ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಬಾಂಧವರು
ರಿಪ್ಪನ್ಪೇಟೆ : ಪಟ್ಟಣದಲ್ಲಿ ಇಂದು ಪ್ರವಾದಿ ಮುಹಮ್ಮದ್ ಪೈಗಂಬರ್ ರವರ 1500ನೇ ಜನ್ಮ ದಿನಾಚರಣೆ ಅಂಗವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ ವಿನಾಯಕ ವೃತ್ತಕ್ಕೆ ಆಗಮಿಸುತಿದ್ದಂತೆ ಹಿಂದೂ ಬಾಂಧವರು ಎಲ್ಲರಿಗೂ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದರು.
ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಗೆ ಹಾಗೂ ಮೆರವಣಿಗೆ ನೋಡಲು ಬಂದಿದ್ದ ಮಹಿಳೆಯರಿಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ತಂಪು ಪಾನೀಯ ವಿತರಿಸಿದ್ದಾರೆ. ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ್ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂಧರ್ಭದಲ್ಲಿ ಸಿಪಿಐ ಗುರಣ್ಣ ಹೆಬ್ಬಾಳ್ , ಪಿಎಸೈ ರಾಜುರೆಡ್ಡಿ , ನಗರ ಪಿಎಸೈ ಶಿವಾನಂದ ಕೋಳಿ ಇದ್ದರು.
ಮೆರವಣಿಗೆಯಲ್ಲಿ ಸಾಗುತಿದ್ದವರು ಹಿಂದೂ ಬಾಂಧವರ ಸೌಹಾರ್ಧತೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಾ ಅವರಿಗೂ ಈದ್ ಮಿಲಾದ್ ಹಬ್ಬದ ಶುಭಾಶಯಗಳನ್ನು ಕೋರಿದರು.
ಈ ಸಂಧರ್ಭದಲ್ಲಿ ಗ್ರಾಪಂ ಸದಸ್ಯ ನಿರೂಪ್ ಕುಮಾರ್ , ಪ್ರಕಾಶ್ ಪಾಲೇಕರ್ , ಗಣಪತಿ ಗವಟೂರು , ನೇಮಣ್ಣ ಬಂಡಿ , ಪ್ರವೀಣ್ ಆಚಾರ್ , ವರುಣ್ ಆಚಾರ್ , ಪ್ರಶಾಂತ್ ತಳಲೆ , ನವೀನ್ ಜನನಿ , ಹರ್ಷ ಕಾಶೀನಾಥ್ ,ಶಿವಾಜಿ ಹಾಗೂ ಇನ್ನಿತರರು ಇದ್ದರು.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…