ರಿಪ್ಪನ್ ಪೇಟೆ ಜೆಸಿಐ ನಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರ ಹಾಗೂ ಛತ್ರಿ ವಿತರಣೆ
ರಿಪ್ಪನ್ ಪೇಟೆ: ಪಟ್ಟಣದ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಅರಸಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳು ಮತ್ತು ಛತ್ರಿಗಳನ್ನು ವಿತರಿಸುವ ಮೂಲಕ ಶಿಕ್ಷಣೋತ್ಸಾಹಕ್ಕೆ ಪ್ರೇರಣೆಯಾದರು
ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದ ತೀರ್ಥಹಳ್ಳಿ ಸೀನಿಯರ್ ಚೇಂಬರ್ ಜೆಸಿಐ ನಿಕಟಪೂರ್ವ ಅಧ್ಯಕ್ಷ ಹೆಚ್ ಎನ್. ಸೂರ್ಯನಾರಾಯಣ್ ಶಿಕ್ಷಣದ ಮಹತ್ವವನ್ನು ಒತ್ತಿ ಹೇಳಿ, ವಿದ್ಯಾರ್ಥಿಗಳು ಕಲಿಕೆಯಲ್ಲಿ ತೊಡಗಿಸಿಕೊಂಡು ಭವಿಷ್ಯ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಬೇಕೆಂದು ಹೇಳಿದರು.
ಸೀನಿಯರ್ ಚೇಂಬರ್ ರಿಪ್ಪನ್ ಪೇಟೆಯ ಅಧ್ಯಕ್ಷ ಪಿಯೂಸ್ ರೋಡ್ರಿಗಸ್ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಪಾತ್ರರಾಗಬಹುದೆಂಬ ಸಂದೇಶ ನೀಡಿದರು.
ಕಾರ್ಯಕ್ರಮದಲ್ಲಿ ಸೀನಿಯರ್ ಚೇಂಬರ್ ಅಧ್ಯಕ್ಷರಾದ ಪಿಯೂಸ್ ರೋಡ್ರಿಗಸ್, ಕಾರ್ಯದರ್ಶಿ ಶ್ರೀಧರ್, ಖಜಾಂಚಿ ಅಜೇಶ್, ಉಪಾಧ್ಯಕ್ಷೆ ಲೇಖನ ಚಂದ್ರನಾಯಕ್ ಹಾಗೂ ಪದಾಧಿಕಾರಿಗಳಾದ ರಫಿ ರಿಪ್ಪನ್ ಪೇಟೆ, ವಿನಾಯಕ, ಗುಂಡಣ್ಣ, ನೇಮಣ್ಣ, ಪ್ರಭಾಕರ್ ಆಚಾರ್, ಅನೂಪ್ ಬಟ್ಟೆ ಮಲ್ಲಪ್ಪ, , ದಾನಪ್ಪ, ರಾಮಚಂದ್ರಬಂಡಿ, ಅಶ್ವಕ್, ಸಂಗೀತ ಶಾಜಿ ಮತ್ತು ಶಾಜಿ ಭಾಗವಹಿಸಿದ್ದರು.
ಶಾಲೆಯ ಮುಖ್ಯ ಶಿಕ್ಷಕಿ ಪವಿತ್ರ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜೋಜಿರಾವ್, ಸಹ ಶಿಕ್ಷಕರು, ಪೋಷಕರು ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕಾರ್ಯದರ್ಶಿ ಶ್ರೀಧರ್ ನಿರೂಪಿಸಿ ಸಬಾಸ್ಟಿನ್ ಮ್ಯಾಥ್ಯೂಸ್ ಸ್ವಾಗತಿಸಿ ಶಿಕ್ಷಕರಾದ ನಾಗರಾಜ್ ವಂದಿಸಿದರು
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್