ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಸಮಸ್ಯೆ ನಿವಾರಿಸಲು ಮಹತ್ವದ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ರೈತರು ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನುಗಳಲ್ಲಿ ಕಾಲುದಾರಿ, ಬಂಡಿದಾರಿ ಅಥವಾ ಸೌಲಭ್ಯ ಒದಗಿಸಲು ಕ್ರಮವಹಿಸುವಂತೆ ಮಹತ್ವದ ಆದೇಶವನ್ನು ಮಾಡಿದೆ.

ಈ ಕುರಿತಂತೆ ರಾಜ್ಯದ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ಯ ಭೂಮಾಲೀಕರ ಖಾಸಗಿ ಜಮೀನುಗಳಲ್ಲಿ ತಿರುಗಾಡಲು ‘ದಾರಿ’ ಸಮಸ್ಯೆ ಇದ್ದು, ಬಳಕೆದಾರ ರೈತರುಗಳಿಗೆ ತೊಂದರೆಗಳಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ‘ದಾರಿ’ ಸಮಸ್ಯೆ ಬಹುಕಾಲದಿಂದಲೂ ಇದ್ದು, ಅಕ್ಕಪಕ್ಕದ ಜಮೀನುಗಳ ರೈತರು ಕೆಲವು ಖಾಸಗಿ ಜಮೀನುಗಳನ್ನು ದಾಟಿಕೊಂಡು ಕೃಷಿ ಪೂರಕ ಚಟುವಟಿಕೆಗಳನ್ನು ಜರುಗಿಸಲು ಹಾಗೂ ಬೆಳೆದ ಫಸಲನ್ನು ಹೊರತರಲಾಗದೆ ನಷ್ಟ ಹೊಂದುತ್ತಿರುವುದು ಕೆಲವು ಮಾಧ್ಯಮಗಳಿಂದ ತಿಳಿದು ಬಂದಿರುತ್ತದೆ ಹಾಗೂ ಈ ಬಗ್ಗೆ ಸಾರ್ವಜನಿಕರಿಂದ ಮನವಿ/ದೂರುಗಳು ಸ್ವೀಕೃತವಾಗಿರುತ್ತವೆ.

ಗ್ರಾಮ ನಕಾಶೆ ಕಂಡ ದಾರಿಗಳಲ್ಲಿ ಬಳಕೆದಾರ ರೈತರು ತಿರುಗಾಡಲು ಅವಕಾಶವಿದ್ದಾಗೂ ಕೆಲವು ಭೂಮಾಲೀಕರು ಬಳಕೆದಾರ ರೈತರುಗಳಿಗೆ ತಿರುಗಾಡಲು ಅಡ್ಡಿಪಡಿಸುತ್ತಿರುವುದು ಅಥವಾ ಅಂತಹ ಜಾಗಗಳನ್ನು ಮುಚ್ಚಿರುವುದು ಹಾಗೂ ರೈತರು ಬಹುಕಾಲದಿಂದಲೂ ಬಳಸುವ ದಾರಿಗಳಲ್ಲಿ ತಿರುಗಾಡಲು ಕೆಲವು ರೈತರ ಮಧ್ಯದ ವೈಯಕ್ತಿಕ ದ್ವೇಷ/ಅಸೂಯೆಗಳು ಮತ್ತು ಹೊಂದಾಣಿಕೆಯ ಕೊರತೆಯಿಂದಾಗಿ ಬಳಕೆದಾರ ರೈತರ ತೊಂದರೆಗಳಿಗೆ ಬಹುತೇಕ ಕಾರಣಗಳಾಗಿರುವುದು ಕಂಡುಬರುತ್ತದೆ.

ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ನಿಯಮ 59 ರಲ್ಲಿ ‘ದಾರಿಯ ಹಕ್ಕುಗಳು ಮತ್ತು ಇತರೆ ಅನುಭೋಗದ ಹಕ್ಕುಗಳ ಬಗ್ಗೆ ತಿಳಿಸಲಾಗಿದ್ದು, ಸಂಬಂಧಪಟ್ಟ ಜಮೀನುಗಳ ಭಾಗಿದಾರರು ಒಪ್ಪಿರುವಂತಹ ಸಂದರ್ಭದಲ್ಲಿ ಹಕ್ಕುಗಳ ದಾಖಲೆ ರಿಜಿಸ್ಟರ್‌ನಲ್ಲಿ ನಮೂದು ಮಾಡಲು ಅವಕಾಶವಿದೆ.

The Indian Easement Act, 1882 ರಂತೆ ಪ್ರತಿ ಜಮೀನಿನ ಮಾಲೀಕರು ಅಥವಾ ಜಮೀನಿನ ಅನುಭವದಲ್ಲಿರುವವರು ಅವರ ಭೂಮಿಯನ್ನು ಪ್ರವೇಶಿಸುವ ಹಕ್ಕು ಮತ್ತು ವಹಿವಾಟಿನ (Easement) ಹಕ್ಕನ್ನು ಹೊಂದಿದ್ದು, ಇದಕ್ಕೆ ಬಾಜುದಾರರಿಂದ ಯಾವುದೇ ಹಸ್ತಕ್ಷೇಪಕ್ಕೆ ಅಥವಾ ಈ ಬಗ್ಗೆ ಸದರಿ ಹಕ್ಕನ್ನು ಕ್ಷೀಣಿಸುವುದಕ್ಕೆ ಸಾಧ್ಯವಿರುವುದಿಲ್ಲ ಎಂಬುದಾಗಿ ತಿಳಿಸಲಾಗಿದ್ದು, ಈ ನಿಟ್ಟಿನಲ್ಲಿ ಕ್ರಮವಹಿಸಲು ಅವಕಾಶವಿದೆ. ಅಲ್ಲದೇ, Code of Criminal Procedure, 19730 do 147 ರನ್ವಯ ‘ಭೂಮಿ ಮತ್ತು ನೀರಿನ ಹಕ್ಕಿನ ಉಪಯೋಗದ’ ಕುರಿತು ಸ್ಥಳೀಯ ಶಾಂತಿಗೆ ಭಂಗ ಉಂಟಾಗುವ ಸಂದರ್ಭಗಳಲ್ಲಿ ಅದನ್ನು ನಿವಾರಿಸಲು ಕಾನೂನು ರೀತ್ಯಾ ತಹಶೀಲ್ದಾರ್ ರವರು ತಾಲ್ಲೂಕು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಆಗಿ ಕ್ರಮವಹಿಸುವ ಅಧಿಕಾರ ಹೊಂದಿರುತ್ತಾರೆ.

ಅದರಂತೆ, ತಾಲ್ಲೂಕಿನ ತಹಶೀಲ್ದಾರ್‌ಗಳು ನಕಾಶೆ ಕಂಡ ಕಾಲುದಾರಿ, ಬಂಡಿದಾರಿ ಅಥವಾ ರಸ್ತೆಗಳಲ್ಲಿ ಅನ್ಯ ಕೃಷಿ ಬಳಕೆದಾರರು ತಿರುಗಾಡಲು ಅವಕಾಶ ನೀಡದೆ ಅಡಿಪಡಿಸುವಂತಹ ಅಥವಾ ಬಳಸಲು ಮುಚ್ಚಿರುವಂತಹ ಸಂದರ್ಭದಲ್ಲಿ ಅವುಗಳನ್ನು ತೆರವುಗೊಳಿಸಿ, ಅಂತಹ ತಿರುಗಾಡಲು ದಾರಿಗಳನ್ನು ಸುಗಮಗೊಳಿಸಲು ಕ್ರಮವಹಿಸುವಂತೆ ಸೂಚಿಸಿದ್ದಾರೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ

ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…

36 minutes ago

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ – ಕೆರೆಗೆ ಹಾರಿ ಸಾಗರದ ಯುವತಿ

ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…

7 hours ago

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಮೂವರು ಆರೋಪಿಗಳು ಪೊಲೀಸರ ಬಲೆಗೆ

ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…

1 day ago

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ

ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…

1 day ago

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ

ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…

1 day ago

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ

ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…

1 day ago