ರಿಪ್ಪನ್ಪೇಟೆಯಲ್ಲಿ ಅಷ್ಟಲಕ್ಷ್ಮಿ ಹವನ – ನವರಾತ್ರಿ ಧಾರ್ಮಿಕ ವೈಭವ
ರಿಪ್ಪನ್ಪೇಟೆ: ಪಟ್ಟಣದ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಶ್ರೀರಾಮ ಮಂದಿರದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ನವರಾತ್ರಿ ಪ್ರಯುಕ್ತ ಅಷ್ಟಲಕ್ಷ್ಮಿ ಹವನವನ್ನು ಆಯೋಜಿಸಲಾಯಿತು. ಜಿ.ಎಸ್.ಬಿ ಸಮಾಜದ ಅನೇಕ ಬಂಧುಗಳು ಭಾಗವಹಿಸಿ ಭಕ್ತಿಪೂರ್ಣವಾಗಿ ಕಾರ್ಯಕ್ರಮವನ್ನು ನೆರವೇರಿಸಿದರು.
ನವರಾತ್ರಿಯ ಸಂದರ್ಭದಲ್ಲಿ ‘ಅಖಂಡ ದೀಪಪ್ರಜ್ವಲನೆ’ ಅಂದರೆ ಒಂಭತ್ತು ದಿನಗಳ ಕಾಲ ನಿರಂತರವಾಗಿ ದೀಪವನ್ನು ಬೆಳಗಿಸುವುದು, ಶ್ರೀ ದೇವಿಯ ಮಹಾತ್ಮೆಯ ಪಠಣ (ಚಂಡೀಪಾಠ), ಸಪ್ತಶತೀ ಪಾಠ, ದೇವಿಭಾಗವತ, ಬ್ರಹ್ಮಾಂಡಪುರಾಣದಲ್ಲಿನ ಲಲಿತೋಪಾಖ್ಯಾನ ಪಾರಾಯಣ, ಲಲಿತಾಪೂಜೆ, ಸರಸ್ವತಿಪೂಜೆ, ಉಪವಾಸ, ಜಾಗರಣೆ ಮುಂತಾದ ವೈವಿಧ್ಯಮಯ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವ ಸಂಪ್ರದಾಯವನ್ನು ಸಮಾಜವು ಪಾಲಿಸುತ್ತಿದೆ.
ಈ ವರ್ಷದ ಮಹೋತ್ಸವದಲ್ಲಿಯೂ ಅಷ್ಟಲಕ್ಷ್ಮಿ ಹವನವನ್ನು ನೆರವೇರಿಸಿ, ಇಡೀ ಸಮಾಜದಲ್ಲಿ ಸುಖ-ಶಾಂತಿ, ನೆಮ್ಮದಿ ಮತ್ತು ಅಷ್ಟೈಶ್ವರ್ಯಗಳ ಪ್ರಾಪ್ತಿಗಾಗಿ ಸಮೂಹ ಪ್ರಾರ್ಥನೆ ಸಲ್ಲಿಸಲಾಯಿತು.
ಹವನದ ಪೌರೋಹಿತ್ಯವನ್ನು ವೇದಮೂರ್ತಿ ಸುದರ್ಶನ್ ಭಟ್ ಮತ್ತು ಗಣೇಶ್ ಭಟ್ ವಹಿಸಿದ್ದರು. ಈ ಸಂದರ್ಭದಲ್ಲಿ ಸಮಾಜದ ಅಧ್ಯಕ್ಷರಾದ ಗಣೇಶ್ ಕಾಮತ್, ಹರೀಶ್ ಪ್ರಭು, ಜೆ. ರಾಧಾಕೃಷ್ಣ ರಾವ್, ಹರೀಶ್ ಸರಾಫ್, ಡಿ. ನರಸಿಂಹ ಕಾಮತ್, ದೀಪಕ್ ಭಗತ್, ಹಿರಿಯರಾದ ಮಂಜುನಾಥ್ ಕಾಮತ್, ರಾಮದಾಸ್ ನಾಯಕ್ ಮತ್ತಿತರರು ಹಾಜರಿದ್ದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್