ರಸ್ತೆ ಅಪಘಾತದಲ್ಲಿ ಮೃತಪಟ್ಟ ಯೋಧ ಪ್ರಜ್ವಲ್ ಅಂತ್ಯಕ್ರಿಯೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜಿಗಳೆಮನೆ ಗ್ರಾಮದಲ್ಲಿ ನೆರವೇರಿತು.
ಗುರುವಾರ ಚಾಮರಾಜನಗರದಲ್ಲಿ ಸಂಭವಿಸಿದ ಅಪಘಾತದಲ್ಲಿ ಅಗ್ನಿವೀರ್ ಯೋಧ ಪ್ರಜ್ವಲ್ ಮೃತಪಟ್ಟಿದ್ದರು. ಇಂದು ಅವರ ಹುಟ್ಟೂರು ಜಿಗಳೆಮನೆ ಗ್ರಾಮದಲ್ಲಿ ಸರ್ಕಾರಿ ಗೌರವದೊಂದಿಗೆ ಪ್ರಜ್ವಲ್ಗೆ ಅಂತಿಮ ನಮನ ಸಲ್ಲಿಸಲಾಯಿತು
ಅಗಲಿದ ಯೋಧನಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅಂತಿಮ ನಮನ ಸಲ್ಲಿಸಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಸಾಗರ ತಾಲೂಕು ಅಡಳಿತದ ವತಿಯಿಂದ ಸರ್ಕಾರಿ ಗೌರವ ಸಲ್ಲಿಸಲಾಯಿತು. ಪೊಲೀಸ್ ಸಿಬ್ಬಂದಿ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದರು, ತಹಶೀಲ್ದಾರ್ ರಶ್ಮೀ ಹಾಲೇಶ್ ಸೇರಿ ಹಲವರು ಉಪಸ್ಥಿತರಿದ್ದರು.
ಅಗ್ನಿವೀರ್ ಪ್ರಜ್ವಲ್ ಅವರ ಪಾರ್ಥೀವ ಶರೀರಕ್ಕೆ ಭಾರತೀಯ ಸೇನೆಯ ಯೋಧರು, ಮಾಜಿ ಸೈನಿಕರು ನಮನ ಸಲ್ಲಿಸಿದರು. ಹೂಗುಚ್ಛವನ್ನ ಇರಿಸಿ, ಸಲ್ಯೂಟ್ ಮಾಡಿ ಅಂತಿಮ ಗೌರವ ಸಲ್ಲಿಸಿದರು. ಇದೇ ವೇಳೆ ಪ್ರಜ್ವಲ್ ತಂದೆ ರಾಮಚಂದ್ರ ಮತ್ತು ತಾಯಿ ರಾಜೇಶ್ವರಿ ಅವರಿಗೆ ರಾಷ್ಟ್ರಧ್ವಜ ಹಸ್ತಾಂತರಿಸಲಾಯಿತು.
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್ನಲ್ಲಿ ಈಜಲು ತೆರಳಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…
ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…
ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…