ಹಿಂದೂ ಧಾರ್ಮಿಕ ಕ್ಷೇತ್ರದ ಬಗ್ಗೆ ಷಡ್ಯಂತ್ರ ಮಾಡುವವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ – ಆದರ್ಶ ಗೋಖಲೆ

ಹಿಂದೂ ಧಾರ್ಮಿಕ ಕ್ಷೇತ್ರದ ಬಗ್ಗೆ ಷಡ್ಯಂತ್ರ ಮಾಡುವವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ – ಆದರ್ಶ ಗೋಖಲೆ

ಧಾರ್ಮಿಕ ಕ್ಷೇತ್ರಗಳ ವಿರುದ್ಧ ದಬ್ಬಾಳಿಕೆ ಶತ-ಶತಮಾನಗಳಿಂದಲ್ಲೂ ನಡೆಯುತ್ತ ಬಂದಿದ್ದು ಹಿಂದುಗಳು ಪೂಜಿಸುವ ಧಾರ್ಮಿಕ ಕ್ಷೇತ್ರಗಳ ಬಗ್ಗೆ ಷಡ್ಯಂತ್ರ ಮಾಡುವವರನ್ನು ಗಲ್ಲಿಗೇರಿಸಿದರೂ ತಪ್ಪಿಲ್ಲ ಎಂದು ಮಂಗಳೂರಿನ ಪ್ರಖ್ಯಾತ ಅಂಕಣ ಬರಹಗಾರರು ಮತ್ತು ಹಿಂದೂ ವಾಗ್ಮಿ ಆದರ್ಶ ಗೋಖಲೆ ಹೇಳಿದರು.

ಹೊಸನಗರದಲ್ಲಿ ಹಿಂದೂ ಮಹಾ ಧರ್ಮಸ್ಥಳ ಭಕ್ತಾಧಿಗಳು ವೇದಿಕೆಯಿಂದ ಕೊಟ್ಯಂತರ ಹಿಂದುಗಳ ಪವಿತ್ರ ಕ್ಷೇತ್ರ ಶ್ರೀಧರ್ಮಸ್ಥಳ ಮಂಜುನಾಥ ಸ್ವಾಮಿ ಪುಣ್ಯ ಸನ್ನಿಧಿಗೆ ಕಳಂಕ ತಂದಿರುವವರ ವಿರುದ್ಧ ಹೊಸನಗರದ ಗಂಗಾಧರೇಶ್ವರ ದೇವಸ್ಥಾನದಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಬಸ್ ನಿಲ್ದಾಣದ ಆವರಣದಲ್ಲಿ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿರುವುದು ಖಂಡನೀಯ. ಯಾರೇ ಅಪಪ್ರಚಾರ ಮಾಡಿದರೂ ಧರ್ಮಸ್ಥಳಕ್ಕೆ ವೀರೇಂದ್ರ ಹೆಗ್ಗಡೆಯವರಿಗೆ ಏನೂ ಹಾನಿ ಆಗುವುದಿಲ್ಲ ಆದರೆ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುವುದರಿಂದ ನಮ್ಮ ಧಾರ್ಮಿಕ ಭಾವನೆಗಳಿಗೆ ಘಾಸಿಯಾಗುತ್ತದೆ. ನಮ್ಮವರೇ ನಮ್ಮ ಧಾರ್ಮಿಕ ಕೇಂದ್ರದ ಬಗ್ಗೆ ಅಪಪ್ರಚಾರಕ್ಕೆ ಇಳಿದಿರುವುದು ದುರದುಷ್ಟಕರ ಸಂಗತಿ ಎಂದರು.

ಮಾಜಿ ಸಚಿವ ಹರತಾಳು ಹಾಲಪ್ಪ ಸಭೆಯಲ್ಲಿ ಮಾತನಾಡಿ, ಸರ್ಕಾರಕ್ಕೂ ಪ್ರಕರಣದಲ್ಲಿ ಜಿಜ್ಞಾಸೆ ಇದೆ. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮೊದಲು ಎಸ್.ಐ.ಟಿ ರಚನೆ ಬಗ್ಗೆ ಬಹುಮತ ವ್ಯಕ್ತಪಡಿಸಿದರು. ಸಚಿವ ಸಂಪುಟ ಸಭೆಯಲ್ಲಿ ಒಬ್ಬ ಸಚಿವ ವಿರೋಧ ವ್ಯಕ್ತಪಡಿಸಿದರೂ ಎಸ್.ಐ.ಟಿ ರಚನೆಯಾಗುತ್ತಿರಲಿಲ್ಲ. ಆ ಸಚಿವ ಸಂಪುಟ ಸಭೆಯಲ್ಲಿ ಸುಮ್ಮನಿದ್ದ ಡಿ.ಕೆ ಶಿವಕುಮಾರ್ ಈಗ ಧರ್ಮಸ್ಥಳಕ್ಕೆ ಜೈ ಎನ್ನುತ್ತಿರುವುದು ಯಕ್ಷ ಪ್ರಶ್ನೆಯಾಗಿದೆ. ಧರ್ಮಸ್ಥಳದಲ್ಲಿ ಧರ್ಮವನ್ನು ಉಳಿಸುವ ನಿಟ್ಟಿನಲ್ಲಿ ನಾವೆಲ್ಲರೂ ಸದಾ ಒಗ್ಗಟಾಗಿ ಇರಬೇಕು ಎಂತಹ ಹೋರಾಟಕ್ಕೂ ನಾವು ಬದ್ದರಿದ್ದೇವೆ ಎಂದರು.

ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್‌ ಮಾತನಾಡಿ, ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರನ್ನು ನಡೆದಾಡುವ ದೇವರು ಎಂದು ಸಮಸ್ತ ಹಿಂದೂ ಬಾಂಧವರು ನಂಬಿಕೊಂಡು ಬಂದಿದ್ದಾರೆ. ಧರ್ಮಸ್ಥಳದಲ್ಲಿರುವ ಮಂಜುನಾಥ ಸ್ವಾಮಿ ಹಾಗೂ ಅಣ್ಣಪ್ಪಸ್ವಾಮಿ ಸತ್ಯಕ್ಕೆ ಹೆಸರಿರುವ ದೇವರುಗಳು. ಈ ದೇವರುಗಳ ಬಗ್ಗೆ ಅಂತಹ ಪವಿತ್ರ ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುತ್ತಿರುವವರಿಗೆ ಸರ್ಕಾರ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನದಲ್ಲಿ ನಮ್ಮ ಸರ್ಕಾರದಿಂದ ಹಂತ-ಹಂತವಾಗಿ ಷಡ್ಯಂತ್ರ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಬಿಜೆಪಿ ಮಂಡಲದ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಮಾತನಾಡಿ, ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಹಾಗೂ ಪೂಜ್ಯ ವೀರೇಂದ್ರ ಹೆಗ್ಗಡೆಯವರ ಹೆಸರಿಗೆ ಕಳಂಕ ತರುತ್ತಿರುವವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು‌. ಪ್ರಕರಣದ ಹಿಂದಿರುವ ಶಕ್ತಿಗಳ ವಿರುದ್ಧ ಧರ್ಮಸ್ಥಳದಲ್ಲಿ ತೆಗೆದಿರುವ 17 ಗುಂಡಿಗಳಲ್ಲಿ ಗುಂಡಿಗೆ ಹಾಕಿ ಮುಚ್ಚಿ ಮತ್ತು ಸೂಕ್ತ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಕಕ್ಷ ಚಂದ್ರಮೌಳಿ ಮಾತನಾಡಿ, ಧರ್ಮಸ್ಥಳ ಕ್ಷೇತ್ರ ಹಿಂದುಗಳಿಗೆ ಪವಿತ್ರ ಕ್ಷೇತ್ರ ನಾವು ಮನೆಯಲ್ಲಿ ಮಡಿಕೆಯಲ್ಲಿ ಹಣ ಸೇರಿಸಿ ದೇವಸ್ಥಾನದ ಹುಂಡಿಗೆ ಹಾಕುತ್ತಿದ್ದೇವೆ. ಪ್ರತಿ ವರ್ಷ ಧರ್ಮಸ್ಥಳ ಕ್ಷೇತ್ರಕ್ಕೆ ಹೋಗಿ ಹರಕೆ ತೀರಿಸಿ ಬರುತ್ತಿದ್ದೇವೆ ಇದು ತಲ-ತಲಾಂತರದಿಂದಲ್ಲೂ ಹಿಂದುಗಳಿಗೆ ಪವಿತ್ರ ಕ್ಷೇತ್ರವಾಗಿದ್ದು ಇಂತಹ ಪವಿತ್ರ ಸ್ಥಳವನ್ನು ಆ ಪವಿತ್ರಗೊಳಿಸಿರುವುದು ಮನಸ್ಸಿಗೆ ಘಾಸಿಯಾಗಿದೆ. ಯಾವುದೇ ಭಾರತ ದೇಶದ ಪ್ರತಿಯೊಬ್ಬ ಹಿಂದುಗಳು ಹಿಂದುಗಳ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆಯಾದರೆ ಎಲ್ಲ ಹಿಂದುಗಳು ಎದ್ದು ನಿಂತು ಪ್ರತಿಭಟಿಸಬೇಕು. ನಮ್ಮ ಧಾರ್ಮಿಕ ಭಾವನೆಗಳನ್ನು ಉಳಿಸಿಕೊಳ್ಳಬೇಕು ಧರ್ಮ ಮತ್ತು ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆಯಾದಾಗ ಎಲ್ಲರು ಪಕ್ಷಭೇದ ಮರೆದು ಒಂದಾಗಿ ಹೋರಾಟ ಅನಿವಾರ್ಯ ಎಂದರು.

ಶ್ರೀ ಕ್ಷೇತ್ರದ ವಿರುದ್ಧದ ಅಪಪ್ರಚಾರಕ್ಕೆ ಎಲ್ಲ ಪಕ್ಷದ ಮುಖಂಡರು ಪ್ರತಿಭಟನಾ ಮೆರವಣಿಗೆಯಲ್ಲಿ ಆಕ್ರೋಶ ವ್ಯಕ್ತಪಡೆಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಎನ್.ಆರ್ ದೇವಾನಂದ್, ಜೆಡಿಎಸ್ ತಾಲೂಕು ಅಧ್ಯಕ್ಷ ವರ್ತೇಶ್, ಪಟ್ಟಣ ಪಂಚಾಯತಿ ಅಧ್ಯಕ್ಷ ನಾಗಪ್ಪ, ಸುಧೀಂದ್ರ ಪಂಡಿತ್, ಮೋಹನ್ ಶೆಟ್ಟಿ, ನಾರಾಯಣ ಕಾಮತ್, ವರ್ತಕರ ಸಂಘದ ಅಧ್ಯಕ್ಷ ವಿಜೇಂದ್ರ ಶೇಟ್, ಕೃಷ್ಣವೇಣಿ, ಹಾಲಗದ್ದೆ ಉಮೇಶ್, ಎನ್ ಶ್ರೀಧರ ಉಡುಪ, ನೇತ್ರಾ ಸುಬ್ರಾಯಭಟ್, ಎನ್ ಗಣೇಶ್, ಪ್ರವೀಣ್, ಸುರೇಶ ಸ್ವಾಮಿರಾವ್, ಆಲವಳ್ಳಿ ವೀರೇಶ್, ದೇವರಾಜ್, ಮಂಡಾನಿ ಮೋಹನ್, ಈಶ್ವರಪ್ಪ ಗೌಡ, ಮಿಲ್ ಈಶ್ವರಪ್ಪ ಗೌಡ, ಹೆಚ್ ಮಹಾಬಲ, ಗೌತಮ್ ಮುರುಳಿಧರ ಹತ್ವಾರ್, ಗೌತಮ್, ಕಟ್ಟೆ ಸುರೇಶ, ರಾಮಚಂದ್ರ ಹೆಗ್ಗಡೆ, ಸದಾಶಿವ ಶ್ರೇಷ್ಠಿ, ಎರಗಿ ಉಮೇಶ್, ಬಿ.ಜಿ ನಾಗರಾಜ್, ಎಂ.ಪಿ ಸುರೇಶ್, ಉಮೇಶ್ ಕಂಚುಗಾರ್, ಗಣಪತಿ ಪಂಡಿತ್, ಆರ್.ಟಿ ಗೋಪಾಲ್, ಸುಮತಿ ಪೂಜಾರಿ, ಆಟೋ ಚಾಲಕರ ಸಂಘದ ಸದಸ್ಯರು, ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

14 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

14 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

18 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

20 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

21 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago