ಶಿವಮೊಗ್ಗ:ಸಾಗರ ರಸ್ತೆಯ ಮಲ್ನಾಡು ಗೇಟ್ ವೇ ಬಳಿ ಪುಟ್ಬಾತ್ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದವರ ಮೇಲೆ ಬೈಕ್ ಹರಿದು ಬೈಕ್ ಸವಾರ ಹಾಗೂ ಟೆಂಟ್ ನಲ್ಲಿ ವಾಸವಾಗಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಇಂದು ನಸುಕಿನಲ್ಲಿ ಸಂಭವಿಸಿದೆ.
ಫುಟ್ ಪಾತ್ ಮೇಲೆ ಪ್ಲಾಸ್ಟಿಕ್ ವಸ್ತುಗಳನ್ನು ವ್ಯಾಪಾರ ಮಾಡಿಕೊಂಡಿದ್ದ ದುರ್ಗಾ ಪ್ರಸಾದ್ ಎಂಬುವರು ಟೆಂಟ್ ಹಾಕಿಕೊಂಡು ನಾಲ್ಕು ವರ್ಷದಿಂದ ಕುಟುಂಬದ ಜೊಯೆ ಅಲ್ಲೇ ವಾಸವಾಗಿದ್ದರು.
ಆಯನೂರು ಗೇಟಿ್ ಕಡೆಯಿಂದ ಕೆ 14 ಈ ವೈ 1306 ಕ್ರಮ ಸಂಖ್ಯೆಯ ಮೋಟಾರ್ ಬೈಕ್ ನಲ್ಲಿ ಬಂದ ಮೂವರು ಫುಟ್ಪಾತ್ ನಲ್ಲಿದ್ದ ಟೆಂಟ್ ಗೆ ಡಿಕ್ಕಿ ಹೊಡೆದಿದ್ದಾರೆ . ಟೆಂಟ್ ನಲ್ಲಿ ದುರ್ಗಾ ಪ್ರಸಾದ್ ಅವರ ತಂದೆ ನಾಗಯ್ಯ, ತಾಯಿ ಕಾಮೇಶ್ವರಿ ಹಾಗೂ ತಂಗಿ ಜ್ಯೋತಿ ಎ ಇದ್ದರು . ಕಾಮೇಶ್ವರಿ ಸ್ಥಳದಲ್ಲೇ ಸಾವಿಗೀಡಾದರು.
ದುರ್ಗಾ ಪ್ರಸಾದ ಮೂತ್ರ ವಿಸರ್ಜನೆಗೆಂದು ಬೆಳಗಿನ ಜಾವ ಐದು ಇಪ್ಪತ್ತಕ್ಕೆ ಟೆಂಟ್ ನಿಂದ ಹೊರ ಬಂದಾಗ ಈ ಘಟನೆ ನಡೆದಿದ್ದು ಅವರು ಪಾರಾಗಿದ್ದಾರೆ.
ಬೈಕ್ ಅನ್ನು ಸುದರ್ಶನ್ ಎನ್ನುವರು ಚಲಾಯಿಸುತ್ತಿದ್ದು ಆತನ ಹಿಂದೆ ಆಕಾಶ ಎಂಬವನು ಕುಳಿತಿದ್ದನು ಆಕಾಶನಿಗೆ ತೀವ್ರವಾಗಿ ಗಾಯಗಳಾಗಿದ್ದು ಆತನನ್ನು ಮೆಗನ್ ಆಸ್ಪತ್ರೆಗೆ ಆಂಬುಲೆನ್ಸ್ ನಲ್ಲಿ ಸಾಗಿಸುವಾಗ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ತಲೆಗೆ ಹೊಡೆತ ಬಿದ್ದಿದ್ದ ಕಾಮೇಶ್ವರಿ ರವರು ಸಾವನ್ನಪ್ಪಿರುವುದಾಗಿ ಮೂಲಗಳು ದೃಢಪಡಿಸಿವೆ. ಪ್ರಕರಣ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್