ಶಿವಮೊಗ್ಗದ ಮೆಡಿಕಲ್ ಕಾಲೇಜಿನ ವೈದ್ಯೆ ಗೆ 1 ಕೋಟಿ 81 ಲಕ್ಷ  ರೂ ವಂಚನೆ

ಶಿವಮೊಗ್ಗದ ಮೆಡಿಕಲ್ ಕಾಲೇಜಿನ ವೈದ್ಯೆ ಗೆ 1 ಕೋಟಿ 81 ಲಕ್ಷ  ರೂ ವಂಚನೆ

ಶಿವಮೊಗ್ಗ : ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ ಕಾರ್ಯನಿರ್ವಹಿಸುವ  ವೈದ್ಯೆ ಗೆ  1 ಕೋಟಿ 81 ಲಕ್ಷದ 33 ಸಾವಿರದ 770 ರೂಗಳ ಮೋಸ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ ಕಾರ್ಯನಿರ್ವಹಿಸುವ ವೈದ್ಯೆ ಒಬ್ಬರಿಗೆ ಒಬ್ಬ ಅಪರಿಚಿತ ವ್ಯಕ್ತಿ ದಿನಾಂಕ 26/4 /2025 ರಂದು ಕರೆ ಮಾಡಿ ನಾವು ಬುಲ್ ಮಾರ್ಕೆಟ್  ಎಂಬ‌ ಕಂಪನಿ ನಡೆಸುತ್ತಿದ್ದು  ಸದರಿ ಕಂಪನಿಯ ವೆಬ್ಸೈಟ್  ನಲ್ಲಿ ಷೇರ್ ಮೂಲಕ ಇನ್ವೆಸ್ಟ್ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುತ್ತೇವೆ ಎಂದು ತಿಳಿಸುತ್ತಾನೆ.

ಇದನ್ನು ನಂಬಿದ ವೈದ್ಯೆ  ಅವರು ತಿಳಿಸಿದ ವೆಬ್ಸೈಟ್ ಗೆ    https://www.bullmarkets.com ನಲ್ಲಿ ವೈದ್ಯೆ ತನ್ನ ಹೆಸರಿನಲ್ಲಿ ಲಾಗಿನ್ ಆಗಿದ್ದರು.ನಂತರ ಅವರು ಟೆಲಿಗ್ರಾಂ ಆಪ್ ಮುಖಾಂತರ Bull markets app bot ಎಂಬ ಖಾತೆ ಮೂಲಕ ಅವರ ಟೆಲಿಗ್ರಾಂ ಖಾತೆಗೆ ಮೆಸೇಜ್ ಮಾಡಿ ಅವರು ಹೇಳಿದಂತೆ ಮೊದಲಿಗೆ 1090 ರೂಗಳನ್ನು ಹಾಗೂ 430 ರೂಗಳನ್ನು ಇನ್ವೆಸ್ಟ್ ಮಾಡಿದ್ದು ನಂತರ ಒಂದು ತಿಂಗಳ ನಂತರ Bull markets ಖಾತೆಯಲ್ಲಿ ಇವರು ಹಾಕಿದ ಇನ್ವೆಸ್ಟ್ಮೆಂಟಿಗೆ ಲಾಭಾಂಶ ಬಂದಿದೆ ನೋಡಿ ಎಂದು ತೋರಿಸುತ್ತಾರೆ. ನಂತರ ಅವರು ವಿವಿಧ ನಂಬರ್ ಗಳಿಂದ ಕರೆ ಮಾಡಿ ಹೆಚ್ಚಿನ ಹಣ ಇನ್ವೆಸ್ಟ್ ಮಾಡಿದರೆ ಹೆಚ್ಚಿನ ಲಾಭಾಂಶ ಬರುತ್ತದೆ ಎಂದು ನಂಬಿಸುತ್ತಾರೆ .ಅದನ್ನೇ ನಂಬಿದ ಇವರು ವಿವಿಧ ಹಂತಗಳಲ್ಲಿ ವಿವಿಧ ಖಾತೆಗಳಿಗೆ ಸುಮಾರು 1 ಕೋಟಿ 81,33,770 ರೂಗಳನ್ನು ಜಮಾ ಮಾಡಿದ್ದರು.

ಆದರೆ ಹೀಗೆ ಇಷ್ಟೆಲ್ಲಾ ಹಣ ಹಾಕಿದರು ಕೂಡ ಬುಲ್ ಮಾರ್ಕೆಟ್ಸ್್ ನಲ್ಲಿ ಹಣ ವಿತ್ ಡ್ರಾ ಮಾಡಲು  50,000 ರೂಗಳನ್ನು  ಪಾವತಿಸುವಂತೆ ತಿಳಿಸಿದ್ದರು.ತ್ಳ ಇದರಿಂದ ಅನುಮಾನ ಗೊಂಡ ವೈದ್ಯೆ ತನ್ನ ಸ್ನೇಹಿತರಿಗೆ ವಿಚಾರ ತಿಳಿಸಿದ್ದರು. ಇದರಿಂದ ಎಚ್ಚೆತ್ತುಕೊಂಡ ಅವರ ಸ್ನೇಹಿತರು ನಿನಗೆ ಮೋಸವಾಗಿದೆ. ಹಣ ಹಾಕಿಸಿಕೊಂಡು ಮೋಸ ಮಾಡಿದ್ದಾರೆ . ಈ ಬಗ್ಗೆ ಕೂಡಲೇ ಪೊಲೀಸ್ ಠಾಣೆಗೆ ಹೋಗಿ ದೂರು ನೀಡು ಎಂದು ಹೇಳಿದ್ದರು.

ಎಚ್ಚೆತ್ತುಕೊಂಡ ವೈದ್ಯೆ ಸದರಿ ನಂಬರ್ ಗಳು ಹಾಗೂ ಅಕೌಂಟಿಗೆ ಹಾಕಿದ ಹಣದ ಡೀಟೇಲ್ಸ್ ಇಟ್ಟುಕೊಂಡು ಪೊಲೀಸ್ ಠಾಣೆಗೆ ತನ್ನ ಹಣ ಹಿಂದಿರುಗಿಸಿ ಕೊಡುವಂತೆ ದೂರು ನೀಡಿದ್ದಾರೆ. ಸದರಿ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

11 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

12 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

15 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

17 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

18 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago