ರಸ್ತೆ ಅಪಘಾತದಲ್ಲಿ ಮೃತಪಟ್ಟ ಯೋಧ ಪ್ರಜ್ವಲ್ ಅಂತ್ಯಕ್ರಿಯೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜಿಗಳೆಮನೆ ಗ್ರಾಮದಲ್ಲಿ ನೆರವೇರಿತು.
ಗುರುವಾರ ಚಾಮರಾಜನಗರದಲ್ಲಿ ಸಂಭವಿಸಿದ ಅಪಘಾತದಲ್ಲಿ ಅಗ್ನಿವೀರ್ ಯೋಧ ಪ್ರಜ್ವಲ್ ಮೃತಪಟ್ಟಿದ್ದರು. ಇಂದು ಅವರ ಹುಟ್ಟೂರು ಜಿಗಳೆಮನೆ ಗ್ರಾಮದಲ್ಲಿ ಸರ್ಕಾರಿ ಗೌರವದೊಂದಿಗೆ ಪ್ರಜ್ವಲ್ಗೆ ಅಂತಿಮ ನಮನ ಸಲ್ಲಿಸಲಾಯಿತು
ಅಗಲಿದ ಯೋಧನಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅಂತಿಮ ನಮನ ಸಲ್ಲಿಸಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಸಾಗರ ತಾಲೂಕು ಅಡಳಿತದ ವತಿಯಿಂದ ಸರ್ಕಾರಿ ಗೌರವ ಸಲ್ಲಿಸಲಾಯಿತು. ಪೊಲೀಸ್ ಸಿಬ್ಬಂದಿ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದರು, ತಹಶೀಲ್ದಾರ್ ರಶ್ಮೀ ಹಾಲೇಶ್ ಸೇರಿ ಹಲವರು ಉಪಸ್ಥಿತರಿದ್ದರು.
ಅಗ್ನಿವೀರ್ ಪ್ರಜ್ವಲ್ ಅವರ ಪಾರ್ಥೀವ ಶರೀರಕ್ಕೆ ಭಾರತೀಯ ಸೇನೆಯ ಯೋಧರು, ಮಾಜಿ ಸೈನಿಕರು ನಮನ ಸಲ್ಲಿಸಿದರು. ಹೂಗುಚ್ಛವನ್ನ ಇರಿಸಿ, ಸಲ್ಯೂಟ್ ಮಾಡಿ ಅಂತಿಮ ಗೌರವ ಸಲ್ಲಿಸಿದರು. ಇದೇ ವೇಳೆ ಪ್ರಜ್ವಲ್ ತಂದೆ ರಾಮಚಂದ್ರ ಮತ್ತು ತಾಯಿ ರಾಜೇಶ್ವರಿ ಅವರಿಗೆ ರಾಷ್ಟ್ರಧ್ವಜ ಹಸ್ತಾಂತರಿಸಲಾಯಿತು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…
ಆಗುಂಬೆಯಿಂದ ರಿಪ್ಪನ್ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…
ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…
ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…
ಸಾಗರ ಬಸ್ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…
ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…