ಆನಂದಪುರದಲ್ಲಿ ದಸರಾ ಕವಿಗೋಷ್ಠಿ – ಕಾವ್ಯವೇ ಮಾನವ ಸಂಬಂಧಗಳ ಸೇತುವೆ

ಆನಂದಪುರದಲ್ಲಿ ದಸರಾ ಕವಿಗೋಷ್ಠಿ – ಕಾವ್ಯವೇ ಮಾನವ ಸಂಬಂಧಗಳ ಸೇತುವೆ

ಆನಂದಪುರ: “ಕಾವ್ಯಗಳ ಮೂಲಕವೇ ಮಾನವ ಸಂಬಂಧಗಳನ್ನು ಹೆಚ್ಚಿಸಬಹುದು. ಮಾತುಗಳಲ್ಲಿ ಹೇಳಲಾಗದ ವಿಚಾರಗಳನ್ನು ಕಾವ್ಯದ ಮೂಲಕ ವ್ಯಕ್ತಪಡಿಸಲು ಸಾಧ್ಯ,” ಎಂದು ಹಿರಿಯ ಪತ್ರಕರ್ತ ಜಗನ್ನಾಥ್ ಆರ್. ಅಭಿಪ್ರಾಯಪಟ್ಟರು.

ಇಲ್ಲಿನ ರಂಗನಾಥ ದೇವಾಲಯದ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ಜಾನಪದ ಪರಿಷತ್ತು, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಪತ್ರಿಕಾ ಬಳಗ ಮತ್ತು ಇತಿಹಾಸ ಪರಂಪರೆ ಉಳಿಸಿ ಅಭಿಯಾನ ಟ್ರಸ್ಟ್‌ಗಳ ಸಂಯುಕ್ತ ಆಶ್ರಯದಲ್ಲಿ ನಡೆದ ದಸರಾ ಕವಿಗೋಷ್ಠಿ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಸರ್ವಾಧ್ಯಕ್ಷರಾಗಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಸಾಕಷ್ಟು ಕಲಾವಿದರು ಹಾಗೂ ಬರಹಗಾರರು ಇದ್ದು, ಅವರಿಗೆ ವೇದಿಕೆ ನೀಡುವುದು ಸಾಹಿತ್ಯ ಸಂಸ್ಕೃತಿಗೆ ಅಗತ್ಯವೆಂದು ಅವರು ಹೇಳಿದರು.

ಕಸಾಪ ತಾಲ್ಲೂಕು ಅಧ್ಯಕ್ಷ ವಿ.ಟಿ. ಸ್ವಾಮಿ ಮಾತನಾಡಿ, ಕನ್ನಡ ಕಾವ್ಯ ಪರಂಪರೆಗೆ ಪ್ರಾಚೀನ ಇತಿಹಾಸವಿದೆ ಎಂದು ನೆನಪಿಸಿದರು. ಮನೆಮನೆಗಳಲ್ಲಿ ಕಾವ್ಯ ಚಿಂತನೆಯಿದ್ದರೆ ಮಾತ್ರ ಮಾನವೀಯ ಸಂಬಂಧಗಳು ಗಟ್ಟಿಯಾಗುತ್ತವೆ. ಪ್ರತಿಯೊಂದು ಮನೆಯಲ್ಲಿ ಗ್ರಂಥಾಲಯ ನಿರ್ಮಿಸಿದರೆ ಓದುವ ಹವ್ಯಾಸ ಹೆಚ್ಚುತ್ತದೆ. ಮಕ್ಕಳಲ್ಲಿ ಸಾಹಿತ್ಯ–ಸಾಂಸ್ಕೃತಿಕ ಮನಸ್ಸು ಬೆಳೆಸುವುದರಿಂದ ಮೌಲ್ಯಾಧಾರಿತ ಸಮಾಜ ನಿರ್ಮಾಣ ಸಾಧ್ಯ ಎಂದರು.

ಚಂಪಕ ಸರಸು – 400 ವರ್ಷೋತ್ಸವ

ಚಂಪಕ ಸರಸು ಮಹಂತಿನ ಮಠಕ್ಕೆ 400 ವರ್ಷ ತುಂಬಿದ ಹಿನ್ನೆಲೆಯಲ್ಲಿ ವರ್ಷಪೂರ್ತಿ ಕಾರ್ಯಕ್ರಮಗಳನ್ನು ಆಯೋಜಿಸಲು ಆಚಾಪುರ ಗ್ರಾಪಂ ಅಧ್ಯಕ್ಷ ಕಲೀಮುಲ್ಲ ಅವರು ಚಾಲನೆ ನೀಡಿದರು. ಈ ಮಾಹಿತಿಯನ್ನು ಕಸಾಪ ಆನಂದಪುರ ಹೋಬಳಿ ಘಟಕದ ಅಧ್ಯಕ್ಷ ಬಿ.ಡಿ. ರವಿಕುಮಾರ್ ಅವರಿಗೆ ಹಸ್ತಾಂತರಿಸಿದರು. “ಇತಿಹಾಸವನ್ನು ಉಳಿಸಿ ಬೆಳೆಸುವುದು ಮುಂದಿನ ಪೀಳಿಗೆಗೆ ಹೊಣೆ. ಆನಂದಪುರದ ಚಂಪಕ ಸರಸು ಈಗ ಜನಪ್ರಿಯ ಪ್ರವಾಸಿ ತಾಣವಾಗಿ ಪರಿಣಮಿಸಿದೆ,” ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬಿ.ಡಿ. ರವಿಕುಮಾರ್ ಮಾತನಾಡಿ, “ನಮ್ಮ ಸುತ್ತಮುತ್ತಲಿನ ಸಾಹಿತ್ಯ–ಸಾಂಸ್ಕೃತಿಕ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ವೇದಿಕೆ ನೀಡುವ ಕೆಲಸ ಮುಂದುವರಿಯಲಿದೆ. ಚಂಪಕ ಸರಸು 400 ವರ್ಷೋತ್ಸವವನ್ನು ವಿಶೇಷವಾಗಿ ಆಚರಿಸಲಾಗುವುದು,” ಎಂದರು.

ಈ ಸಂದರ್ಭದಲ್ಲಿ ಸಾಧಕ ನಾಗರಾಜ್ ಎಂ. ಅವರಿಗೆ ಸನ್ಮಾನ ನೆರವೇರಿಸಲಾಯಿತು.

ಕವಿಗೋಷ್ಠಿಯಲ್ಲಿ ಧರ್ಮರಾಜ್ ಸಾಗರ್, ಹನೀಫ್, ಮಾನಸ, ಅನು, ಇಂಪನ, ಮಂಜುನಾಥ, ಇಂಚರ, ಮಾನ್ವಿ, ಸೌಜನ್ಯ ಎಸ್. ಮೊದಲಾದವರು ತಮ್ಮ ಸ್ವರಚಿತ ಕವನಗಳನ್ನು ವಾಚಿಸಿದರು.

ಅಗಲಿದ ಹಿರಿಯ ಸಾಹಿತಿ ಡಾ. ಎಸ್.ಎಲ್. ಬೈರಪ್ಪ ಅವರಿಗೆ ನುಡಿನಮನ ಸಲ್ಲಿಸಲಾಯಿತು.

ವೇದಿಕೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಎಸ್ ಪಿ ಪ್ರವೀಣ್, ಗ್ರಾಪಂ ಸದಸ್ಯ ಗಜೇಂದ್ರ, ಸಾಮಾಜಿಕ ಕಾರ್ಯಕರ್ತ ರಮಾನಂದ ಸಾಗರ್, ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಗಣಪತಿ ಯಡೇಹಳ್ಳಿ, ಮಕ್ಕಳ ಕವಿಗೋಷ್ಠಿ ಅಧ್ಯಕ್ಷೆ ರಚನಾ, ಪತ್ರಕರ್ತ ಅಮಿತ್ ಆರ್. ಮೊದಲಾದವರು ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

16 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

17 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

21 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

23 hours ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

23 hours ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago