ರಿಪ್ಪನ್ ಪೇಟೆ ಗಣಪತಿ ರಾಜಬೀದಿ ಉತ್ಸವ – ಜುಮ್ಮಾ ಮಸೀದಿ ವತಿಯಿಂದ ಭಕ್ತಾಧಿಗಳಿಗೆ ಪಾನೀಯ ವಿತರಣೆ

ರಿಪ್ಪನ್ ಪೇಟೆ ಗಣಪತಿ ರಾಜಬೀದಿ ಉತ್ಸವ – ಜುಮ್ಮಾ ಮಸೀದಿ ವತಿಯಿಂದ ಭಕ್ತಾಧಿಗಳಿಗೆ ಪಾನೀಯ ವಿತರಣೆ

ರಿಪ್ಪನ್ ಪೇಟೆ : ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸೇವಾ ಸಮಿತಿಯ 58ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವದಲ್ಲಿ ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸಿಹಿ ಹಾಗೂ ಪಾನೀಯ ವಿತರಿಸಿ ಸೌಹಾರ್ಧ ಮೆರೆಯಲಾಯಿತು.

ಗಣಪತಿಯ ರಾಜಬೀದಿ ಉತ್ಸವ ಹೊಸನಗರ ರಸ್ತೆಯ ನೆಹರು ಬಡಾವಣೆ ಸಮೀಪ ಆಗಮಿಸುತಿದ್ದಂತೆ ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ , ಈದ್ ಮಿಲಾದ್ ಸಮಿತಿ , ಮೆಕ್ಕಾ ಮಸೀದಿ , ಅಲ್ ಬದ್ರಿಯಾ ಮಸೀದಿ , ಎಸ್ ಎಸ್ ಎಫ಼್ ಹಾಗೂ ಸಮಸ್ಥ ಮುಸ್ಲಿಂ ಬಾಂಧವರ ವತಿಯಿಂದ ಶ್ರೀ ಸ್ವಾಮಿಯ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಭಕ್ತಾಧಿಗಳಿಗೆ ಸಿಹಿ ಹಾಗೂ ತಂಪು ಪಾನೀಯ ಹಂಚಿ ಗಣಪತಿಗೆ ಮಾಲಾರ್ಪಣೆ ಮಾಡುವ ಮೂಲಕ ಸೌಹಾರ್ಧ ಮೆರೆದರು.

ಕೇವಲ ಆಹಾರ – ಪಾನೀಯ ವಿತರಿಸುವುದರಲ್ಲಿ ಮಾತ್ರ ಸೀಮಿತವಾಗದೇ, ಧರ್ಮಭಾವನೆಯನ್ನು ಮೀರಿದ ಸಹೋದರತ್ವದ ಭಾವನೆ ಇಲ್ಲಿ ಗೋಚರಿಸಿತು. ಮುಸ್ಲಿಂ ಸಮಾಜದ ಯುವಕರು ಹಾಗೂ ಸಂಘ ಸಂಸ್ಥೆಗಳ ಸದಸ್ಯರು ತಮ್ಮದೇ ಆದ ಉತ್ಸಾಹದಿಂದ ಈ ಕಾರ್ಯದಲ್ಲಿ ತೊಡಗಿದ್ದರು. ಅವರು ಭಕ್ತರ ಮೇಲೆ ಹೃದಯಸ್ಪರ್ಶಿ ಆತಿಥ್ಯ ತೋರಿದ ರೀತಿಯು ಹಾಜರಿದ್ದ ಎಲ್ಲರ ಗಮನ ಸೆಳೆಯಿತು.

ಇಂತಹ ಸೌಹಾರ್ಧದ ದೃಶ್ಯಗಳು ರಿಪ್ಪನ್ ಪೇಟೆಯಲ್ಲಿ ಹೊಸದಲ್ಲ. ಕಳೆದ ವರ್ಷವೂ ಗಣಪತಿಯ ರಾಜಬೀದಿ ಉತ್ಸವದ ಸಂದರ್ಭದಲ್ಲಿ ಪಟ್ಟಣದ ಮುಸ್ಲಿಂ ಯುವಕರು ಭಕ್ತರಿಗೆ ತಂಪು ಪಾನೀಯ ವಿತರಿಸಿದ್ದರು. ಅದೇ ರೀತಿಯಲ್ಲಿ, ಈದ್ ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ಹಿಂದೂ ಯುವಕರು ಮುಸ್ಲಿಂ ಬಾಂಧವರಿಗೆ ತಂಪು ಪಾನೀಯ ಹಾಗೂ ಉಪಹಾರ ಹಂಚುವ ಮೂಲಕ ಧಾರ್ಮಿಕ ಸೌಹಾರ್ಧದ ಗಟ್ಟಿಯಾದ ಸಂದೇಶವನ್ನು ನೀಡಿದ್ದರು. ಈ ಸಾಂಪ್ರದಾಯಿಕ ವಿನಿಮಯವೇ ಸಮಾಜದಲ್ಲಿ ಶಾಂತಿ, ಸಹಕಾರ ಹಾಗೂ ಸ್ನೇಹಾಭಿವೃದ್ಧಿಗೆ ದಾರಿ ಮಾಡಿಕೊಡುತ್ತಿದೆ.

ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ರಾಜಬೀದಿ ಉತ್ಸವವು ಕೇವಲ ಧಾರ್ಮಿಕ ಆಚರಣೆಗಷ್ಟೇ ಸೀಮಿತವಾಗದೇ, ಸಮಾನತೆಯ, ಬಾಂಧವ್ಯದ ಹಾಗೂ ಸಹಬಾಳ್ವೆಯ ಉತ್ಸವವಾಗಿಯೂ ಬೆಳಗಿತು. ಮೆರವಣಿಗೆಯಲ್ಲಿ ಪಾಲ್ಗೊಂಡ ಭಕ್ತಾದಿಗಳು, ಸ್ಥಳೀಯ ಸಂಘ ಸಂಸ್ಥೆಗಳು ಹಾಗೂ ಧಾರ್ಮಿಕ ಸಮಿತಿಗಳು ಎಲ್ಲರೂ ಒಟ್ಟಾಗಿ ಈ ಉತ್ಸವವನ್ನು ಸ್ಮರಣೀಯವಾಗಿಸಲು ಕಾರಣರಾದರು.

ಸರ್ವಧರ್ಮ ಸೌಹಾರ್ಧದ ಹಾದಿಯಲ್ಲಿ ಸಾಗುತ್ತಿರುವ ರಿಪ್ಪನ್ ಪೇಟೆ ಪಟ್ಟಣ, ಸಾಮಾಜಿಕ ಐಕ್ಯತೆಗಾಗಿ ಮತ್ತೊಮ್ಮೆ ಮಾದರಿಯಾಗಿದೆ.

ಈ ಸಂಧರ್ಭದಲ್ಲಿ ಮೊಹಿಯುದ್ದೀನ್ ಜುಮ್ಮಾ ಮಸೀದಿ ಅಧ್ಯಕ್ಷ ಹಸನಬ್ಬ ಬ್ಯಾರಿ, ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿ ಅಧ್ಯಕ್ಷ ಸುಧೀರ್ ಪಿ ,ಕಾರ್ಯದರ್ಶಿ ಮುರುಳಿ ಕೆರೆಹಳ್ಳಿ ಮುಖಂಡರಾದ ಅರ್ ಎ ಚಾಬುಸಾಬ್ , ಎಂ ಬಿ ಮಂಜುನಾಥ್ , ಆಸೀಫ಼್ ಭಾಷಾ, ನಿರೂಪ್ ಕುಮಾರ್ , ಹಸನಾರ್ ,ರವೀಂದ್ರ ಕೆರೆಹಳ್ಳಿ , ರಾಮಚಂದ್ರ ಬಳೆಗಾರ್ ,ಅಫ಼್ಜಲ್ ಬ್ಯಾರಿ , ಅಕ್ಬರ್ , ಮೈದಿನ್ ಆರ್ ಹೆಚ್ ಹಾಗೂ ಇನ್ನಿತರರು ಇದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

13 hours ago

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…

13 hours ago

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…

13 hours ago

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

16 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

19 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

20 hours ago