ದೇವಸ್ಥಾನದಲ್ಲಿ ಕಳ್ಳತನ – ಎರಡು ಗಂಟೆಯೊಳಗೆ ಆರೋಪಿ ಬಂಧನ
ತೀರ್ಥಹಳ್ಳಿ: ದೇವಸ್ಥಾನದಲ್ಲಿ ನಡೆದ ಕಳ್ಳತನದ ಕೇವಲ 2 ಗಂಟೆಗಳೊಳಗೆ ಆಗುಂಬೆ ಪೊಲೀಸರು ಶೀಘ್ರ ಕಾರ್ಯಾಚರಣೆ ನಡೆಸಿ ಸಂಕದಹೊಳೆ ಸಮೀಪ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಆಗುಂಬೆ ಶ್ರೀರಾಮಮಂದಿರದಲ್ಲಿ ಸೋಮವಾರ ರಾತ್ರಿ ರಾಮ ದೇವರ ಕೈಯಲ್ಲಿದ್ದ ಬಿಲ್ಲು ಹಾಗೂ ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳವು ಮಾಡಲಾಗಿತ್ತು. ವಿಷಯ ತಿಳಿದ ತಕ್ಷಣವೇ ಪೊಲೀಸರು ತನಿಖೆ ಆರಂಭಿಸಿ, ಸುಂಕದಹೊಳೆ ಸಮೀಪದ ಏಳಮಲೈ ನಿವಾಸಿ ಮನೋಜ್ ಆಲಿಯಾಸ್ ಗುಂಡ ಎಂಬಾತನನ್ನು ಬಂಧಿಸಿದ್ದಾರೆ.
ಆರೋಪಿತನಿಂದ ದೇವಾಲಯದಲ್ಲಿ ಕಳವು ಮಾಡಲಾದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆಗುಂಬೆ ಠಾಣೆಯ ಸಬ್ ಇನ್ಸ್ಪೆಕ್ಟರ್ ಶಿವನಗೌಡ ಅವರ ನೇತೃತ್ವದ ಪೊಲೀಸ್ ತಂಡವು ಆರೋಪಿ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಸಿಬ್ಬಂದಿ ಅನಿಲ್, ಸುರೇಶ್, ರಮೇಶ್, ನಾಗಾರ್ಜುನ, ಅವಿನಾಶ್, ಚೇತನ ಹಾಗೂ ಆದರ್ಶ ಪ್ರಮುಖ ಪಾತ್ರವಹಿಸಿದ್ದರು.
ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…
ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…
ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…
ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ – ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…
ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…