ಬ್ರಾಹ್ಮಣ ವಿದ್ಯಾರ್ಥಿನಿಗೆ ಬಲವಂತವಾಗಿ ಮೊಟ್ಟೆ ತಿನ್ನಿಸಿದ್ದ ಶಿಕ್ಷಕ – ಈಗ ಶಿವಮೊಗ್ಗ ಜಿಲ್ಲೆಯ ಅತ್ಯುತ್ತಮ ಶಿಕ್ಷಕ!!

ಬ್ರಾಹ್ಮಣ ವಿದ್ಯಾರ್ಥಿನಿಗೆ ಬಲವಂತವಾಗಿ ಮೊಟ್ಟೆ ತಿನ್ನಿಸಿದ್ದ ಶಿಕ್ಷಕ – ಈಗ ಶಿವಮೊಗ್ಗ ಜಿಲ್ಲೆಯ ಅತ್ಯುತ್ತಮ ಶಿಕ್ಷಕ!!

ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಪಾಠ ಬೋಧನೆ, ವಿದ್ಯಾರ್ಥಿಗಳ ಭವಿಷ್ಯ ಕಟ್ಟುವ ಶ್ರಮ, ಹೊಸ ತಾಂತ್ರಿಕ ಜ್ಞಾನ ಹೀಗೆ ಹಲವು ಗುಣಗಳನ್ನು ತೂಗಿ ನೋಡುತ್ತಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡುತ್ತಾರೆ ಎಂಬುದು ಕೇವಲ ಕಾಗದದ ಮಾತು ಎಂಬುವುದಕ್ಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕರ್ನಾಟಕ ಪಬ್ಲಿಕ್ ಶಾಲೆಯೊಂದರ ಮಹಾನುಭಾವ ಶಿಕ್ಷಕರು ಪಡೆದಿರುವ ಈ ಬಾರಿಯ ಜಿಲ್ಲಾ ಮಟ್ಟದ ಪ್ರಶಸ್ತಿ ಅದಕ್ಕೆ ನಿದರ್ಶನ.

ಹೌದು, 2023ರ ನವೆಂಬರ್ 21ರಂದು ತಾಲೂಕಿನ ಕೆಪಿಎಸ್ ಶಾಲೆಯೊಂದರಲ್ಲಿ ಮೂರನೇ ತರಗತಿ ಓದುತಿದ್ದ ಬ್ರಾಹ್ಮಣ ವಿದ್ಯಾರ್ಥಿನಿಗೆ ಬಲವಂತವಾಗಿ ಮೊಟ್ಟೆ ತಿನ್ನಿಸಿದ ಘಟನೆಯ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ವಿಸ್ಕೃತ ವರದಿ ಮಾಡಿತ್ತು ಆ ನಂತರದಲ್ಲಿ ಘಟನೆ ಬಗ್ಗೆ ರಾಜ್ಯಮಟ್ಟದ ಮಾಧ್ಯಮಗಳಲ್ಲಿ ದೊಡ್ಡ ಸುದ್ದಿಯಾಯಿತು. ಪೋಷಕರ ದೂರಿನ ನಂತರ ಶಿಕ್ಷಣಾಧಿಕಾರಿಗಳು ತನಿಖೆ ನಡೆಸಿ, ಪ್ರಕರಣ ನಿಜವೆಂದು ದೃಢಪಡಿಸಿದರು. ಕೊನೆಗೆ ಶಿಕ್ಷಕರು ಪೋಷಕರ ಬಳಿ ಕ್ಷಮೆಯಾಚನೆ ಸಲ್ಲಿಸಿ “ಮೊಟ್ಟೆಯ ಅಧ್ಯಾಯ” ಮುಗಿಸಿದಂತೆ ಮಾಡಲಾಯಿತು. ಈ ಘಟನೆಯ ಕುರಿತಂತೆ ಬ್ರಾಹ್ಮಣ ಮಹಾಸಭೆಯ ರಾಜ್ಯಾಧ್ಯಕ್ಷ ಅಶೋಕ್ ಹಾರನಹಳ್ಳಿ ಅವರು ಶಿಕ್ಷಣ ಮಂತ್ರಿ ಮಧು ಬಂಗಾರಪ್ಪ , ಡಿಡಿಪಿಐ ರವರಿಗೆ ದೂರು ಸಹ ನೀಡಿದ್ದರು..

ಆದರೆ ಕಾಲ ಬದಲಾಗಿದೆ – ಆ ಮೊಟ್ಟೆ ಪ್ರಕರಣದ ಪಾತ್ರಧಾರಿ ಈಗ ಜಿಲ್ಲೆಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.ವಿವಾದಿತ ಕೃತ್ಯಗಳಿಂದ ಹೆಸರು ಮಾಡಿರುವವರಿಗೆ ಪ್ರಶಸ್ತಿ ದೊರಕುವುದರಿಂದ ನಿಸ್ವಾರ್ಥವಾಗಿ ಶ್ರಮಿಸುವ ನೂರಾರು ಶಿಕ್ಷಕರ ಮನಸ್ಸಿಗೆ ಕಹಿ ಮೂಡಿಸುತ್ತದೆ. ವಿದ್ಯಾರ್ಥಿಗಳ ಹಿತಕ್ಕಾಗಿ ಶಾಂತವಾಗಿ ಸೇವೆ ಮಾಡುವವರ ಕೊಡುಗೆ ಮಣ್ಣಿನಲ್ಲಿ ಹೂತು ಹೋಗಿ, ಅಪ್ರಸ್ತುತ ಘಟನೆಗಳ ಮೂಲಕ ಪ್ರಸಿದ್ಧಿ ಪಡೆದವರು ಮೆಟ್ಟಿಲೇರಿದರೆ, ಅದು ಶಿಕ್ಷಣ ಕ್ಷೇತ್ರದ ನೀತಿಗೆ ಧಕ್ಕೆ ತರುತ್ತದೆ. ಇಂತಹ ಸಂದರ್ಭಗಳು ನಿಜವಾದ ಸೇವಕರ ಮೌಲ್ಯವನ್ನು ಮಸುಕುಮಾಡುವ ವ್ಯಂಗ್ಯಮಯ ಸತ್ಯ.

ಆಹಾರ ಎಂಬುದು ಕೇವಲ ಹೊಟ್ಟೆ ತುಂಬಿಸುವ ವಸ್ತುವಲ್ಲ, ಅದು ಸಂಸ್ಕೃತಿ, ಸಂಪ್ರದಾಯ, ನಂಬಿಕೆ ಹಾಗೂ ವೈಯಕ್ತಿಕ ಭಾವನೆಯ ಪ್ರತಿಬಿಂಬ. ಪ್ರತಿಯೊಬ್ಬರಿಗೂ ತಮ್ಮ ಇಚ್ಛೆಯಂತೆ ತಿನ್ನುವ ಹಕ್ಕಿದೆ. ಯಾರಿಗೂ, ಯಾವ ಕಾರಣಕ್ಕೂ, ಒತ್ತಾಯವಾಗಿ ಆಹಾರವನ್ನು ಬದಲಾಯಿಸಲು ಅಥವಾ ತಿನ್ನಿಸಲು ಹಕ್ಕಿಲ್ಲ. ಒಂದು ಸಣ್ಣ ಬಲವಂತದ ಕೃತ್ಯವೇ ಮಗುವಿನ ಮನಸ್ಸಿನಲ್ಲಿ ಆಳವಾದ ಗಾಯ ಬಿಟ್ಟು ಹೋಗಬಹುದು. ಶಿಕ್ಷಣ ನೀಡುವ ಶಿಕ್ಷಕರ ಕೈಯಲ್ಲಿ ಪುಸ್ತಕ ಇರಬೇಕು, ಬಲವಂತದ ಆಹಾರವಲ್ಲ. ಮಕ್ಕಳ ಹೃದಯ ಗೆಲ್ಲುವವರು ನಿಜವಾದ ಶಿಕ್ಷಕರು, ಬಲವಂತ ಮಾಡುವವರು ಅಲ್ಲ. ಆಹಾರವು ಅವರವರ ಹಕ್ಕು – ಅದನ್ನು ಕಸಿದುಕೊಳ್ಳುವ ಪ್ರಯತ್ನವೇ ಮಾನವೀಯತೆಗೆ ವಿರುದ್ಧ.

– ರಫ಼ಿ ರಿಪ್ಪನ್ ಪೇಟೆ

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

19 hours ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

20 hours ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

24 hours ago

ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…

1 day ago

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…

1 day ago

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು

ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…

1 day ago