ಹೊಸನಗರ ; ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನಂತೆ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯು, ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ವಿವಿಧ ಸ್ಥಾನಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ನೂತನ ಅಧ್ಯಕ್ಷರಾಗಿ ಕೋಡೂರು ಬಿ.ಜಿ. ಚಂದ್ರಮೌಳಿ, ಉಪಾಧ್ಯಕ್ಷರಾಗಿ ನಾಗೋಡಿ ವಿಶ್ವನಾಥ್, ಕೆಂಚನಾಲ ಉಬೇದ್ದುಲ್ಲಾ ಷರೀಫ್, ಜಯನಗರ ಚನ್ನಬಸವ, ಬಾಳೂರು ಲೀಲಾವತಿ, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹೊಸನಗರ ಪಟ್ಟಣದ ಎಂ.ಪಿ.ಸುರೇಶ್, ಸದಾಶಿವ ಶ್ರೇಷ್ಟಿ, ರಿಪ್ಪನ್ಪೇಟೆಯ ಮಧುಸೂಧನ್ ಹಾಗು ಖಜಾಂಚಿಯಾಗಿ ದುಮ್ಮ ವಿನಯ್ ಕುಮಾರ್ ನೇಮಕಗೊಂಡಿದ್ದಾರೆ.
ಇನ್ನೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಬಾಳೂರು ಉಮೇಶ್, ಮಾಕನಕಟ್ಟೆ ಗಣಪತಿ, ಕಾರಕ್ಕಿ ಸುಬ್ಬಣ್ಣ, ಜೇನಿ ಮಾಧವ ಶೆಟ್ಟಿ, ಹುಂಚ ರೋಡ್ ಪ್ರಶಾಂತ್ ಕುಮಾರ್ ಕಚ್ಚಿಗೆಬೈಲ್ ನಾಸೀರ್, ರಿಪ್ಪನ್ಪೇಟೆಯ ನೇಮಪ್ಪ ಬಂಡಿ, ಧನಲಕ್ಷ್ಮಿ, ಕಳೂರು ಕೃಷ್ಣಮೂರ್ತಿ ಶೆಟ್ಟಿ, ಅರಸಾಳು ನಾಗರಾಜ್, ಬಟ್ಟೆಮಲ್ಲಪ್ಪ ಇಕ್ಬಾಲ್, ಪುರಪ್ಪೆಮನೆ ಮೃತ್ಯುಂಜಯ, ಮಾರುತಿಪುರ ದೀಪಿಕಾ ಕೃಷ್ಣ, ಪ್ರಕಾಶ್ ಪಾಲೇಕರ್, ಕೆಂಚನಾಲ ಕೃಷ್ಣೋಜಿ, ಹರತಾಳು ಕುಮಾರ್ ಮಂಡಿ, ಪುರಪ್ಪೆಮನೆ ಸುಜಾತ ದಿನೇಶ್, ಜಯನಗರ ಗುರು ಅವರನ್ನು ನೇಮಕ ಮಾಡಿ ಆದೇಶ ನೀಡಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್