ಶ್ರೀಗಂಧದ ತುಂಡು ಮಾರುತ್ತಿದ್ದ ಇಬ್ಬರ ಬಂಧನ
Two arrested for selling sandalwood
ಶಿವಮೊಗ್ಗ: ಶ್ರೀಗಂಧದ ಮರ ಕಡಿದು ಸಣ್ಣ ತುಂಡುಗಳನ್ನಾಗಿ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ದೊಡ್ಡಪೇಟೆ ಪೊಲೀಸರು ಅಶೋಕನಗರ ಚಾನಲ್ ಬಳಿ ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ೧೫ ಸಾವಿರ ರೂ.ಮೌಲ್ಯದ ೩ ಕೆ.ಜಿ ೫೨೦ ಗ್ರಾಂ ತೂಕದ ಶ್ರೀಗಂಧದ ಮರದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.
ಸಾದಿಕ್ ಬೇಗ್ (೪೬) ಮತ್ತು ನಿಜಾಮುದ್ದಿನ್ (೫೨) ಬಂಧಿತರು.
ಅಶೋಕ ನಗರ ಚಾನಲ್ ಬಳಿ ಆರೋಪಿಗಳು ಮರದ ತುಂಡುಗಳನ್ನು ಚೀಲದಲ್ಲಿ ಇಟ್ಟುಕೊಂಡಿರುವ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು.
ದಾಳಿ ನಡೆಸಿದ ಪೊಲೀಸರು ಚೀಲವನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ ಅದರಲ್ಲಿ ಶ್ರೀಗಂಧದ ತುಂಡುಗಳಿದ್ದವು. ವಿಚಾರಣೆ ಮಾಡಿದಾಗ ಶರಾವತಿ ನಗರದ ಖಾಲಿ ನಿವೇಶನದಲ್ಲಿದ್ದ ಶ್ರೀಗಂಧದ ಮರವನ್ನು ಕಡಿದು, ಸಣ್ಣ ತುಂಡುಗಳಾಗಿ ಕತ್ತರಿಸಿ ಮಾರಾಟ ಮಾಡುತ್ತಿದ್ದುದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two arrested for selling sandalwood
ಶಿವಮೊಗ್ಗ ಲೋಕಾಯುಕ್ತ ಎಸ್ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…
ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…
ಬೇಕರಿ ಉತ್ಪನ್ನಗಳ ತಯಾರಿಕೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ One-month skill development training on bakery product preparation…
ತೀರ್ಥಹಳ್ಳಿ ಪೊಲೀಸ್ ಠಾಣೆಯ ಗಣಪತಿ ವಿಸರ್ಜನೆ ; ಚಂಡೆ ಸದ್ದಿಗೆ ಡಿವೈಎಸ್ಪಿ ಭಾನುಪ್ರಕಾಶ್, ಸಿಪಿಐ ಇಮ್ರಾನ್ ಹೆಜ್ಜೆ Thirthahalli police…
ಕೋಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ : ಲಕ್ಷಾಂತರ ರೂ. ನಷ್ಟ House fire reported at Keelambi…
ಶಾಸಕರ ಜೊತೆ ಟ್ರಾಫಿಕ್ ಪೊಲೀಸರ ಡ್ಯಾನ್ಸ್; ವಿಡಿಯೋ ವೈರಲ್, ಇಬ್ಬರ ವರ್ಗಾವಣೆ Two traffic police personnel in Shivamogga…