ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಗುಂಡಿಕ್ಕಿ ಕೊಲ್ಲಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ಆಕ್ರೋಶ
ಸಾಗರ: “ನಮ್ಮ ದೇಶದಲ್ಲಿ ಇದ್ದುಕೊಂಡು ಪಾಕಿಸ್ತಾನ ಜಿಂದಾಬಾದ್ ಎನ್ನುವವರು ದೇಶದ್ರೋಹಿಗಳು. ಅವರಿಗೆ ಈ ನೆಲದಲ್ಲಿ ಬದುಕುವ ಹಕ್ಕಿಲ್ಲ. ಅಂತಹವರನ್ನು ಗುಂಡಿಕ್ಕಿ ಕೊಲ್ಲಬೇಕು” ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಸಾಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, “ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಅತ್ಯಂತ ಖಂಡನೀಯ ಕೃತ್ಯ. ಇಂತಹ ಕಿಡಿಗೇಡಿಗಳ ವಿರುದ್ಧ ಸರ್ಕಾರ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು. ಈ ಕುರಿತು ನಾನು ಮುಖ್ಯಮಂತ್ರಿಗೆ ಮನವಿ ಮಾಡುತ್ತೇನೆ” ಎಂದರು.
ಎಲ್ಲ ಧರ್ಮದಲ್ಲಿಯು ಕಿಡಿಗೇಡಿಗಳಿರುತ್ತಾರೆ. ಅಂತಹವರನ್ನು ಗುರುತಿಸಿ ಸಮಾಜ ಬಾಂಧವರು ದೂರ ಇರಿಸಬೇಕು. ಇಲ್ಲವಾದಲ್ಲಿ ಒಬ್ಬಿಬ್ಬರು ಮಾಡುವ ಕಿಡಿಗೇಡಿ ಕೃತ್ಯ ಇಡೀ ಸಮಾಜಕ್ಕೆ ಕೆಟ್ಟ ಹೆಸರು ತರಲಿದೆ.
ಅವರು ಮುಂದುವರೆದು, “ಎಲ್ಲಾ ಧರ್ಮದಲ್ಲೂ ಕಿಡಿಗೇಡಿಗಳು ಇರಬಹುದು. ಸಮಾಜವು ಅಂತಹವರನ್ನು ಗುರುತಿಸಿ ದೂರವಿರಬೇಕು. ಇಲ್ಲವಾದಲ್ಲಿ ಕೆಲವರ ಕೃತ್ಯದಿಂದಲೇ ಸಂಪೂರ್ಣ ಸಮಾಜಕ್ಕೆ ಕೆಟ್ಟ ಹೆಸರು ಬರುವುದು ಅನಿವಾರ್ಯ” ಎಂದು ಹೇಳಿದರು.
ಸಾಗರದಲ್ಲಿ ಇಬ್ಬರು ಮಕ್ಕಳು ಉಗುಳಿರುವ ಪ್ರಕರಣ ಸಂಬಂಧ ಅವರ ತಾಯಿ ಕ್ಷಮಾಪಣೆ ಕೇಳಿದ್ದಾರೆ. ಈ ಕೃತ್ಯದ ಹಿಂದೆ ಯಾರಾದರು ಇದ್ದಾರೆಯೆ ಎಂದು ತನಿಖೆ ನಡೆಸುವಂತೆ ಡಿವೈಎಸ್ಪಿ ಅವರಿಗೆ ತಿಳಿಸಲಾಗಿದೆ ಎಂದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್