ಶ್ರೀಗಂಧ ಕಳ್ಳರ ಬಂಧನ – ಪೊಲೀಸ್ ನಾಯಿಯ ಸಹಾಯದಿಂದ ಕಳ್ಳನ ಬಂಧನ
ಶಿಕಾರಿಪುರ, ಆ. 12 – ತಾಲ್ಲೂಕಿನ ಕೆಂಗಟ್ಟೆ ಶ್ರೀಗಂಧ ಮೀಸಲಿನಲ್ಲಿ ಶ್ರೀಗಂಧ ಮರ ಕಳ್ಳತನಕ್ಕೆ ಯತ್ನಿಸಿದವರ ವಿರುದ್ಧ ವಲಯ ಅರಣ್ಯಾಧಿಕಾರಿ ರೇವಣಸಿದ್ಧಯ್ಯ ಬಿ. ಹಿರೇಮಠ್ ಹಾಗೂ ತಂಡ ಶೀಘ್ರ ಕಾರ್ಯಾಚರಣೆ ನಡೆಸಿ ಒಬ್ಬ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾದರು.
ಶಿವಮೊಗ್ಗದ ಇಂದಿರಾನಗರ ಮೂಲದ ಆರು ಮಂದಿ ಆರೋಪಿಗಳು ರಾತ್ರಿ ವೇಳೆ, ವಿಶೇಷವಾಗಿ ಮಳೆಯ ಸಮಯವನ್ನು ಸದುಪಯೋಗಪಡಿಸಿಕೊಂಡು, ಬೇಲಿ ಕತ್ತರಿಸಿ ಅರಣ್ಯ ಪ್ರದೇಶಕ್ಕೆ ಪ್ರವೇಶಿಸಿದ್ದರು. ಅವರು ಶ್ರೀಗಂಧ ಮರವನ್ನು ಕಡಿಯಲು ಸಜ್ಜಾಗುತ್ತಿದ್ದ ವೇಳೆ ಅರಣ್ಯ ಸಿಬ್ಬಂದಿ ದಾಳಿ ನಡೆಸಿ ಓರ್ವನನ್ನು ಬಂಧಿಸಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಮುಧೋಳ್ ಜಾತಿಯ ವಿಶೇಷ ತರಬೇತಿ ಪಡೆದ ಪೊಲೀಸ್ ನಾಯಿಯನ್ನು ಬಳಸಿ, ಕಳ್ಳರ ಹಾದಿಯನ್ನು ಪತ್ತೆಹಚ್ಚಿ ಒಬ್ಬನನ್ನು ಬಂಧಿಸಲಾಯಿತು. ಉಳಿದ ಆರೋಪಿಗಳನ್ನು ಪತ್ತೆಹಚ್ಚಲು ಅರಣ್ಯ ಇಲಾಖೆ ಶೋಧ ಮುಂದುವರೆಸಿದೆ.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…