ಹೊಟೇಲ್ ಗೆ ರಿವ್ಯೂ ಟಾಸ್ಕ್ ನೆಪ – ವ್ಯಕ್ತಿ 11.35 ಲಕ್ಷ ವಂಚನೆ , ಪ್ರಕರಣ ದಾಖಲು
ಶಿವಮೊಗ್ಗ : ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹೊಸ ಹೊಸ ತಂತ್ರಗಳನ್ನು ಬಳಸಿ ವಂಚಕರು ಜನರನ್ನು ಬಲೆಗೆ ಬೀಳಿಸುತ್ತಿದ್ದಾರೆ. ಶಿವಮೊಗ್ಗದ ಒಬ್ಬ ವ್ಯಕ್ತಿ ಬರೋಬ್ಬರಿ ₹11,35,900 ಹಣವನ್ನು ಸೈಬರ್ ಕಳ್ಳರಿಗೆ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಪೊಲೀಸರ ಮಾಹಿತಿ ಪ್ರಕಾರ, ದೂರುದಾರರ ವಾಟ್ಸಾಪ್ಗೆ ಪರಿಚಿತ ಮೊಬೈಲ್ ಸಂಖ್ಯೆಯಿಂದ ಒಂದು ಲಿಂಕ್ ಕಳುಹಿಸಲಾಗಿತ್ತು. ಆ ಲಿಂಕ್ನ್ನು ಕ್ಲಿಕ್ ಮಾಡಿದ ಬಳಿಕ ಅವರು ಟೆಲಿಗ್ರಾಂ ಗುಂಪಿಗೆ ಸೇರಿದರು. ನಂತರ ವಂಚಕರು ಆನ್ಲೈನ್ನಲ್ಲಿ ಹೋಟೆಲ್ಗಳ ವಿಮರ್ಶೆ ನೀಡುವ ಟಾಸ್ಕ್ಗಳನ್ನು ಕಳುಹಿಸಿ, ಹೆಚ್ಚಿನ ಲಾಭಾಂಶ ನೀಡುವುದಾಗಿ ಭರವಸೆ ನೀಡಿದರು.
ಹಂತ ಹಂತವಾಗಿ ಐಎಂಪಿಎಸ್, ಆರ್ಟಿಜಿಎಸ್ ಮತ್ತು ಯುಪಿಐ ಮೂಲಕ ಹಣವನ್ನು ವರ್ಗಾಯಿಸಲು ಪ್ರೇರೇಪಿಸಿದ ವಂಚಕರು, ನಂತರ “ಲಾರ್ಜರ್ ಅಮೌಂಟ್ ವಿಥ್ಡ್ರಾ ಮಾಡಲು ಇನ್ನೂ ₹6,00,000 ಸೇರಿಸಬೇಕು” ಎಂದು ಒತ್ತಾಯಿಸಿದರು. ಈ ನಂಬಿಕೆಗೆ ಬಲಿಯಾದ ದೂರುದಾರರಿಂದ ಒಟ್ಟು ₹11,35,900 ವಂಚಿಸಲಾಗಿದೆ.
ಲಾಭಾಂಶ ನೀಡದೆ ಹಣ ಕಸಿದುಕೊಂಡ ವಂಚಕರ ವಿರುದ್ಧ ದೂರು ದಾಖಲಿಸಿರುವ ಈ ಪ್ರಕರಣವನ್ನು ಶಿವಮೊಗ್ಗ ಸೈಬರ್ ಸಿಇಎನ್ ಸೈಬರ್ ಕ್ರೈಂ ಠಾಣೆ ತನಿಖೆಗೆ ತೆಗೆದುಕೊಂಡಿದೆ.
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…