HUMCHA | ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ 12 ಸದಸ್ಯರು ಅವಿರೋಧ ಆಯ್ಕೆ
ಹುಂಚ : ಸದಾ ಒಂದಿಲ್ಲೊಂದು ವಿವಾದಗಳಿಂದ ಹೊಸನಗರ ತಾಲ್ಲೂಕಿನ ಬಹು ವಿವಾದಿತ ಸೊಸೈಟಿ ಎಂಬ ಹೆಸರಾಗಿರುವ ಹುಂಚಾ ವ್ಯವಸಾಯ ಸಹಕಾರ ನಿಯಮಿತದ ಚುನಾವಣೆಯಲ್ಲಿ ಎಲ್ಲಾ 12 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ಸ್ಪರ್ಧೆ ನಡೆಯದೆ, 12 ಸ್ಥಾನಗಳಿಗೆ ಅವಿರೋಧವಾಗಿ ಸದಸ್ಯರನ್ನು ಆಯ್ಕೆ ಮಾಡಲಾಗಿದೆ.
ಐದು ವರ್ಷಗಳ ಅವಧಿಗೆ ಆಯ್ಕೆಯಾಗಬೇಕಿದ್ದ ಈ ಚುನಾವಣೆಗೆ ಸೆಪ್ಟೆಂಬರ್ 7ರಂದು ಮತದಾನ ನಡೆಯಬೇಕಿತ್ತು. ಆದರೆ ನಾಮಪತ್ರ ಹಿಂಪಡೆಯುವ ಅಂತಿಮ ದಿನವಾದ ಸೆಪ್ಟೆಂಬರ್ 1ರ ವೇಳೆಗೆ ಅಗತ್ಯಕ್ಕಿಂತ ಹೆಚ್ಚು ಸ್ಪರ್ಧಾರ್ಥಿಗಳು ಕಣದಲ್ಲಿರದ ಕಾರಣ, ಚುನಾವಣಾಧಿಕಾರಿಗಳು ಸೋಮವಾರವೇ ಫಲಿತಾಂಶವನ್ನು ಘೋಷಿಸಿದರು.
ಹಿಂದುಳಿದ ವರ್ಗ, ಪರಿಶಿಷ್ಟ ವರ್ಗ, ಮಹಿಳಾ ಹಾಗೂ ಸಾಮಾನ್ಯ ಕ್ಷೇತ್ರಗಳನ್ನು ಒಳಗೊಂಡಂತೆ 12 ಸ್ಥಾನಗಳಿಗೆ ಕೆ.ಟಿ. ಕುಮಾರ, ಎಚ್.ಎಸ್. ಗಿರೀಶ್, ಎಚ್.ಎನ್. ಮಂಜುನಾಥ್, ಕೆ.ಆರ್. ಸಂಜಯ್, ಎಸ್. ರಾಜಮೂರ್ತಿ, ನರೇಂದ್ರ ನಾಯಕ, ಎನ್.ಸಿ. ಕೇಶವಮೂರ್ತಿ, ಯೋಮಕೇಶಪ್ಪ, ಚಂದ್ರಮ್ಮ, ರೇವತಿ ಹಾಗೂ ಜಿ.ಎನ್. ರಾಘವೇಂದ್ರ ನಾಯಕ್ ಅವಿರೋಧವಾಗಿ ಆಯ್ಕೆಯಾದರು.
ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಎಂ.ಎಂ. ಪರಮೇಶ್ರ ನೇತೃತ್ವದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಹೊಂದಾಣಿಕೆಯ ಪರಿಣಾಮವಾಗಿ 9 ಸ್ಥಾನಗಳನ್ನು ಕಾಂಗ್ರೆಸ್ ಹಾಗೂ 3 ಸ್ಥಾನಗಳನ್ನು ಬಿಜೆಪಿ ಬೆಂಬಲಿತರು ಪಡೆದುಕೊಂಡಿದ್ದಾರೆ.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…