SHIVAMOGGA | ವೈದ್ಯೆಯ ವಾಟ್ಸಪ್ ಹ್ಯಾಕ್ ಮಾಡಿ ಹಣ ವಂಚನೆ
ಶಿವಮೊಗ್ಗ: ವೈದ್ಯೆಯೊಬ್ಬರ ವಾಟ್ಸಪ್ ಹ್ಯಾಕ್ ಮಾಡಿ ವೈದ್ಯರೊಬ್ಬರ ಮೊಬೈಲ್ಗೆ ಮೆಸೇಜ್ ಕಳುಹಿಸಿ ೯೫,೦೦೦ ಹಣ ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಸಿ.ಇ.ಎನ್. ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.
ಶಿವಮೊಗ್ಗದ ವೈದ್ಯೆಯೊಬ್ಬರ ವಾಟ್ಸಪ್ ನಂಬರ್ ಹ್ಯಾಕ್ ಮಾಡಿದ ದುಷ್ಕರ್ಮಿಗಳು ಹಣದ ತುರ್ತು ಅಗತ್ಯವಿದೆ ಎಂದು ಸಹೋದ್ಯೋಗಿಗೆ ಮೆಸೇಜ್ ಕಳುಹಿಸಿದ್ದರು. ಅದನ್ನು ನಂಬಿದ ಸಹೋದ್ಯೋಗಿ ಆ ವಾಟ್ಸಪ್ ಮೆಸೇಜ್ನಲ್ಲಿ ಕಳುಹಿಸಲಾಗಿದ್ದ ಮತ್ತೊಂದು ಮೊಬೈಲ್ ನಂಬರ್ಗೆ ಫೋನ್ ಪೇ ಮೂಲಕ ಎರಡು ಬಾರಿ ಒಟ್ಟು ೯೫,೦೦೦ ಹಣ ವರ್ಗಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಸ್ವಲ್ಪ ಸಮಯದ ಬಳಿಕ ಇತರೆ ವೈದ್ಯರು ವೈದ್ಯೆಯ ವಾಟ್ಸಪ್ ನಂಬರ್ ಹ್ಯಾಕ್ ಆಗಿರುವ ವಿಷಯ ತಿಳಿಸಿದ್ದಾರೆ. ಹಣ ಕಳೆದುಕೊಂಡಿರುವ ಹಿನ್ನೆಲೆ ಸಹೋದ್ಯೋಗಿ ವೈದ್ಯ ಶಿವಮೊಗ್ಗದ ಸಿ.ಇ.ಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್