ಹೊಸನಗರವನ್ನು ಮಾದರಿ ನಗರವಾಗಿಸುವುದು ನನ್ನ ಗುರಿ – ಶಾಸಕ ಗೋಪಾಲಕೃಷ್ಣ ಬೇಳೂರು

ಹೊಸನಗರವನ್ನು ಮಾದರಿ ನಗರವಾಗಿಸುವುದು ನನ್ನ ಗುರಿ – ಶಾಸಕ ಗೋಪಾಲಕೃಷ್ಣ ಬೇಳೂರು

81.14 ಲಕ್ಷ ರೂ. ಅನುದಾನದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ

ಹೊಸನಗರ: ಹೊಸನಗರವನ್ನು ಮಾದರಿ ನಗರವಾಗಿಸಲು ನಿರಂತರವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಇಂದು ಹೊಸನಗರ ಪಟ್ಟಣ ಪಂಚಾಯತ್‌ನಿಂದ ನೂತನವಾಗಿ ನಿರ್ಮಿತವಾದ ಇಂದಿರಾ ಕ್ಯಾಂಟೀನ್ ಕಟ್ಟಡವನ್ನು ಉದ್ಘಾಟಿಸಿ, ಸುಮಾರು 81.14 ಲಕ್ಷ ರೂ. ಅನುದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಇಂದಿರಾ ಕ್ಯಾಂಟೀನ್ ಇಂದು ಹೊಸನಗರದಲ್ಲಿ ಉದ್ಘಾಟನೆಯಾಗಿದ್ದು, ಅಸಂಘಟಿತ ಕಾರ್ಮಿಕರು ಹಾಗೂ ಬಡಜನರಿಗೆ ಇದು ಉಪಯುಕ್ತವಾಗಲಿದೆ. ಕಡಿಮೆ ದರದಲ್ಲಿ ಉಪಹಾರ ಮತ್ತು ಊಟವನ್ನು ಪಡೆಯುವ ಸೌಲಭ್ಯ ಒದಗಿಸಲಾಗಿದ್ದು, ವಿದ್ಯಾರ್ಥಿಗಳು, ಆಸ್ಪತ್ರೆಗೆ ಬರುವವರು ಹಾಗೂ ಬಡ ಜನರು ಇದರಿಂದ ಸದುಪಯೋಗ ಪಡೆಯಬೇಕು ಎಂದು ಶಾಸಕ ಗೋಪಾಲಕೃಷ್ಣ ತಿಳಿಸಿದರು. ಜೊತೆಗೆ, ಗುಣಮಟ್ಟದ ಆಹಾರ ವಿತರಣೆ ಮಾಡುವಂತೆ ಸಿಬ್ಬಂದಿಗೆ ಸೂಚಿಸಿದರು.

81.14 ಲಕ್ಷ ರೂ. ಅನುದಾನದಲ್ಲಿ ಕೈಗೊಳ್ಳಲಿರುವ ಪ್ರಮುಖ ಕಾಮಗಾರಿಗಳು:

ಹೊಸನಗರ ಬಸ್ ನಿಲ್ದಾಣದ ಮುಂಭಾಗ ವಾಣಿಜ್ಯ ಮಳಿಗೆ ನಿರ್ಮಾಣ

  • ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಹೈ ಮಾಸ್ಕ್ ಲೈಟ್ ಅಳವಡಿಕೆ
  • ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವೇದಿಕೆ ಮುಂಭಾಗ ಮೇಲ್ಚಾವಣಿ ನಿರ್ಮಾಣ ಹಾಗೂ ಶೌಚಾಲಯ
  • ಸರ್ಕಾರಿ ಗಂಡು ಮಕ್ಕಳ ಶಾಲೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಕೊಠಡಿಗಳ ಉನ್ನತೀಕರಣ
  • ಸರ್ಕಾರಿ ಉರ್ದು ಶಾಲೆಗೆ ರಂಗಮಂದಿರ ನಿರ್ಮಾಣ

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ನಾಗಪ್ಪ, ಉಪಾಧ್ಯಕ್ಷೆ ಚಂದ್ರಕಲಾ, ಸದಸ್ಯರಾದ ಸಿಂತಿಯ ಸೇರವೋ, ಶಾಹಿನಾ ನಾಸಿರ್, ಗುರುರಾಜ್, ನಿತ್ಯಾನಂದ, ಗುರುರಾಜ್ ಕೆ.ಎಸ್., ತಹಶೀಲ್ದಾರ್ ರಶ್ಮಿ ಹೆಚ್.ಜೆ., ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಹರೀಶ್ ಎಂ.ಎನ್., ಚಂದ್ರಮೌಳಿ ಬಿ.ಜಿ., ಚಿದಂಬರ್ ಹೂವಿನಕೋಣೆ, ಸುಮಾ ಸುಬ್ರಮಣ್ಯ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ

ಜಿಂಕೆ ಮಾಂಸ ಸಾಗಾಟದ ಆರೋಪ: 34 ಕೆ.ಜಿ.ಗೂ ಅಧಿಕ ಮಾಂಸ ವಶ, ಓರ್ವ ಬಂಧನ Forest mobile squad seizes…

4 hours ago

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ

ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…

20 hours ago

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ

ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…

20 hours ago

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು

ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…

20 hours ago

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !?

ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…

1 day ago

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು

ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…

1 day ago