HUMCHA | ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ 12 ಸದಸ್ಯರು ಅವಿರೋಧ ಆಯ್ಕೆ
ಹುಂಚ : ಸದಾ ಒಂದಿಲ್ಲೊಂದು ವಿವಾದಗಳಿಂದ ಹೊಸನಗರ ತಾಲ್ಲೂಕಿನ ಬಹು ವಿವಾದಿತ ಸೊಸೈಟಿ ಎಂಬ ಹೆಸರಾಗಿರುವ ಹುಂಚಾ ವ್ಯವಸಾಯ ಸಹಕಾರ ನಿಯಮಿತದ ಚುನಾವಣೆಯಲ್ಲಿ ಎಲ್ಲಾ 12 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ಸ್ಪರ್ಧೆ ನಡೆಯದೆ, 12 ಸ್ಥಾನಗಳಿಗೆ ಅವಿರೋಧವಾಗಿ ಸದಸ್ಯರನ್ನು ಆಯ್ಕೆ ಮಾಡಲಾಗಿದೆ.
ಐದು ವರ್ಷಗಳ ಅವಧಿಗೆ ಆಯ್ಕೆಯಾಗಬೇಕಿದ್ದ ಈ ಚುನಾವಣೆಗೆ ಸೆಪ್ಟೆಂಬರ್ 7ರಂದು ಮತದಾನ ನಡೆಯಬೇಕಿತ್ತು. ಆದರೆ ನಾಮಪತ್ರ ಹಿಂಪಡೆಯುವ ಅಂತಿಮ ದಿನವಾದ ಸೆಪ್ಟೆಂಬರ್ 1ರ ವೇಳೆಗೆ ಅಗತ್ಯಕ್ಕಿಂತ ಹೆಚ್ಚು ಸ್ಪರ್ಧಾರ್ಥಿಗಳು ಕಣದಲ್ಲಿರದ ಕಾರಣ, ಚುನಾವಣಾಧಿಕಾರಿಗಳು ಸೋಮವಾರವೇ ಫಲಿತಾಂಶವನ್ನು ಘೋಷಿಸಿದರು.
ಹಿಂದುಳಿದ ವರ್ಗ, ಪರಿಶಿಷ್ಟ ವರ್ಗ, ಮಹಿಳಾ ಹಾಗೂ ಸಾಮಾನ್ಯ ಕ್ಷೇತ್ರಗಳನ್ನು ಒಳಗೊಂಡಂತೆ 12 ಸ್ಥಾನಗಳಿಗೆ ಕೆ.ಟಿ. ಕುಮಾರ, ಎಚ್.ಎಸ್. ಗಿರೀಶ್, ಎಚ್.ಎನ್. ಮಂಜುನಾಥ್, ಕೆ.ಆರ್. ಸಂಜಯ್, ಎಸ್. ರಾಜಮೂರ್ತಿ, ನರೇಂದ್ರ ನಾಯಕ, ಎನ್.ಸಿ. ಕೇಶವಮೂರ್ತಿ, ಯೋಮಕೇಶಪ್ಪ, ಚಂದ್ರಮ್ಮ, ರೇವತಿ ಹಾಗೂ ಜಿ.ಎನ್. ರಾಘವೇಂದ್ರ ನಾಯಕ್ ಅವಿರೋಧವಾಗಿ ಆಯ್ಕೆಯಾದರು.
ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಎಂ.ಎಂ. ಪರಮೇಶ್ರ ನೇತೃತ್ವದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಹೊಂದಾಣಿಕೆಯ ಪರಿಣಾಮವಾಗಿ 9 ಸ್ಥಾನಗಳನ್ನು ಕಾಂಗ್ರೆಸ್ ಹಾಗೂ 3 ಸ್ಥಾನಗಳನ್ನು ಬಿಜೆಪಿ ಬೆಂಬಲಿತರು ಪಡೆದುಕೊಂಡಿದ್ದಾರೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…