RIPPONPETE | ಶಾಲಾ ಬಸ್ ಪಲ್ಟಿ : ತಪ್ಪಿದ ಭಾರಿ ಅನಾಹುತ
ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕಾನುಗೋಡು ಗ್ರಾಮದ ಬಳಿ ಇಂದು ಬೆಳಿಗ್ಗೆ ನರ್ಸರಿ ಮಕ್ಕಳನ್ನು ಕರೆದೊಯ್ಯುತಿದ್ದ ಶಾಲಾ ಬಸ್ ಪಲ್ಟಿಯಾದ ಘಟನೆ ನಡೆದಿದೆ.
ತಮ್ಮಡಿಕೊಪ್ಪ – ಮೂಗುಡ್ತಿ ಮಾರ್ಗದಲ್ಲಿ ಚಲಿಸುತ್ತಿದ್ದ ಶಾಲಾ ಬಸ್ ಕಾನುಗೋಡು ಬಳಿಯಲ್ಲಿ ಪಲ್ಟಿಯಾಗಿದೆ. ಗರ್ತಿಕೆರೆಯ ಖಾಸಗಿ ಶಾಲೆಯ ನರ್ಸರಿ ವಿಭಾಗದ 12 ಮಂದಿ ಮಕ್ಕಳು ಇದ್ದರು ಎನ್ನಲಾಗಿದೆ. ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ.
ಸ್ಥಳೀಯರ ಪ್ರಕಾರ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಜಾರಿಬಿದ್ದ ಪರಿಣಾಮ ಪಲ್ಟಿಯಾಗಿದೆ. ಒಂದು ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿರುವುದಾಗಿ ತಿಳಿದುಬಂದಿದ್ದು, ಎಲ್ಲರನ್ನೂ ತಕ್ಷಣವೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಇಂತಹ ಘಟನೆಗಳು ಪೋಷಕರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸುವಂತದ್ದಾಗಿವೆ. ಮಕ್ಕಳನ್ನು ಹೊತ್ತೊಯ್ಯುವ ಶಾಲಾ ವಾಹನಗಳಿಗೆ ವಿಶೇಷ ಸುರಕ್ಷತಾ ಕ್ರಮಗಳು ಅವಶ್ಯಕ. ಬಸ್ ಚಾಲಕರು ಅತಿವೇಗ ತಪ್ಪಿಸಿ, ನಿಯಮ ಪಾಲನೆ ಮಾಡುವುದರ ಜೊತೆಗೆ, ರಸ್ತೆ ಪರಿಸ್ಥಿತಿಗಳನ್ನು ಗಮನದಲ್ಲಿಟ್ಟುಕೊಂಡು ಎಚ್ಚರಿಕೆಯಿಂದ ಸಾಗುವುದು ಅತ್ಯಂತ ಮುಖ್ಯ.
ಶಾಲಾ ಆಡಳಿತವು ಕೂಡಾ ನಿಯಮಿತವಾಗಿ ಬಸ್ಗಳ ತಾಂತ್ರಿಕ ಪರಿಶೀಲನೆ ನಡೆಸಿ, ಬ್ರೇಕ್, ಟೈರ್ ಮತ್ತು ಸ್ಟಿಯರಿಂಗ್ ಸೇರಿದಂತೆ ಎಲ್ಲಾ ಭಾಗಗಳು ಸಮರ್ಪಕವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು.
ಈ ಘಟನೆಯಲ್ಲಿ ಭಾರಿ ಅನಾಹುತವಾಗದಿದ್ದರೂ, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಜಾಗೃತಿ ವಹಿಸಬೇಕಾಗಿದೆ.
“ಪ್ರತಿ ಮಗುವಿನ ಸುರಕ್ಷತೆ ನಮ್ಮೆಲ್ಲರ ಹೊಣೆಗಾರಿಕೆ – ಎಚ್ಚರಿಕೆ ಮಾತ್ರವೇ ಅಪಘಾತ ತಪ್ಪಿಸುವ ದಾರಿ.”
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…
ರಿಪ್ಪನ್ಪೇಟೆ ಕೆಪಿಎಸ್ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…