ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್
ರಿಪ್ಪನ್ಪೇಟೆ : ಹಬ್ಬ ಹರಿದಿನಗಳಲ್ಲಿ ತವರು ಮನೆಗೆ ಹೋಗಿ ಬರುವಷ್ಟು ಸಮಯವಿರದಂತಹ ಸ್ಥಿತಿಯಲ್ಲಿರುವ ಪೊಲೀಸ್ ಇಲಾಖೆಯ ಮಹಿಳಾ ಸಿಬ್ಬಂದಿಗಳಿಗೆ ಹೊಂಬುಜ ಗ್ರಾಮ ಪಂಚಾಯ್ತಿ ಸದಸ್ಯೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ವೃಷಭರಾಜ್ ಜೈನ್ ಕುಟುಂಬ ವರ್ಗದವರು ಬಾಗಿನ ನೀಡಿ ಸತ್ಕರಿಸಿದರು.
ರಾಖಿ ಕಟ್ಟುವುದರಿಂದ ಅಣ್ಣ-ತಂಗಿಯರ ಸಂಬಂಧ ಸಹೋದರತ್ವ ಗಟ್ಟಿಯಾಗಿರುತ್ತದೆಂಬ ನಂಬಿಕೆ ನಮ್ಮ ಹಿಂದುಗಳದ್ದಾಗಿದ್ದು ಪೊಲೀಸರು ಗಣೇಶ ಹಬ್ಬದ ಸಂದರ್ಭದಲ್ಲಿ ರಕ್ಷಣೆಯ ಒತ್ತಡದಲ್ಲಿ ಹಬ್ಬ ಹರಿದಿನಗಳಿಂದ ದೂರವಿರುವ ಪೊಲೀಸರು ಕರ್ತವ್ಯವೇ ದೇವರು ಎನ್ನುವಾಗ ನಾಗರಪಂಚಮಿ ಸಂಪತ್ತು ಶುಕ್ರವಾರ ಮಂಗಳಗೌರಿ ಹಬ್ಬ ಗಣೇಶ ಚತುರ್ಥಿ ಇಂತಹ ಹಬ್ಬಗಳಲ್ಲಿ ಮಹಿಳೆಯರು ತವರು ಮನೆಗೆ ಹೋಗಿ ಅರಿಶಿಣ ಕುಂಕುಮದೊಂದಿಗೆ ಬಾಗಿನ ಪಡೆಯುವುದು ಮುತ್ತೈದೆಯರಿಗೆ ಹಬ್ಬವೋ ಹಬ್ಬ ಆ ಕಾರಣ ಹೊಂಬುಜದ ಗ್ರಾಮ ಪಂಚಾಯ್ತಿ ಸದಸ್ಯೆ ಯಶಸ್ವತಿ ವೃಷಭರಾಜ್ ಜೈನ್ ಕುಟುಂಬ ಸಹಿತ ಕಳೆದ 12 ವರ್ಷದಿಂದ ಈ ಕಾರ್ಯವನ್ನು ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೇ ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದಾರೆ.
ಯಶಸ್ವತಿ ವೃಷಭರಾಜ್ ಜೈನ್ ಕುಟುಂಬದವರು ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿನ ಪಿಎಸ್ಐ ಸೇರಿದಂತೆ ಮತ್ತು ಸಿಬ್ಬಂದಿ ವರ್ಗದವರಿಗೆ ರಾಖಿ ಕಟ್ಟಿ ಪರಸ್ಪರ ಹಸ್ತಲಾಘವ ಮಾಡುವುದರೊಂದಿಗೆ ಮಹಿಳಾ ಪೊಲೀಸ್ ಸಿಬ್ಬಂದಿಗೆ ಅರಿಶಿಣ ಕುಂಕುಮ ತಿಲಕವನ್ನಿಟ್ಟು ಬಾಗಿನದೊಂದಿಗೆ ಉಡಿತುಂಬಿ ಶುಭಹಾರೈಸಿದರು.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…