ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ
ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಸಮಸ್ಯೆ ನಿವಾರಿಸಲು ಮಹತ್ವದ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ರೈತರು ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನುಗಳಲ್ಲಿ ಕಾಲುದಾರಿ, ಬಂಡಿದಾರಿ ಅಥವಾ ಸೌಲಭ್ಯ ಒದಗಿಸಲು ಕ್ರಮವಹಿಸುವಂತೆ ಮಹತ್ವದ ಆದೇಶವನ್ನು ಮಾಡಿದೆ.
ಈ ಕುರಿತಂತೆ ರಾಜ್ಯದ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ಯ ಭೂಮಾಲೀಕರ ಖಾಸಗಿ ಜಮೀನುಗಳಲ್ಲಿ ತಿರುಗಾಡಲು ‘ದಾರಿ’ ಸಮಸ್ಯೆ ಇದ್ದು, ಬಳಕೆದಾರ ರೈತರುಗಳಿಗೆ ತೊಂದರೆಗಳಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ‘ದಾರಿ’ ಸಮಸ್ಯೆ ಬಹುಕಾಲದಿಂದಲೂ ಇದ್ದು, ಅಕ್ಕಪಕ್ಕದ ಜಮೀನುಗಳ ರೈತರು ಕೆಲವು ಖಾಸಗಿ ಜಮೀನುಗಳನ್ನು ದಾಟಿಕೊಂಡು ಕೃಷಿ ಪೂರಕ ಚಟುವಟಿಕೆಗಳನ್ನು ಜರುಗಿಸಲು ಹಾಗೂ ಬೆಳೆದ ಫಸಲನ್ನು ಹೊರತರಲಾಗದೆ ನಷ್ಟ ಹೊಂದುತ್ತಿರುವುದು ಕೆಲವು ಮಾಧ್ಯಮಗಳಿಂದ ತಿಳಿದು ಬಂದಿರುತ್ತದೆ ಹಾಗೂ ಈ ಬಗ್ಗೆ ಸಾರ್ವಜನಿಕರಿಂದ ಮನವಿ/ದೂರುಗಳು ಸ್ವೀಕೃತವಾಗಿರುತ್ತವೆ.
ಗ್ರಾಮ ನಕಾಶೆ ಕಂಡ ದಾರಿಗಳಲ್ಲಿ ಬಳಕೆದಾರ ರೈತರು ತಿರುಗಾಡಲು ಅವಕಾಶವಿದ್ದಾಗೂ ಕೆಲವು ಭೂಮಾಲೀಕರು ಬಳಕೆದಾರ ರೈತರುಗಳಿಗೆ ತಿರುಗಾಡಲು ಅಡ್ಡಿಪಡಿಸುತ್ತಿರುವುದು ಅಥವಾ ಅಂತಹ ಜಾಗಗಳನ್ನು ಮುಚ್ಚಿರುವುದು ಹಾಗೂ ರೈತರು ಬಹುಕಾಲದಿಂದಲೂ ಬಳಸುವ ದಾರಿಗಳಲ್ಲಿ ತಿರುಗಾಡಲು ಕೆಲವು ರೈತರ ಮಧ್ಯದ ವೈಯಕ್ತಿಕ ದ್ವೇಷ/ಅಸೂಯೆಗಳು ಮತ್ತು ಹೊಂದಾಣಿಕೆಯ ಕೊರತೆಯಿಂದಾಗಿ ಬಳಕೆದಾರ ರೈತರ ತೊಂದರೆಗಳಿಗೆ ಬಹುತೇಕ ಕಾರಣಗಳಾಗಿರುವುದು ಕಂಡುಬರುತ್ತದೆ.
ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ನಿಯಮ 59 ರಲ್ಲಿ ‘ದಾರಿಯ ಹಕ್ಕುಗಳು ಮತ್ತು ಇತರೆ ಅನುಭೋಗದ ಹಕ್ಕುಗಳ ಬಗ್ಗೆ ತಿಳಿಸಲಾಗಿದ್ದು, ಸಂಬಂಧಪಟ್ಟ ಜಮೀನುಗಳ ಭಾಗಿದಾರರು ಒಪ್ಪಿರುವಂತಹ ಸಂದರ್ಭದಲ್ಲಿ ಹಕ್ಕುಗಳ ದಾಖಲೆ ರಿಜಿಸ್ಟರ್ನಲ್ಲಿ ನಮೂದು ಮಾಡಲು ಅವಕಾಶವಿದೆ.
The Indian Easement Act, 1882 ರಂತೆ ಪ್ರತಿ ಜಮೀನಿನ ಮಾಲೀಕರು ಅಥವಾ ಜಮೀನಿನ ಅನುಭವದಲ್ಲಿರುವವರು ಅವರ ಭೂಮಿಯನ್ನು ಪ್ರವೇಶಿಸುವ ಹಕ್ಕು ಮತ್ತು ವಹಿವಾಟಿನ (Easement) ಹಕ್ಕನ್ನು ಹೊಂದಿದ್ದು, ಇದಕ್ಕೆ ಬಾಜುದಾರರಿಂದ ಯಾವುದೇ ಹಸ್ತಕ್ಷೇಪಕ್ಕೆ ಅಥವಾ ಈ ಬಗ್ಗೆ ಸದರಿ ಹಕ್ಕನ್ನು ಕ್ಷೀಣಿಸುವುದಕ್ಕೆ ಸಾಧ್ಯವಿರುವುದಿಲ್ಲ ಎಂಬುದಾಗಿ ತಿಳಿಸಲಾಗಿದ್ದು, ಈ ನಿಟ್ಟಿನಲ್ಲಿ ಕ್ರಮವಹಿಸಲು ಅವಕಾಶವಿದೆ. ಅಲ್ಲದೇ, Code of Criminal Procedure, 19730 do 147 ರನ್ವಯ ‘ಭೂಮಿ ಮತ್ತು ನೀರಿನ ಹಕ್ಕಿನ ಉಪಯೋಗದ’ ಕುರಿತು ಸ್ಥಳೀಯ ಶಾಂತಿಗೆ ಭಂಗ ಉಂಟಾಗುವ ಸಂದರ್ಭಗಳಲ್ಲಿ ಅದನ್ನು ನಿವಾರಿಸಲು ಕಾನೂನು ರೀತ್ಯಾ ತಹಶೀಲ್ದಾರ್ ರವರು ತಾಲ್ಲೂಕು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಆಗಿ ಕ್ರಮವಹಿಸುವ ಅಧಿಕಾರ ಹೊಂದಿರುತ್ತಾರೆ.
ಅದರಂತೆ, ತಾಲ್ಲೂಕಿನ ತಹಶೀಲ್ದಾರ್ಗಳು ನಕಾಶೆ ಕಂಡ ಕಾಲುದಾರಿ, ಬಂಡಿದಾರಿ ಅಥವಾ ರಸ್ತೆಗಳಲ್ಲಿ ಅನ್ಯ ಕೃಷಿ ಬಳಕೆದಾರರು ತಿರುಗಾಡಲು ಅವಕಾಶ ನೀಡದೆ ಅಡಿಪಡಿಸುವಂತಹ ಅಥವಾ ಬಳಸಲು ಮುಚ್ಚಿರುವಂತಹ ಸಂದರ್ಭದಲ್ಲಿ ಅವುಗಳನ್ನು ತೆರವುಗೊಳಿಸಿ, ಅಂತಹ ತಿರುಗಾಡಲು ದಾರಿಗಳನ್ನು ಸುಗಮಗೊಳಿಸಲು ಕ್ರಮವಹಿಸುವಂತೆ ಸೂಚಿಸಿದ್ದಾರೆ.
ಹೊಸನಗರದಲ್ಲಿ ಸೆ.14ರಿಂದ 28ರವರೆಗೆ 8ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ: ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿದ್ಧತೆ Hosanagara Hindu Mahasabha…
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…