿ ಹಬ್ಬದ ಸಂಭ್ರಮವನ್ನು ತಮಗೂ ಸೇರಿಸಿಕೊಂಡರು. ಸದಾ ಒತ್ತಡದ ಕರ್ತವ್ಯಗಳಲ್ಲಿ ಮುಳುಗಿರುವ ಪೊಲೀಸರಿಗೆ ಇದು ನಿಜಕ್ಕೂ ಒಂದು ರೀಲೀಫ್ ಕ್ಷಣವಾಗಿತ್ತು.

ಈ ಬಾರಿ 30 ಕ್ಕೂ ಹೆಚ್ಚು ಗಣಪತಿ ವಿಸರ್ಜನೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದರಿಂದ ತಮ್ಮ ಕರ್ತವ್ಯಕ್ಕೆ ಹಾಜರಾಗಬೇಕಾದ ಕಾರಣ, ಠಾಣೆಯ ಗಣಪತಿಯನ್ನು ಮಧ್ಯಾಹ್ನದೊಳಗೆ ವಿಸರ್ಜಿಸಲಾಯಿತು. ಠಾಣೆಯಿಂದ ಆಗುಂಬೆ ಬಸ್ ನಿಲ್ದಾಣದವರೆಗೆ ಮೆರವಣಿಗೆ ಮಾಡಿ, ಬಳಿಕ ತುಂಗಾ ನದಿಯಲ್ಲಿ ವಿಸರ್ಜನೆ ನೆರವೇರಿಸಲಾಯಿತು. ಸರಳತೆ, ಸಂಭ್ರಮ ಮತ್ತು ಏಕತೆಯಿಂದ ಈ ವಿಸರ್ಜನಾ ಮೆರವಣಿಗೆ ವಿಶಿಷ್ಟತೆ ನೀಡಿತು.

ಮಾದರಿಯಾದ ಸಿಪಿಐ ಇಮ್ರಾನ್ ಬೇಗ್

“ದೇವರು ಎಲ್ಲರಿಗೂ ಒಂದೇ” ಎಂಬ ನಂಬಿಕೆಯನ್ನು ತೋರಿಸಿ, ಗಣಪತಿ ಪೂಜೆ ಸಲ್ಲಿಸಿ ನಂತರ ವಿಸರ್ಜನೆಗೆ ವಾಹನ ಚಾಲನೆ ಮಾಡಿದ ಸಿಪಿಐ ಇಮ್ರಾನ್ ಬೇಗ್. ತುಂಗಾ ನದಿಯಲ್ಲಿ ವಿಸರ್ಜನೆ ಮಾಡುವ ವೇಳೆ ಗಣಪತಿಯನ್ನು ತಾವೇ ಕೈಯಲ್ಲಿ ಹೊತ್ತುಕೊಂಡು ಹೋಗಿದ್ದು, ಸಾರ್ವಜನಿಕರಲ್ಲಿ ಅಪಾರ ಮೆಚ್ಚುಗೆಗೆ ಕಾರಣವಾಯಿತು. ಧರ್ಮ ಬೇರೆಯಾದರೂ ನಂಬಿಕೆಯೇ ಒಟ್ಟುಗೂಡಿಸುತ್ತದೆ ಎಂಬ ಸಂದೇಶವನ್ನು ಅವರು ತಮ್ಮ ನಡೆ-ನುಡಿಗಳಿಂದ ತೋರಿಸಿದರು.ತೀರ್ಥಹಳ್ಳಿಯ ಮಣ್ಣಿನ ಗುಣವೇ ಅಂತಹುದು.

ಒಟ್ಟಿನಲ್ಲಿ, ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ಕೇವಲ ಹಬ್ಬವಲ್ಲ, ಅದು ಸೌಹಾರ್ದ, ಏಕತೆ ಮತ್ತು ಭಾವಪೂರ್ಣ ಆಚರಣೆಯ ಮಾದರಿ ಎನಿಸಿತು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

14 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

14 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

18 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

20 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

21 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago