RIPPONPETE | ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿ ಸಾವು

RIPPONPETE |  ಅಕ್ರಮ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ವ್ಯಕ್ತಿ ಸಾವು

ಸದ್ದು ಮಾಡುತ್ತಿರುವ ಅಕ್ರಮ ನಾಡ ಬಂದೂಕುಗಳು – ಕಾನೂನಿಗೆ ಬಿಗಿ ಕಡಿವಾಣ ಅಗತ್ಯ

ಅನಧಿಕೃತ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಸಿಡಿದ ಗುಂಡು ವ್ಯಕ್ತಿಯೊಬ್ಬರನ್ನು ಬಲಿ ಪಡೆದುಕೊಂಡ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹಿರಿಯೋಗಿ ಗ್ರಾಮದಲ್ಲಿ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ.

ಮೃತರನ್ನು ಕೋಡೂರು ಸಮೀಪದ ಹಿರಿಯೋಗಿ ಗ್ರಾಮದ ದೇವರಾಜ (47) ಎಂದು ಗುರುತಿಸಲಾಗಿದೆ.

ಲೋಡ್ ಆಗಿದ್ದ ಅನಧಿಕೃತ ನಾಡ ಬಂದೂಕನ್ನು ಹಿಡಿದುಕೊಂಡು  ಮನೆಯ ಮೆಟ್ಟಿಲು ಹತ್ತುವಾಗ ಟ್ರಿಗರ್ ಎಳೆಯಲ್ಪಟ್ಟು ಗುಂಡು ಹಣೆಗೆ ತಾಗಿ ತಕ್ಷಣ ದೇವರಾಜ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಈ ದುರ್ಘಟನೆ ನಡೆದಾಗ ಪತ್ನಿ ಅಡುಗೆ ಮನೆಯಲ್ಲಿ ಕೆಲಸದಲ್ಲಿದ್ದು , ಮಕ್ಕಳು ಕೋಣೆಯಲ್ಲಿ ಓದುತ್ತಿದ್ದರು. ಮನೆ ಮುಂಭಾಗದಿಂದ ಏಕಾಏಕಿ ಗುಂಡಿನ ಸದ್ದು ಕೇಳಿ ಕೂಡಲೇ ಹೊರಬಂದ ಕುಟುಂಬಸ್ಥರು ರಕ್ತಸಿಕ್ತ ಸ್ಥಿತಿಯಲ್ಲಿ ದೇವರಾಜ್ ಬಿದ್ದಿರುವುದನ್ನು ಕಂಡಿದ್ದಾರೆ. ತಲೆಗೆ ಗುಂಡು ತಗುಲಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಅವರ ಪಕ್ಕದಲ್ಲಿಯೇ ಅಕ್ರಮ ನಾಡ ಬಂದೂಕು ಸಹ ಇತ್ತು ಎನ್ನಲಾಗಿದೆ.

ಈ ಕುರಿತಂತೆ ಪತ್ನಿ ನೀಡಿದ ದೂರಿನ ಆಧಾರದಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸದ್ದು ಮಾಡುತ್ತಿರುವ ಅಕ್ರಮ ನಾಡ ಬಂದೂಕುಗಳು – ಬಿಗಿ ಕಡಿವಾಣ ಅಗತ್ಯ

ಮಲೆನಾಡು ಭಾಗದಲ್ಲು ಇತ್ತೀಚೆಗೆ ನಾಡ ಬಂದೂಕುಗಳಿಂದ ಅಪಘಾತಗಳು ಹಾಗೂ ಅನಾಹುತಗಳು ಹೆಚ್ಚುತ್ತಿರುವುದು ಆತಂಕದ ವಿಚಾರವಾಗಿದೆ. ಅಕ್ರಮವಾಗಿ ತಯಾರಾಗುತ್ತಿರುವ ಹಾಗೂ ನಿಯಂತ್ರಣವಿಲ್ಲದೆ ಬಳಸಲಾಗುತ್ತಿರುವ ನಾಡ ಬಂದೂಕುಗಳು ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಸಹಜವಾಗಿಯೇ ಕಂಡುಬರುತ್ತಿವೆ. ಇವುಗಳನ್ನು ಬೇಟೆ, ಭದ್ರತೆ, ಅಥವಾ ಬೆದರಿಕೆ ಉದ್ದೇಶಕ್ಕೆ ಬಳಸುವ ಘಟನೆಗಳು ಮರುಮರು ಬೆಳಕಿಗೆ ಬರುತ್ತಿರುವುದರಿಂದ ಸಾರ್ವಜನಿಕ ಸುರಕ್ಷತೆಗೆ ದೊಡ್ಡ ಸವಾಲು ಎದುರಾಗುತ್ತಿದೆ.

ನಾಡ ಬಂದೂಕುಗಳು ಪರವಾನಗಿ ಇಲ್ಲದೆ ತಯಾರಾಗುವ ಕಾರಣ ಸರ್ಕಾರದ ಕಣ್ಗಾವಲು ತಪ್ಪುವುದು ಸಹಜ. ಇತ್ತೀಚಿನ ಕೆಲವು ಪ್ರಕರಣಗಳಲ್ಲಿ ಜೀವಹಾನಿ ಸಂಭವಿಸಿರುವುದರಿಂದ ಇವುಗಳನ್ನು ನಿಯಂತ್ರಿಸುವ ಅಗತ್ಯತೆ ಮತ್ತಷ್ಟು ಗಂಭೀರವಾಗಿದೆ.

ಅಕ್ರಮ ಬಂದೂಕು ತಯಾರಿಕೆ ಹಾಗೂ ಬಳಕೆಯನ್ನು ತಡೆಗಟ್ಟಲು ಪೊಲೀಸರು ಕಠಿಣ ಕ್ರಮ ಕೈಗೊಳ್ಳುವುದು ಅತ್ಯವಶ್ಯಕ. ಜಾಗೃತಿ ಮೂಡಿಸುವ ಮೂಲಕ ಹಾಗೂ ಕಾನೂನು ಬಿಗಿಗೊಳಿಸುವ ಮೂಲಕ ಮಾತ್ರ ಈ ಸಮಸ್ಯೆಗೆ ತಡೆ ಸಿಗಲಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

23 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

23 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

1 day ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

1 day ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

1 day ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

2 days ago