ಅನರ್ಹ BPL ರೇಷನ್ ಕಾರ್ಡ್ ದಾರರಿಗೆ ಬಿಗ್ ಶಾಕ್ : ನೋಟಿಸ್ ಗೆ ಉತ್ತರಿಸದಿದ್ದರೆ ಈ ತಿಂಗಳಿನಿಂದ ಪಡಿತರ ಕಟ್..!!

ಅನರ್ಹ BPL ರೇಷನ್ ಕಾರ್ಡ್ ದಾರರಿಗೆ ಬಿಗ್ ಶಾಕ್ : ನೋಟಿಸ್ ಗೆ ಉತ್ತರಿಸದಿದ್ದರೆ ಈ ತಿಂಗಳಿನಿಂದ ಪಡಿತರ ಕಟ್..!!

ರಾಜ್ಯಾದ್ಯಂತ ಬರೋಬ್ಬರಿ 12,68,097 ಅನುಮಾನಾಸ್ಪದ ರೇಷನ್ ಕಾರ್ಡ್ಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ 8 ಲಕ್ಷ ರೇಷನ್ ಕಾರ್ಡ್ಗಳನ್ನು ರದ್ದುಗೊಳಿಸಲು ಆಹಾರ ಇಲಾಖೆ ಮುಂದಾಗಿದೆ.

ಆಹಾರ ಇಲಾಖೆಯ ವಿಶೇಷ ಕಾರ್ಯಾಚರಣೆ ವೇಳೆ ರಾಜ್ಯದಲ್ಲಿ ಬರೋಬ್ಬರಿ 8 ಲಕ್ಷ ಮಂದಿ ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ ಎನ್ನುವ ಮಾಹಿತಿಯನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯೇ ನೀಡಿದೆ.

ಹೀಗಾಗಿ ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲು ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ.

ಬೆಂಗಳೂರು ನಗರದಲ್ಲೇ 1 ಲಕ್ಷಕ್ಕೂ ಅಧಿಕ ಮಂದಿ ಬಿಪಿಎಲ್ ಕಾರ್ಡ್ ಹೊಂದಿರುವುದು ಪತ್ತೆಯಾಗಿದೆ. ಇಲಾಖೆ ನಡೆಸಿದ ವಿಶೇಷ ಕಾರ್ಯಾಚರಣೆ ವೇಳೆ 12,68,097 ಅನುಮಾನಾಸ್ಪದ ರೇಷನ್ ಕಾರ್ಡ್ಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ 8 ಲಕ್ಷ ರೇಷನ್ ಕಾರ್ಡ್ಗಳನ್ನು ರದ್ದುಗೊಳಿಸಲು ತೀರ್ಮಾನಿಸಲಾಗಿದ್ದು ಈ ಬಗ್ಗೆ ಶೀಘ್ರವೇ ಆಹಾರ ಇಲಾಖೆ ಸರ್ಕಾರಕ್ಕೆ ಈ ಬಗ್ಗೆ ಅಧಿಕೃತ ವರದಿ ಸಲ್ಲಿಸಲಿದೆ.

12 ಲಕ್ಷ ಬಿಪಿಎಲ್ ಕಾರ್ಡ್ಗಳನ್ನು ಶಂಕಾಸ್ಪದ ಎಂದು ಗುರುತಿಸಿದ್ದ ರಾಜ್ಯದ ಆಹಾರ ಇಲಾಖೆ, ಇದೀಗ ಮಾನದಂಡ ಉಲ್ಲಂಘಿಸಿದ ಪಡೆದಿ ರುವ ಅನರ್ಹ ಬಿಪಿಎಲ್ ಕಾರ್ಡ್ಗಳಿಗೆ ಆಹಾ ರ ಇಲಾಖೆ, ಕಾರಣ ಕೇಳಿ ನೋಟಿಸ್ ಕೊಟ್ಟಿದೆ. ನೋಟಿಸ್ ತಲುಪಿದ ಮೂರು ದಿನದೊಳಗೆ ಅಗತ್ಯ ದಾಖಲೆಗಳೊಂದಿಗೆ ಲಿಖಿತ ಸಮಜಾ ಯಿಷಿ ನೀಡಬೇಕೆಂದು ಸೂಚಿಸಿದೆ.

ಸಮರ್ಪಕ ಸಮಜಾಯಿಷಿ ನೀಡದಿದ್ದರೆ ಕಾನೂನು ಕ್ರಮದ ಜತೆಗೆ ದುರುಪಯೋಗ ಪಡಿಸಿಕೊಂಡಿದ್ದ ಪಡಿತರ ಬಾಬಿನ ಪ್ರಮಾಣ ವನ್ನು ಮುಕ್ತ ಮಾರುಕಟ್ಟೆ ದರದಲ್ಲಿ ಲೆಕ್ಕಹಾಕಿ ವಸೂಲಿ ಮಾಡುವುದಾಗಿ ಇಲಾಖೆಯು ಅನರ್ಹ ಫಲಾನುಭವಿಗಳಿಗೆ ಎಚ್ಚರಿಕೆ ನೀಡಿದೆ.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅನ್ವ ಯ ಬಿಪಿಎಲ್ ಹೊಂದಿರುವ ಫಲಾನುಭವಿಗಳ ನ್ನು ಗುರುತಿಸಲು ಸರ್ಕಾರ ಮಾನದಂಡ ನಿಗದಿ ಪಡಿಸಿದೆ. ಅದರಂತೆ, ವಿವಿಧ ಇಲಾಖೆಗಳ ದತ್ತಾಂಶಗಳನ್ನು ಪರಿಶೀಲಿಸಿದ್ದು, ಮಾನದಂಡಗಳಿಗೆ ವಿರುದ್ಧವಾಗಿರುವ ಶಂಕಿತ ಪಡಿತರಚೀಟಿಗಳನ್ನು ಗುರುತಿಸುವ ಕಾರ್ಯ ನಡೆ ಯುತ್ತಿದೆ ಎಂದು ನೋಟಿಸ್ನಲ್ಲಿ ಇಲಾಖೆ ಉಲ್ಲೇಖಿಸಿದೆ.

ಶಂಕಾಸ್ಪದ ಕಾರ್ಡ್ಗಳಿಗೆ ಪಡಿತರ ವಿತರಿಸದಂತೆ ನ್ಯಾಯಬೆಲೆ ಅಂಗಡಿಗಳಿಗೆ ಇಲಾಖೆ ಸೂಚನೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಪ್ರಸಕ್ತ ತಿಂಗಳಿಂದ ಶಂಕಾಸ್ಪದ ಕಾರ್ಡ್ ಫಲಾನುಭವಿಗಳಿಗೆ ಅಕ್ಕಿ ಹಂಚಿಕೆಯಾಗುವುದಿಲ್ಲ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ

ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…

9 hours ago

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು

ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…

9 hours ago

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ

ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…

10 hours ago

ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…

14 hours ago

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ

ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…

14 hours ago

ಬೀದಿ ನಾಯಿಗಳ ದಾಳಿಗೆ ಆರು ಕುರಿ ಮರಿಗಳು ಸಾವು

ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…

14 hours ago