ರಿಪ್ಪನ್ ಪೇಟೆ ಬಾಲಕರ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ

ರಿಪ್ಪನ್ ಪೇಟೆ ಬಾಲಕರ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ

ರಿಪ್ಪನ್ ಪೇಟೆ : ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆಯ ಹಳೆಯ ಸಂತೇಮಾರ್ಕೆಟ್ ರಸ್ತೆಯಲ್ಲಿರುವ ಬಾಲಕರ ವಸತಿ ನಿಲಯಕ್ಕೆ ದಿಡೀರ್ ಭೇಟಿ ನೀಡಿದರು. ಯಾವುದೇ ಪೂರ್ವ ಸೂಚನೆ ಇಲ್ಲದೆ ದಿಡೀರ್ ಆಗಮಿಸಿ ಮಕ್ಕಳೊಂದಿಗೆ ಕಾಲ ಕಳೆದರು. ಸಾಮಾನ್ಯವಾಗಿ ಸಭಾಂಗಣಗಳಲ್ಲಿ, ವೇದಿಕೆಗಳ ಮೇಲೆ ಮಾತ್ರ ಕಾಣುವ ನಾಯಕರು ಈ ಬಾರಿ ಮಕ್ಕಳ ನಡುವೆ ನಿಂತು ಅವರ ಮಾತುಗಳನ್ನು ಗಮನದಿಂದ ಆಲಿಸಿದರು. ನಿಲಯದ ಸೌಕರ್ಯಗಳು, ಪರಿಸರ ಮತ್ತು ನಿರ್ವಹಣೆಯ ಬಗ್ಗೆ ಸಮಗ್ರ ಪರಿಶೀಲನೆ ನಡೆಸಿದರು.

ವಸತಿ ನಿಲಯದಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಅವರು, ಅವರ ದಿನನಿತ್ಯದ ಬದುಕು, ಆಹಾರ ವ್ಯವಸ್ಥೆ, ಶಿಕ್ಷಣದ ಅವಕಾಶಗಳು ಮತ್ತು ಮೂಲಭೂತ ಸೌಲಭ್ಯಗಳ ಕುರಿತು ನೇರವಾಗಿ ವಿಚಾರಿಸಿದರು.ಮಕ್ಕಳು ತಮ್ಮ ಶಾಲೆಯ ಅನುಭವ, ಹಾಸ್ಟೆಲ್ ಜೀವನ ಹಾಗೂ ದಿನನಿತ್ಯ ಎದುರಿಸುವ ಸವಾಲುಗಳನ್ನು ನಿರಾಳವಾಗಿ ಹಂಚಿಕೊಂಡರು. ಶಾಸಕರು ಮಕ್ಕಳೊಂದಿಗೆ ಹಾಸ್ಯವಾಡಿ,“ನಿಮ್ಮ ಕನಸುಗಳನ್ನು ನನಸು ಮಾಡಲು ಸರ್ಕಾರದ ಎಲ್ಲ ಸೌಲಭ್ಯಗಳನ್ನು ನಿಮ್ಮತ್ತ ತಂದುಕೊಡುವುದು ನಮ್ಮ ಕರ್ತವ್ಯ” ಎಂದು ಮಕ್ಕಳಿಗೆ ಧೈರ್ಯ ತುಂಬಿದ ಶಾಸಕರ ಮಾತು ಮಕ್ಕಳ ಮುಖದಲ್ಲಿ ಉತ್ಸಾಹವನ್ನು ಮೂಡಿಸಿತು ಇದೇ ಸಂದರ್ಭದಲ್ಲಿ ಉತ್ತಮವಾಗಿ ಓದುವ ಉತ್ತಮ ಅಂಕ ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಈ ಕುರಿತು ಶಾಸಕ ಗೋಪಾಲಕೃಷ್ಣ ಪ್ರತಿಕ್ರಿಯೆ ನೀಡುತ್ತಾ, “ಮಕ್ಕಳ ಭವಿಷ್ಯವೇ ನಮ್ಮ ದೇಶದ ಭವಿಷ್ಯ. ಅವರ ಶಿಕ್ಷಣ, ಆರೋಗ್ಯ ಮತ್ತು ಸೌಲಭ್ಯಗಳನ್ನು ಸುಧಾರಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.

ಶಾಸಕರ ಈ ಆಕಸ್ಮಿಕ ಭೇಟಿ ಮಕ್ಕಳಲ್ಲಿ ಸಂತೋಷದ ಅಲೆ ಹರಡಿತು. ಮಕ್ಕಳು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಳ್ಳಲು ಅವಕಾಶ ಸಿಕ್ಕ ಕಾರಣ ಹರ್ಷ ವ್ಯಕ್ತಪಡಿಸಿದರು. ಪೋಷಕರು ಹಾಗೂ ಸ್ಥಳೀಯರು ಶಾಸಕರ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿ, “ಈ ರೀತಿಯ ತಕ್ಷಣದ ಭೇಟಿಗಳು ಜನರ ಸಮಸ್ಯೆಗಳನ್ನು ನೇರವಾಗಿ ತಿಳಿಯಲು ಸಹಾಯಕವಾಗುತ್ತವೆ” ಎಂದು ಅಭಿಪ್ರಾಯಪಟ್ಟರು.

ಈ ಸಂಧರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ , ಮುಖಂಡರಾದ ಮಧುಸೂಧನ್ , ಉಮಾಕರ್ ಕಾನುಗೋಡು , ಪ್ರವೀಣ್ ಸುಳುಗೋಡು , ಪ್ರಕಾಶ್ ಪಾಲೇಕರ್ , ಅಬ್ದುಲ್ ರವೂಫ಼್ ಹಾಗು ಇನ್ನಿತರರು ಇದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

6 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

7 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

9 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

1 day ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

1 day ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

1 day ago