ಹೊಸನಗರವನ್ನು ಮಾದರಿ ನಗರವಾಗಿಸುವುದು ನನ್ನ ಗುರಿ – ಶಾಸಕ ಗೋಪಾಲಕೃಷ್ಣ ಬೇಳೂರು
81.14 ಲಕ್ಷ ರೂ. ಅನುದಾನದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ
ಹೊಸನಗರ: ಹೊಸನಗರವನ್ನು ಮಾದರಿ ನಗರವಾಗಿಸಲು ನಿರಂತರವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ಇಂದು ಹೊಸನಗರ ಪಟ್ಟಣ ಪಂಚಾಯತ್ನಿಂದ ನೂತನವಾಗಿ ನಿರ್ಮಿತವಾದ ಇಂದಿರಾ ಕ್ಯಾಂಟೀನ್ ಕಟ್ಟಡವನ್ನು ಉದ್ಘಾಟಿಸಿ, ಸುಮಾರು 81.14 ಲಕ್ಷ ರೂ. ಅನುದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಇಂದಿರಾ ಕ್ಯಾಂಟೀನ್ ಇಂದು ಹೊಸನಗರದಲ್ಲಿ ಉದ್ಘಾಟನೆಯಾಗಿದ್ದು, ಅಸಂಘಟಿತ ಕಾರ್ಮಿಕರು ಹಾಗೂ ಬಡಜನರಿಗೆ ಇದು ಉಪಯುಕ್ತವಾಗಲಿದೆ. ಕಡಿಮೆ ದರದಲ್ಲಿ ಉಪಹಾರ ಮತ್ತು ಊಟವನ್ನು ಪಡೆಯುವ ಸೌಲಭ್ಯ ಒದಗಿಸಲಾಗಿದ್ದು, ವಿದ್ಯಾರ್ಥಿಗಳು, ಆಸ್ಪತ್ರೆಗೆ ಬರುವವರು ಹಾಗೂ ಬಡ ಜನರು ಇದರಿಂದ ಸದುಪಯೋಗ ಪಡೆಯಬೇಕು ಎಂದು ಶಾಸಕ ಗೋಪಾಲಕೃಷ್ಣ ತಿಳಿಸಿದರು. ಜೊತೆಗೆ, ಗುಣಮಟ್ಟದ ಆಹಾರ ವಿತರಣೆ ಮಾಡುವಂತೆ ಸಿಬ್ಬಂದಿಗೆ ಸೂಚಿಸಿದರು.
81.14 ಲಕ್ಷ ರೂ. ಅನುದಾನದಲ್ಲಿ ಕೈಗೊಳ್ಳಲಿರುವ ಪ್ರಮುಖ ಕಾಮಗಾರಿಗಳು:
ಹೊಸನಗರ ಬಸ್ ನಿಲ್ದಾಣದ ಮುಂಭಾಗ ವಾಣಿಜ್ಯ ಮಳಿಗೆ ನಿರ್ಮಾಣ
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ನಾಗಪ್ಪ, ಉಪಾಧ್ಯಕ್ಷೆ ಚಂದ್ರಕಲಾ, ಸದಸ್ಯರಾದ ಸಿಂತಿಯ ಸೇರವೋ, ಶಾಹಿನಾ ನಾಸಿರ್, ಗುರುರಾಜ್, ನಿತ್ಯಾನಂದ, ಗುರುರಾಜ್ ಕೆ.ಎಸ್., ತಹಶೀಲ್ದಾರ್ ರಶ್ಮಿ ಹೆಚ್.ಜೆ., ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಹರೀಶ್ ಎಂ.ಎನ್., ಚಂದ್ರಮೌಳಿ ಬಿ.ಜಿ., ಚಿದಂಬರ್ ಹೂವಿನಕೋಣೆ, ಸುಮಾ ಸುಬ್ರಮಣ್ಯ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.
ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್ಪೇಟೆಯ ನಿಯಾಜ್ ನಾಸಿರ್ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…