ರಿಪ್ಪನ್‌ಪೇಟೆ : ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ಗಣಪತಿಯ ವೈಭವದ ರಾಜಬೀದಿ ಉತ್ಸವ – ಭಾರಿ ಜನಸ್ತೋಮ

ರಿಪ್ಪನ್‌ಪೇಟೆ : ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸೇವಾ ಸಮಿತಿಯ 58 ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಇಂದು ಸಂಜೆ 5.30 ಗಂಟೆಗೆ ಅರಂಭಗೊಂಡಿತು.

ಯುವಕರ ಮಹಿಳೆಯರು ಪುಟಾಣಿ ಮಕ್ಕಳು ವಾದ್ಯಕ್ಕೆ ತಕ್ಕ ಕುಣಿತದೊಂದಿಗೆ ಚಾಲನೆ ರಾಜಬೀದಿ ಉತ್ಸವದಲ್ಲಿ ವಿವಿಧ ಹೆಸರಾಂತ ಜಾನಪದ ಕಲಾತಂಡಗಳಾದ ಡೊಳ್ಳೂ ಕುಣಿತ ತಮಟೆ ಬಡಿತ.ಕೀಲುಕುದುರೆ ಗೊಂಬೆಕುಣಿತ,ನಗಾರಿ ತಟ್ಟಿರಾಯ ತಂಡದವರಿಂದ ವಿವಿಧ ಭಂಗಿಯ ಪ್ರದರ್ಶನದೊಂದಿಗೆ ಘೋಷಣೆಗಳು ಮುಗಿಲು ಮುಟ್ಟಿವೆ. ಅಯೋಧ್ಯೆ ರಾಮಮಂದಿರದ ಟ್ಯಾಬ್ಲೊ ಈ ಬಾರಿಯ ಮೆರವಣಿಗೆಯಲ್ಲಿ ಮನಸೆಳೆಯಿತು.

ಗಣಪತಿಯ ರಾಜಬೀದಿ ಉತ್ಸವ ತಿಲಕ್ ಮಂಟಪದಿಂದ ಹೊರಟ ಶಿವಮೊಗ್ಗ ರಸ್ತೆ ಮಾರ್ಗ ಸಾಗುವ ರಸ್ತೆಯಲ್ಲಿ ತಳಿರು ತೋರಣ ರಂಗೋಲಿಯೊಂದಿಗೆ ಗಣೇಶ ಉತ್ಸವಕ್ಕೆ ಸ್ವಾಗತಿಸುತ್ತಿರುವುದು ಮತ್ತು ಕಲಾತಂಡಗಳ ವೃತ್ಯವನ್ನು ಅಪಾರ ಸಂಖ್ಯೆಯ ಭಕ್ತ ಸಮೂಹ ವೀಕ್ಷಿಸಲು ಕಾತರಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತು.

ಮೆರವಣಿಗೆ ಮುನ್ನ ಬೃಹತ್ ಬೈಕ್ ರ‍್ಯಾಲಿ :

ಕರ್ನಾಟಕ ಪ್ರಾಂತೀಯ ಹಿಂದು ರಾಷ್ಟಸೇನಾ ಸಮಿತಿಯವರಿಂದ ಬೃಹತ್ ಬೈಕ್ ರ‍್ಯಾಲಿಯೊಂದಿಗೆ ಯುವಕರು ಕೇಸರಿ ದ್ವಜ ಮತ್ತು ಶಾಲು ಹಾಕಿ ಹಿಂದೂ ಭಗವದ್ವಜದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಗಣಪತಿಯ ಜಯಘೋಷಣೆ ಕೂಗುತ್ತಾ ರ‍್ಯಾಲಿಯೊಂದಿಗೆ ಜನಜಾಗೃತಿ ನಡೆಸಿದರು.

ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟಸೇನಾ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸುಧೀರ್ ಪಿ, ಸಿದ್ದಿವಿನಾಯಕ ದೇವಸ್ಥಾನದ ಧರ್ಮದರ್ಶಿ ಅರ್.ಈ.ಈಶ್ವರಶೆಟ್ಟಿ,ಪ್ರಧಾನಕಾರ್ಯದರ್ಶಿ ಮುರುಳಿ ಕೆರೆಹಳ್ಳಿ,ಎಂ.ಬಿ.ಮಂಜುನಾಥ, ಸುರೇಶ್‌ಸಿಂಗ್, ಸುದೀಂದ್ರಪೂಜಾರಿ, ತೀರ್ಥೇಶ್‌ ಅಡಿಕಟ್ಟು, ರವೀಂದ್ರಕೆರೆಹಳ್ಳಿ, ಆರ್.ರಾಘವೆಂದ್ರ,ಶ್ರೀನಿವಾಸ್ ಅಚಾರ್,ನಿರೂಪ್ ಕುಮಾರ್, ರಾಮಚಂದ್ರ ಬಳೆಗಾರ್ , ಎನ್.ಸತೀಶ್, ಗಣೇಶ್ ಎನ್.ಕಾಮತ್, ಆರ್.ಹೆಚ್.ಶ್ರೀನಿವಾಸ ಅಚಾರ್,ಅಟೋ ಲಕ್ಷಣ,ಎಂ.ಡಿ.ಇಂದ್ರಮ್ಮ,ಜಯಲಕ್ಷಿö್ಮಮೋಹನ್, ಅರ್.ಡಿ.ಶೀಲ, ಅರ್.ಶೈಲಪ್ರಭು, ಹೆಚ್.ಎನ್.ಚೋಳರಾಜ್, ಡಿ.ಈ.ರವಿಭೂಷಣ, ಎಸ್.ದಾನಪ್ಪ,ನಾಗರಾಜ್ ಪವಾರ್, ತುಳೋಜಿರಾವ್, ಕೆ.ವಿ.ಲಿಂಗಪ್ಪ, ಭೀಮರಾಜ್, ವಾಸುಶೆಟ್ಟಿ, ಕೆ.ಎ.ನಾರಾಯಣ, ಶಾಂತಕುಮಾರ, ಯೋಗೇಶ್,ಪುಟ್ಟರಾಜ್, ಸ್ವಾಮಿದೊಡ್ಡಿನಕೊಪ್ಪ, ಹೆಚ್.ಎನ್.ಉಮೇಶ್, ದೇವರಾಜ್ ಪವಾರ್,ಇನ್ನಿತರ ಹಲವರು ಉತ್ಸವದಲ್ಲಿ ಪಾಲ್ಗೊಂಡಿದ್ದರು.

ತೀರ್ಥಹಳ್ಳಿ ಡಿವೈಎಸ್‌ಪಿ ಅರವಿಂದ್ ಕಲಗುಜ್ಜಿ,ವೃತ್ತನಿರೀಕ್ಷಕ ಗುರಣ್ಣ ಹೆಬ್ಬಾಳ್,ಪಿಎಸ್‌ಐ ರಾಜುರೆಡ್ಡಿ ಸೇರಿದಂತೆ ಕಂದಾಯ ಇಲಾಖೆಯ ಸಿಬ್ಬಂದಿವರ್ಗ ಗ್ರಾಮ ಪಂಚಾಯ್ತಿ ಪಿಡಿಓ ಸಿಬ್ಬಂದಿವರ್ಗ ಇನ್ನಿತರ ಇಲಾಖೆಯ ಅಧಿಕಾರಿಗಳು ಗಣಪತಿ ಮೆರವಣಿಗೆ ಹಿನ್ನಲೇಯಲ್ಲಿ ಪೊಲೀಸ್ ಇಲಾಖೆ ಗೃಹ ರಕ್ಷಕ ದಳ ಪಟ್ಟಣದ ಎಲ್ಲೇಡೆ ಬಿಗಿ ಬಂದೋಬಸ್ತುನೊಂದಿಗೆ ಸಿಸಿಟಿವಿ ಡ್ರೋಣ್ ಕ್ಯಾಮರಗಳಲ್ಲಿ ಹಾಗೂ ಮೆರವಣಿಗೆ ಪ್ರತಿ ಹಂತದಲ್ಲಿ ಸೂಕ್ತ ಪರಿಶೀಲನೆ ನಡೆಸುತ್ತಿರುವುದು ಕಂಡುಬಂತು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ. ಶಿವಕುಮಾರ್ ನೀಡಿದ ಭರವಸೆಗಳೇನು?

ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ.…

13 hours ago

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ

ವಿಶ್ವಕರ್ಮ ಜಯಂತಿ ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಪ್ರತೀಕ: ಗಣೇಶ್ ಆಚಾರ್ಯ Vishwakarma Jayanti was celebrated by the…

14 hours ago

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ

ಕೋಡೂರಿನಲ್ಲಿ ಅಗ್ನಿ ಅವಘಡ: ಸರ್ವಸ್ವ ಕಳೆದುಕೊಂಡ ಕಾರ್ಮಿಕನಿಗೆ ಕಟ್ಟಡ ಕಾರ್ಮಿಕರ ಸಂಘದ ಆಸರೆ A fire caused by a…

1 day ago

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ

ಅರಸಾಳಿನಿಂದ ವಿಶ್ವ ವೇದಿಕೆಗೆ; ಕವನಶ್ರೀಗೆ ಸತತ ಮೂರನೇ ಗಿನ್ನಿಸ್ ಸಾಧನೆ Arasalu's Kavanasree H.M. earns two more Guinness…

1 day ago

ಸರ್ಕಾರಿ ಜಾಗದಲ್ಲಿ ಖಾಸಗಿ ಬೇಲಿ; ಕಂದಾಯ ಅಧಿಕಾರಿಗಳಿಂದ ತೆರವು – ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ

ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…

2 days ago

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ರಿಪ್ಪನ್‌ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…

2 days ago