ಹೊಸನಗರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನಾಗೋಡಿ ವಿಶ್ವನಾಥ್ ಹಾಗೂ ಉಬೇದುಲ್ಲಾ ಷರೀಫ್ ನೇಮಕ

ಶಿವಮೊಗ್ಗ: ಜಿಲ್ಲೆಯ ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರನ್ನಾಗಿ ನಿಟ್ಟೂರು ಗ್ರಾಮ ಪಂಚಾಯ್ತಿ ಸದಸ್ಯ, ಯುವ ಮುಖಂಡ ನಾಗೋಡಿ ವಿಶ್ವನಾಥ್ ಹಾಗೂ ಕೆಂಚನಾಲ ಗ್ರಾಪಂ ಮಾಜಿ ಅಧ್ಯಕ್ಷ ಉಬೇದುಲ್ಲಾ ಷರೀಫ್ ಅವರನ್ನು ನೇಮಕ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ( KPCC) ಆದೇಶಿಸಿದೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಬ್ಲಾಕ್ ಕಾಂಗ್ರೆಸ್ ಸಮಿತಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಶಿಫಾರಸ್ಸಿನ ಮೇರೆಗೆ ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರನ್ನಾಗಿ ನಾಗೋಡಿ ವಿಶ್ವನಾಥ್ ಹಾಗೂ ಉಬೇದುಲ್ಲಾ ಷರೀಫ್ ಅವರನ್ನು ನೇಮಿಸಿ ಅಧಿಕೃತ ಆದೇಶ ಮಾಡಲಾಗಿದೆ.

ಹೊಸನಗರ ಯುವ ಸಂಘಟಕನಿಗೆ ಒಲಿದ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನ

ವಿದ್ಯಾರ್ಥಿ ದೆಸೆಯಿಂದಲೂ ನಿಟ್ಟೂರು ಭಾಗದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಗುರ್ತಿಸಿಕೊಂಡಿದ್ದವರು ನಾಗೋಡಿ ವಿಶ್ವನಾಥ್. ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ತಮ್ಮ ಕಾಲೇಜು ದಿನಗಳಿಂದಲೇ ತೊಡಗಿಸಿಕೊಂಡಿದ್ದರು.

ಕಾಂಗ್ರೆಸ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ಅನುಯಾಯಿಯಾಗಿ, ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಅಭಿಮಾನಿಯಾಗಿ, ಕಲಗೋಡು ರತ್ನಾಕರ್ ಹಾಗೂ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಅವರ ನಿಕಟವರ್ತಿಯಾಗಿ ನಿಟ್ಟೂರು ಭಾಗದಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ನಾಗೋಡಿ ವಿಶ್ವನಾಥ್ ತೊಡಗಿಸಿಕೊಂಡಿದ್ದಾರೆ.

ಸುಮಾರು 25 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಕಟ್ಟಾಳುವಾಗಿ ನಾಗೋಡಿ ವಿಶ್ವನಾಥ್ ನಿಟ್ಟೂರು ಭಾಗದಲ್ಲಿ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಡಿಗ್ರಿ ವೇಳೆಯಲ್ಲೇ ಯುವಕರನ್ನು ಕಾಂಗ್ರೆಸ್ ಪಕ್ಷಕ್ಕೆ ಆಕರ್ಷಿಸಿ, ಪಕ್ಷಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದರು. ಆ ಮೂಲಕ ಕಾಂಗ್ರೆಸ್ ಪಕ್ಷವನ್ನು ಕಟ್ಟೋದಕ್ಕೆ ಶ್ರಮಿಸಿದ್ದರು. ಇಂತಹ ನಾಗೋಡಿ ವಿಶ್ವನಾಥ್ ಅವರ ಪಕ್ಷನಿಷ್ಠೆಯನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಗುರುತಿಸಿ ಪ್ರೋತ್ಸಾಹಿಸಿದ್ದರು.

ನಿಟ್ಟೂರು ಗ್ರಾಮ ಪಂಚಾಯ್ತಿ ಸದಸ್ಯರಾಗಿರುವಂತ ನಾಗೋಡಿ ವಿಶ್ವನಾಥ್ ಗೆ, ಹೊಸನಗರ ಬ್ಲಾಕ್ ಕಾಂಗ್ರೆಸ್ ನಲ್ಲಿ ಕಾರ್ಯಕಾರಿ ಸಮಿತಿಯ ಸದಸ್ಯ ಸ್ಥಾನವನ್ನೂ ನೀಡಲಾಗಿತ್ತು. ಇದೀಗ ಯುವ ಮುಖಂಡ ನಾಗೋಡಿ ವಿಶ್ವನಾಥ್ ಗೆ ಇದೀಗ ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಪಕ್ಷ ಸಂಘಟನೆಯ ಜವಾಬ್ದಾರಿ ನೀಡಿದೆ. ಇಂತಹ ನಾಗೋಡಿ ವಿಶ್ವನಾಥ್ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಮತ್ತಷ್ಟು ಅವಕಾಶ ಸಿಗಲಿ, ಇನ್ನೂ ಉನ್ನತ ಮಟ್ಟಕ್ಕೆ ಬೆಳೆಯಲಿ ಎಂಬುದಾಗಿ ಅವರ ಅಭಿಮಾನಿಗಳು, ಹಿತೈಶಿಗಳು ಶುಭ ಹಾರೈಸಿದ್ದಾರೆ.

ಕೆಂಚನಾಲ ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಪಕ್ಷ ಸಂಘಟಕ ಉಬೇದುಲ್ಲಾ ಗೆ ಒಲಿದ ಉಪಾಧ್ಯಕ್ಷ ಸ್ಥಾನ

ಹೊಸನಗರ ತಾಲೂಕಿನ ಕೆರೆಹಳ್ಳಿ ಹೋಬಳಿಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಗೆ ತಮ್ಮದೇ ಆದ ಕೊಡುಗೆಯನ್ನು ನೀಡಿರುವ ಉಬೇದುಲ್ಲಾ ಷರೀಫ್, ಪಕ್ಷದ ನಿಷ್ಠೆಯ ಪ್ರತೀಕವಾಗಿ ಹೆಸರಾಗಿದ್ದಾರೆ. ಸಂಘಟಿತ ರೀತಿಯಲ್ಲಿ ಕಾರ್ಯ ನಿರ್ವಹಿಸುವ ಸಾಮರ್ಥ್ಯ ಹಾಗೂ ಜನಸಂಪರ್ಕದ ನೈಪುಣ್ಯದಿಂದ ಅವರು ಸದಾ ಪಕ್ಷದ ಹಿತಕ್ಕಾಗಿ ದುಡಿಯುತ್ತ ಬಂದಿದ್ದಾರೆ. ಕೆಂಚನಾಲ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಅವರು ಎರಡು ಬಾರಿ ಅಧಿಕಾರ ವಹಿಸಿ, ಗ್ರಾಮೀಣ ಅಭಿವೃದ್ಧಿ, ಮೂಲಸೌಕರ್ಯ ಸುಧಾರಣೆ ಹಾಗೂ ಜನಜೀವನ ಸುಧಾರಣೆಗೆ ಅನೇಕ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದಾರೆ. ಪರಿಣಾಮವಾಗಿ ಅವರು ಜನಮನ್ನಣೆಗೆ ಪಾತ್ರರಾಗಿದ್ದಾರೆ.

ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಅವಧಿಯಲ್ಲಿ ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ, ಸಮಾನತೆ ಹಾಗೂ ಪಾರದರ್ಶಕ ಆಡಳಿತದ ಮೂಲಕ ಜನರ ವಿಶ್ವಾಸವನ್ನು ಗಳಿಸಿದ ಉಬೇದುಲ್ಲಾ ಷರೀಫ್, ಕಾಂಗ್ರೆಸ್ ಪಕ್ಷದ ತತ್ವ-ಮೌಲ್ಯಗಳನ್ನು ನೆಲಸಮೃದ್ಧಿಯಲ್ಲಿ ಅಳವಡಿಸುವ ಕಾರ್ಯವನ್ನು ಮಾಡಿದ್ದಾರೆ. ಗ್ರಾಮಾಂತರದಲ್ಲಿ ಯುವಕರನ್ನು ರಾಜಕೀಯ ಚಟುವಟಿಕೆಗಳತ್ತ ಸೆಳೆಯಲು ಹಾಗೂ ಪಕ್ಷದ ಭವಿಷ್ಯ ಬಲಪಡಿಸಲು ಅವರು ಮಹತ್ವದ ಸೇತುವೆಯಾಗಿದ್ದಾರೆ.

ಇದೀಗ ಉಬೇದುಲ್ಲಾ ಷರೀಫ್ ಅವರಿಗೆ ಒಲಿದ ಹೊಸ ಹುದ್ದೆಯ ಮೂಲಕ ಈ ಭಾಗದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತಷ್ಟು ಬಲವರ್ಧನೆ ಹೊಂದಲಿದೆ ಎಂಬ ವಿಶ್ವಾಸ ವ್ಯಕ್ತವಾಗಿದೆ. ಪಕ್ಷದ ಹಿತಕ್ಕಾಗಿ ತಮ್ಮ ಶ್ರಮವನ್ನು ಮೀಸಲಿಟ್ಟಿರುವ ಅವರಂತಹ ನಾಯಕರು ಸಕ್ರಿಯವಾಗಿ ಮುಂದಾಗಿರುವುದರಿಂದ ಕಾಂಗ್ರೆಸ್ ಪಕ್ಷವು ಜನಆಕರ್ಷಣೆಯ ಕೇಂದ್ರವಾಗುವ ನಿರೀಕ್ಷೆ ಮೂಡಿದೆ. ಈ ನೇಮಕಾತಿ ಸ್ಥಳೀಯ ಮಟ್ಟದಲ್ಲಿ ಹೊಸ ಚೈತನ್ಯವನ್ನು ತುಂಬಿ, ಪಕ್ಷದ ಭವಿಷ್ಯ ದೃಢಪಡಿಸುವಲ್ಲಿ ನಿರ್ಣಾಯಕ ಹೆಜ್ಜೆಯಾಗಿದೆ.

ಹೀಗಿದೆ ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಪದಾಧಿಕಾರಿಗಳ ಪಟ್ಟಿ

ಅಧ್ಯಕ್ಷರು

ಜಿ. ಚಂದ್ರಮೌಳಗೌಡ, ಕೋಡೂರು

ಉಪಾಧ್ಯಕ್ಷರು

ನಾಗೋಡಿ ವಿಶ್ವನಾಥ್, ನಿಟ್ಟೂರು

ಓಬೆದ್ದುಲ್ಲಾ ಶರೀಫ್, ಕೆಂಚನಾಲ

ಚನ್ನಬಸವ, ಜಯನಗರ

ಲೀಲಾವತಿ, ಬಾಳೂರು

ಪ್ರಧಾನ ಕಾರ್ಯದರ್ಶಿಗಳು

ಎಂ.ಪಿ ಸುರೇಶ್, ಹೊಸನಗರ ಟೌನ್

ಸದಾಶಿವ ಶ್ರೇಷ್ಠಿ, ಹೊಸನಗರ ಟೌನ್

ಖಜಾಂಚಿ – ವಿನಯ್ ಕುಮಾರ್, ದುಮ್ಮ

ಕಾರ್ಯದರ್ಶಿಗಳು

ಉಮೇಶ್ ಹೂವಿನಕೋಣೆ

ಶುಭಕರ ರಾಮ್ ಪೂಜಾರಿ, ಜಯನಗರ

ಸುರೇಶ್ ಎಸ್ ಪಿ, ಕೋಡೂರು

ಚಂದ್ರಯ್ಯ ಜೈನ್, ನಾಗೋಡಿ

ಶಿವಪ್ಪ ಬೆಳ್ಳೂರು, ಗುಬ್ಬಿಗ

ಸಂಘಟನಾ ಕಾರ್ಯದರ್ಶಿಗಳು

ಇಂದ್ರೇಶ್, ಮಾರುತಿ ನಗರ

ಪಿಯುಸ್ ರೋಡ್ರಿಗಸ್, ಅರಸಾಳು

ರಾಮಪ್ಪ, ಮುತ್ತಲ

ಸಂತೋಷ್, ಹರಿದ್ರಾವತಿ

ಚಂದ್ರಶೇಖರ್, ನವಲೋಡಿ

ಕಾರ್ಯಕಾರಿ ಸಮಿತಿ ಸದಸ್ಯರು

ಉಮೇಶ್, ಬಾಳೂರು

ಗಣಪತಿ, ಮಾರನಕಟ್ಟೆ

ಸುಬ್ಬಣ್ಣ, ಕಾರಕ್ಕಿ

ಮಾಧವ ಶೆಟ್ಟಿ, ಜೇನಿ

ಪ್ರಶಾಂತ್ ಕುಮಾರ್ ಹೆಚ್, ಹುಂಚಾರೋಡ್

ನಾಸಿರ್, ಕಚ್ಚಿಗೆಬೈಲ್

ನಾಗರಾಜ್, ಅರಸಾಳು

ಇಕ್ಬಾಲ್, ಬಟ್ಟೆಮಲ್ಲಪ್ಪ

ಲೋಕೇಶ್, ಗುಡ್ಡೆಕೊಪ್ಪ

ಮೃತ್ಯುಂಜಯ, ಪುರಪ್ಪೆಮನೆ

ನಿರ್ಮಲ, ನವಟೂರು

ದೀಪಿಕಾ ಕೃಷ್ಣ, ಮಾರುತಿನಗರ

ನೇಮಪ್ಪ ಬಂಡಿ, ರಿಪ್ಪನ್ ಪೇಟೆ

ಧನಲಕ್ಷ್ಮೀ, ರಿಪ್ಪನ್ ಪೇಟೆ

ಕೃಷ್ಣಮೂರ್ತಿ, ಕಳೂರು

ಪ್ರಕಾಶ್ ಪಾಲೇಕರ್, ರಿಪ್ಪನ್ ಪೇಟೆ

ಕೃಷ್ಣೋಜಿ, ಕೆಂಚನಾಲ

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

17 hours ago

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…

17 hours ago

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…

18 hours ago

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

20 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

24 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

1 day ago