ಆಗುಂಬೆ ಘಾಟ್ ರಸ್ತೆ ಮತ್ತೆ ಸ್ಥಗಿತ – ಧರೆ ಕುಸಿದು ಮರ ಬಿದ್ದು ಸಂಚಾರ ತಡೆ
ತೀರ್ಥಹಳ್ಳಿ : ಮಲೆನಾಡಿನ ಜೀವನಾಡಿಯಾದ ಆಗುಂಬೆ ಘಾಟ್ ರಸ್ತೆ ಮತ್ತೆ ಪ್ರಕೃತಿಯ ಕೋಪಕ್ಕೆ ತುತ್ತಾಗಿದೆ. ಐದನೇ ತಿರುವಿನ ಬಳಿ ಧರೆ ಕುಸಿದು, ದೊಡ್ಡ ಮರ ರಸ್ತೆ ಮಧ್ಯೆ ಬಿದ್ದ ಪರಿಣಾಮ ಸಂಜೆ ವೇಳೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಪ್ರಯಾಣಿಕರು ಭಾರೀ ತೊಂದರೆಗೆ ಒಳಗಾಗಿದ್ದಾರೆ.
ಮರ ಬಿದ್ದುದರಿಂದ ರಸ್ತೆ ಸಂಪೂರ್ಣ ಮುಚ್ಚಿಕೊಂಡಿದ್ದು, ತೆರವು ಕಾರ್ಯ ಕೂಡಾ ಗೊಂದಲಮಯವಾಗಿದೆ. ಸ್ಥಳೀಯರ ಪ್ರಕಾರ ಬೆಳಗಿನವರೆಗೆ ಸಂಚಾರ ಸುಗಮವಾಗುವ ಸಾಧ್ಯತೆ ಕಡಿಮೆ. ಕಲ್ಲುಮಣ್ಣು ಹಾಗೂ ದೊಡ್ಡ ಮರಗಳು ರಸ್ತೆಯಲ್ಲೇ ಅಡ್ಡವಾಗಿ ಬಿದ್ದಿರುವುದರಿಂದ ಕಾರ್ಯಾಚರಣೆ ವಿಳಂಬವಾಗಿದೆ.
ಆಗುಂಬೆ ಘಾಟ್ ಮಲೆನಾಡು ಹಾಗೂ ಕರಾವಳಿ ಭಾಗಗಳನ್ನು ಸಂಪರ್ಕಿಸುವ ಪ್ರಮುಖ ದಾರಿಯಾಗಿದ್ದು, ಪ್ರತಿದಿನ ನೂರಾರು ವಾಹನಗಳು ಸಂಚರಿಸುತ್ತವೆ. ಆದರೆ ಸಂಚಾರ ಸ್ಥಗಿತಗೊಂಡಿರುವುದರಿಂದ ಪ್ರಯಾಣಿಕರು ಪರ್ಯಾಯ ಮಾರ್ಗಗಳನ್ನು ಬಳಸಬೇಕಾದ ಅನಿವಾರ್ಯತೆ ಎದುರಾಗಿದೆ.
ಪ್ರತಿ ಮಳೆಗಾಲದಲ್ಲೂ ಆಗುಂಬೆ ಘಾಟ್ನಲ್ಲಿ ಧರೆ ಕುಸಿತ ಮತ್ತು ಮರ ಬಿದ್ದ ಘಟನೆಗಳು ಸಾಮಾನ್ಯವಾಗಿಬಿಟ್ಟಿದ್ದು, ಹಲವಾರು ಬಾರಿ ರಸ್ತೆ ಬ್ಲಾಕ್ ಆಗಿರುವುದರಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…