ಕೆಎಸ್ಆರ್’ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ – ಪ್ರಕರಣ ದಾಖಲು
ಶಿಕಾರಿಪುರ ತಾಲೂಕಿನ ಕೋಟಿಪುರ ಗ್ರಾಮದಲ್ಲಿ ಕೆಎಸ್ಆರ್’ಟಿಸಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂವರು ಗ್ರಾಮಸ್ಥರ ವಿರುದ್ದ ಪ್ರಕರಣ ದಾಖಲಾದ ಘಟನೆ ನಡೆದಿದೆ.
ತನ್ವೀರ್ ಹೊರಕೆರೆ (38) ಹಲ್ಲೆಗೊಳಗಾದ ಬಸ್ ಕಂಡಕ್ಟರ್ ಶಿಕಾರಿಪುರ ಸರ್ಕಾರಿ ಆಸ್ಪತ್ರೆಯಲ್ಲಿ ಒಳ ರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಶಿಕಾರಿಪುರ – ಮುಡುಬಾಸಿದ್ದಾಪುರ ಮಾರ್ಗದಲ್ಲಿ ಸಂಚರಿಸುವ ಬಸ್ ನಲ್ಲಿ ಕಂಡಕ್ಟರ್ ಆಗಿದ್ದಾರೆ.
ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆಯ ವಿರುದ್ದ ಕಂಡಕ್ಟರ್ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕಂಡಕ್ಟರ್ ದೂರಿನಲ್ಲಿ ಏನೀದೆ!!?
‘ಸೆಪ್ಟೆಂಬರ್ 17 ರ ಸಂಜೆ ಶಿಕಾರಿಪುರ ಬಸ್ ನಿಲ್ದಾಣದಲ್ಲಿ ಬಸ್ ನಿಂತಿದ್ದ ವೇಳೆ, ಕೆಲ ಶಾಲಾ ವಿದ್ಯಾರ್ಥಿಗಳು ಚಾಲಕ ಕುಳಿತುಕೊಳ್ಳುವ ಸೀಟಿನ ಬಾಗಿಲಿನ ಮೂಲಕ ಬಸ್ ಹತ್ತಲು ಮುಂದಾಗಿದ್ದರು.
ವಿದ್ಯಾರ್ಥಿಗಳಿಗೆ ಡ್ರೈವರ್ ಸೀಟಿನ ಬಾಗಿಲಿನಿಂದ ಹತ್ತದಂತೆ ತಿಳಿಸಿ, ಬಸ್ ನಿಂದ ಕೆಳಗಿಳಿಸಿದೆ. ನಂತರ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳನ್ನು ಬಸ್ ನಲ್ಲಿ ಹತ್ತಿಸಿಕೊಂಡು ಕಪ್ಪನಹಳ್ಳಿ ಮಾರ್ಗವಾಗಿ ಮುಡುಬಾಸಿದ್ದಾಪುರಕ್ಕೆ ಬಸ್ ಬಂದಿತು
ಪ್ರಯಾಣಿಕರನ್ನು ಇಳಿಸಿ ಶಿಕಾರಿಪುರಕ್ಕೆ ಬಸ್ ಹಿಂದಿರುಗುತ್ತಿದ್ದಾಗ, ಕೋಟಿಪುರ ಗ್ರಾಮದಲ್ಲಿ ಕೆಲವರು ಬಸ್ ನಿಲ್ಲಿಸಿದರು. ತಮ್ಮನ್ನು ಕೆಳಕ್ಕೆ ಇಳಿಸಿ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದಾರೆ. ಬಸ್ ಚಾಲಕ ಜಗಳ ಬಿಡಿಸಿದ್ದು, ಸದರಿ ಬಸ್ ನಲ್ಲಿಯೇ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದೆನೆ’ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಕಂಡಕ್ಟರ್ ತಿಳಿಸಿದ್ದಾರೆ.ಸದರಿ ವಿಷಯವನ್ನು ಮನೆಗೆ ಆಗಮಿಸಿದ ವಿದ್ಯಾರ್ಥಿಗಳು, ತಮ್ಮ ಪೋಷಕರ ಗಮನಕ್ಕೆ ತಂದಿದ್ದಾರೆ.
ಗ್ರಾಮದ ಮೂಲಕ ಬಸ್ ಹಿಂದಿರುಗುತ್ತಿದ್ದ ವೇಳೆ, ಬಸ್ ನಿಲ್ಲಿಸಿ ಕಂಡಕ್ಟರ್ ನನ್ನು ಗ್ರಾಮಸ್ಥರು ವಿಚಾರಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಕೆಲವರು ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…