ರಿಪ್ಪನ್‌ಪೇಟೆ | ಗ್ರಾಮ ಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಕಾಂಗ್ರೆಸ್ ಸೇರ್ಪಡೆ – ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ

ರಿಪ್ಪನ್‌ಪೇಟೆ | ಗ್ರಾಮಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಕಾಂಗ್ರೆಸ್ ಸೇರ್ಪಡೆ – ಶಾಸಕ ಬೇಳೂರು ಸಮ್ಮುಖದಲ್ಲಿ ಸೇರ್ಪಡೆ

ರಿಪ್ಪನ್‌ಪೇಟೆ : ಪಟ್ಟಣದ ಸ್ಥಳೀಯ ರಾಜಕೀಯದಲ್ಲಿ ಗಮನ ಸೆಳೆಯುವಂತಹ ಬೆಳವಣಿಗೆಯೊಂದರಲ್ಲಿ ರಿಪ್ಪನ್‌ಪೇಟೆ ಗ್ರಾಮಪಂಚಾಯತ್ ಸದಸ್ಯ ನಿರೂಪ್ ಕುಮಾರ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕರ್ನಾಟಕ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಗೃಹ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಕಾಂಗ್ರೆಸ್ ಧ್ವಜವನ್ನು ಹಿಡಿದು ಪಕ್ಷದ ಸದಸ್ಯತ್ವ ಪಡೆದರು.

ನಿರೂಪ್ ಕುಮಾರ್ ಅವರು ರಾಜಕೀಯ ಜೀವನವನ್ನು ಭಾರತೀಯ ಜನತಾ ಪಕ್ಷದ ಯುವಮೋರ್ಚಾ ಘಟಕದ ಮೂಲಕ ಪ್ರಾರಂಭಿಸಿದ್ದರು.ಹೊಸನಗರ ತಾಲೂಕ್ ಯುವ ಮೋರ್ಚಾ ಕಾರ್ಯದರ್ಶಿಯಾಗಿ ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಂಘಟನಾ ಚತುರನಾಗಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಆದರೆ ಬದಲಾದ ರಾಜಕೀಯ ಸ್ಥಿತ್ಯಂತರ ನಡುವೆ ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಜ್ಯದ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ಕಾರ್ಯನಿರ್ವಹಿಸಿದ “ರಾಷ್ಟ್ರ ಭಕ್ತರ ಬಳಗ” ದೊಂದಿಗೆ ಅವರು ಗುರುತಿಸಿಕೊಂಡಿದ್ದರು.

ಗ್ರಾಮಪಂಚಾಯತ್ ಚುನಾವಣೆಯಲ್ಲಿ ಅವರು ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಬರುವೆ 3ನೇ ವಾರ್ಡ್‌ನಿಂದ ಸ್ಪರ್ಧಿಸಿ 500 ಮತಗಳ ಅಂತರದಲ್ಲಿ ಭರ್ಜರಿ ಗೆಲುವು ದಾಖಲಿಸಿ ಯುವ ನಾಯಕನಾಗಿ ತಮ್ಮ ರಾಜಕೀಯ ಬಲವನ್ನು ತೋರಿಸಿದ್ದರು. ಅದಲ್ಲದೆ, ಎರಡನೇ ಅವಧಿಯ ರಿಪ್ಪನ್‌ಪೇಟೆ ಗ್ರಾಮಪಂಚಾಯತ್ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯ ಸಮಯದಲ್ಲಿ ತೀವ್ರ ಒತ್ತಡ ಮತ್ತು ರಾಜಕೀಯ ಲಾಬಿಗಳ ನಡುವೆ ತಮ್ಮ ಪಕ್ಷಪರತೆ ಕಾಪಾಡಿಕೊಂಡು ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡಿದ್ದರು. ಇದರಿಂದ ಸ್ಥಳೀಯ ಮಟ್ಟದಲ್ಲಿ ಪಕ್ಷ ನಿಷ್ಠನಾಗಿಯೇ ಪರಿಗಣಿಸಲ್ಪಟ್ಟಿದ್ದರು.

ಆದರೆ ಇತ್ತೀಚಿನ ದಿನಗಳಲ್ಲಿ ರಾಜ್ಯ ಹಾಗೂ ಸ್ಥಳೀಯ ಮಟ್ಟದ ರಾಜಕೀಯ ವಾತಾವರಣ ಬದಲಾಗುತ್ತಿದ್ದು, ಕಾಂಗ್ರೆಸ್ ಪಕ್ಷವು ಗ್ರಾಮೀಣ ಹಾಗೂ ತಾಲೂಕು ಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸಲು ಮುಂದಾಗಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ಅವರು ತಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಹಾಗೂ ಜನಸಂಪರ್ಕ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡುತ್ತಿರುವುದು ಗಮನಾರ್ಹ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯವೈಖರಿ ಹಾಗೂ ಬೇಳೂರು ಗೋಪಾಲಕೃಷ್ಣ ಅವರ ನಾಯಕತ್ವ ನಿರೂಪ್ ಕುಮಾರ್ ಅವರನ್ನು ಆಕರ್ಷಿಸಿದೆ ಎಂದು ಮೂಲಗಳು ತಿಳಿಸಿವೆ.

ಪಕ್ಷ ಸೇರ್ಪಡೆಯ ನಂತರ ಮಾತನಾಡಿದ ನಿರೂಪ್ ಕುಮಾರ್, “ನಾನು ಸಾರ್ವಜನಿಕ ಜೀವನದಲ್ಲಿ ಸದಾ ಜನಪರ ರಾಜಕೀಯವನ್ನು ಅವಲಂಬಿಸಿದ್ದೇನೆ. ಕಾಂಗ್ರೆಸ್ ಪಕ್ಷದ ನಿಲುವು ಹಾಗೂ ಜನಪರ ಕಾರ್ಯಕ್ರಮಗಳು ನನ್ನನ್ನು ಪ್ರೇರೇಪಿಸಿವೆ. ಮುಂದಿನ ದಿನಗಳಲ್ಲಿ ಪಕ್ಷದ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತಾ ಜನರ ವಿಶ್ವಾಸಕ್ಕೆ ತಕ್ಕಂತೆ ಸೇವೆ ಸಲ್ಲಿಸುವುದು ನನ್ನ ಉದ್ದೇಶ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಪಕ್ಷ ಸೇರ್ಪಡೆ ಸಂಧರ್ಭದಲ್ಲಿ ತಾಪಂ ಮಾಜಿ ಸದಸ್ಯ ಚಂದ್ರೇಶ್ ಎನ್ , ಕೆಡಿಪಿ ಸದಸ್ಯ ಆಸೀಫ಼್ ಭಾಷಾ , ಗ್ರಾಪಂ ಸದಸ್ಯರಾದ ಮಧುಸೂದನ್ , ಪ್ರಕಾಶ್ ಪಾಲೇಕರ್ , ರಿಪ್ಪನ್ ಪೇಟೆ ಘಟಕದ ಕಾಂಗ್ರೆಸ್ ಅಧ್ಯಕ್ಷ ಗಣಪತಿ , ಮುಖಂಡರಾದ ಈಶ್ವರಪ್ಪ ಗೌಡ , ನೇಮಣ್ಣ ಬಂಡಿ ಹಾಗೂ ಇನ್ನಿತರರು ಇದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಳಿಕ ಮನನೊಂದು ವಿಷ ಸೇವಿಸಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು A NEET aspirant…

9 hours ago

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ

ಆಗುಂಬೆಯಿಂದ ರಿಪ್ಪನ್‌ಪೇಟೆವರೆಗೆ ಪೊಲೀಸರ ಚೇಸಿಂಗ್ ಪ್ರಕರಣ : ಕಾರು ಬಿಟ್ಟು ಕಾಡಿಗೆ ಪರಾರಿಯಾಗಿದ್ದ ಆರೋಪಿಯ ಬಂಧನ Agumbe Police arrested…

11 hours ago

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ – ಗ್ರಾಮಸ್ಥರಲ್ಲಿ ಅಚ್ಚರಿ

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ - ಗ್ರಾಮಸ್ಥರಲ್ಲಿ ಅಚ್ಚರಿ A…

12 hours ago

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ – ನಗದು ಸಹಿತ ಆರೋಪಿ ವಶಕ್ಕೆ

ಆನಂದಪುರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಬಂಗಾರದ ನಾಣ್ಯಗಳ ನೀಡಿ ₹9.60 ಲಕ್ಷ ವಂಚನೆ - ನಗದು ಸಹಿತ ಆರೋಪಿ…

1 day ago

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಸಾಗರ ಬಸ್‌ ಪ್ರಯಾಣದಲ್ಲಿ ಮಹಿಳೆಗೆ ಶಾಕ್: ಗಾಢ ನಿದ್ರೆಯಲ್ಲಿದ್ದ ವೇಳೆ ₹17.55 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ A…

1 day ago

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು

ಆನಂದಪುರ : ವಿದ್ಯುತ್ ತಂತಿ ತುಂಡಾಗಿ ಬಿದ್ದು ಎಮ್ಮೆ ಸಾವು A buffalo died after coming into contact…

1 day ago