ಆನೆಗದ್ದೆ ಶಾಲೆಯ ಶಿಕ್ಷಕಿಯ ವರ್ಗಾವಣೆ – ವಿದ್ಯಾರ್ಥಿಗಳಿಂದ ಶಿಕ್ಷಣಾಧಿಕಾರಿ ಕಛೇರಿ ಎದುರು ಪ್ರತಿಭಟನೆ

ಆನೆಗದ್ದೆ ಶಾಲೆಯ ಶಿಕ್ಷಕಿಯ ವರ್ಗಾವಣೆ – ವಿದ್ಯಾರ್ಥಿಗಳಿಂದ ಶಿಕ್ಷಣಾಧಿಕಾರಿ ಕಛೇರಿ ಎದುರು ಪ್ರತಿಭಟನೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಆನೆಗದ್ದೆ ಶಾಲೆ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿರುವ ಶಾಲೆ ಆದರೆ ಖಾಸಗಿ ವಿದ್ಯಾಸಂಸ್ಥೆಗಳ ವಾಹನವು ಈ ಭಾಗದ ಹಳ್ಳಿಹಳ್ಳಿಗೆ ನುಗ್ಗಿದ ಪರಿಣಾಮ ಇಂತಹ ಹೆಸರುವಾಸಿ ಶಾಲೆಯು ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚುವ ಹಂತಕ್ಕೆ ಹೋಗಿತ್ತು ಇದನ್ನು ಮನಗಂಡ ಊರಿನ ಗ್ರಾಮಸ್ಥರು ವಿಶೇಷ ಆಸಕ್ತಿ ವಹಿಸಿ ಹಲವು ಹೊಸ ದಾಖಲಾತಿಗಳನ್ನು ಸೇರಿಸುವ ಮೂಲಕ ಇಂತಹ ಶಾಲೆಯನ್ನು ಉಳಿಸಿಕೊಂಡಿದ್ದರು ಹಾಗೇಯೆ ಅಲ್ಲಿನ ಶಿಕ್ಷಕರು ಅದಕ್ಕೆ ಉತ್ತಮ ಸಾಥ್ ನೀಡಿದ್ದರು.

ಪ್ರಸ್ತುತ ಶಾಲೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರ ಪ್ರಶಂಸೆಗೆ ಒಳಗಾಗಿರುವ ಶಿಕ್ಷಕಿ ಅನ್ವಿತಾ ಎಂಬುವವರನ್ನು ಈಗ ಹೆಚ್ಚುವರಿ ಪಟ್ಟಿಗೆ ಸೇರಿಸಿದ್ದು ಊರಿನ ಗ್ರಾಮಸ್ಥರ , ಪೋಷಕರು ಹಾಗೂ ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ ಕೂಡಲೇ ಅವರನ್ನು ಹೆಚ್ಚುವರಿ ಪಟ್ಟಿಯಿಂದ ಕೈ ಬೀಡಲು ಸುಮಾರು 41 ವಿದ್ಯಾರ್ಥಿಗಳು , ಎಸ್ ಡಿಎಂ ಸಿ ಸದಸ್ಯರು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಈ ಸಂಧರ್ಭದಲ್ಲಿ ಎಸ್ಡಿಎಂಸಿ ಅಧ್ಯಕ್ಷ ಸುರೇಶ್ ಮಾತನಾಡಿ, ನಮ್ಮ ಶಾಲೆಗೆ 4 ಜನ ಶಿಕ್ಷಕರು ಇರಬೇಕು ಎಂಬ ನಿಯಮವಿದೆ. ಇವರು ಹಿಂದಿನ ವರ್ಷದ ಮಕ್ಕಳ ಗಣತಿಯನ್ನು ಪರಿಗಣಿಸಿ ಹೆಚ್ಚುವರಿ ಶಿಕ್ಷಕರ ವರ್ಗಾವಣೆಗೆ ಹೊರಟಿದ್ದಾರೆ. ಎಸ್‌ಡಿಎಂಸಿ ಸದಸ್ಯರು ಹಾಗೂ ಶಿಕ್ಷಕರ ಹೋರಾಟದ ಫಲವಾಗಿ ಕಳೆದ ವರ್ಷಕ್ಕಿಂತ ಈ ವರ್ಷ 20 ಮಕ್ಕಳನ್ನು ಹೆಚ್ಚುವರಿಯಾಗಿ ಸೇರಿಸಲಾಗಿದೆ. ಶಾಲೆಯ ಕಾರ್ಯ ಚಟುವಟಿಕೆಗಳು ಸುಗಮವಾಗಿ ನಡೆಯುತ್ತಿದೆ. ಈ ಸಂದರ್ಭದಲ್ಲಿ ನಮ್ಮ ಶಿಕ್ಷಕಿ ಅನ್ವಿತಾರವರು ಹೆಚ್ಚುವರಿಯಾಗಿ ಪ್ರಕಟವಾದಾಗ ನಮ್ಮ ಶಾಲೆಯಿಂದ ಅವರನ್ನು ಕಳುಹಿಸುವುದಾದರೆ ಮಕ್ಕಳ ಪಾಠ ಪ್ರವಚನ ಶಾಲೆಯ ಕಾರ್ಯ ಚಟುವಟಿಕೆಗೆ ತೊಂದರೆಯಾಗುತ್ತದೆ. ಹೊಸದಾಗಿ ದಾಖಲಾದ ಮಕ್ಕಳು ಟಿ.ಸಿಯನ್ನು ತೆಗೆದುಕೊಂಡು ಹೋಗುತ್ತಾರೆ. ಶಾಲೆಯ ದಾಖಲಾತಿ ಮತ್ತೆ ಕುಸಿದು ಸರ್ಕಾರಿ ಶಾಲೆಯನ್ನೇ ಮುಚ್ಚುವ ಸ್ಥಿತಿ ತಲುಪುತ್ತದೆ. ಆದ್ದರಿಂದ ಮಕ್ಕಳ ಶಾಲೆಯ ಹಿತದೃಷ್ಟಿಯಿಂದ ಅನ್ವಿತಾರನ್ನು ಹೆಚ್ಚುವರಿ ಪಟ್ಟಿಯಿಂದ ಕೈ ಬೀಡಬೇಕು ಎಂದು ಆಗ್ರಹಿಸಿದರು‌

ಬಿಇಓ ಚೇತನ ಸ್ಪಷ್ಟನೆ – ಮಕ್ಕಳ ಹಿತದೃಷ್ಟಿಯಿಂದ ಕ್ರಮ

ಬೆಳಿಗ್ಗೆಯಿಂದಲೇ ವಿದ್ಯಾರ್ಥಿಗಳು ಉಪವಾಸಕ್ಕೆ ಕುಳಿತಿದ್ದ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಪಿ. ಚೇತನ ಅವರು ಸ್ಪಷ್ಟನೆ ನೀಡಿದರು. ಸರ್ಕಾರದಿಂದ ಬಂದ ಆದೇಶವನ್ನು ಎಲ್ಲಾ ಅಧಿಕಾರಿಗಳು ಪಾಲಿಸಲೇಬೇಕಾದ ಕಡ್ಡಾಯವಿದೆ ಎಂಬುದನ್ನು ಅವರು ಮೊದಲಿಗೆ ನೆನಪಿಸಿದರು. ಆದಾಗ್ಯೂ, ಮಕ್ಕಳ ಹಿತಾಸಕ್ತಿಯನ್ನೇ ಮುಖ್ಯವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಅವರು ಮಾತನಾಡುವ ವೇಳೆ, ಶಿಕ್ಷಕಿ ಅನ್ವಿತಾ ಹೆಚ್ಚುವರಿ ಪಟ್ಟಿಗೆ ಸೇರಿದ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಉಂಟಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಮೇಲಾಧಿಕಾರಿಗಳ ಆದೇಶದ ಮೇರೆಗೆ ಆನೆಗದ್ದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮತ್ತೊಬ್ಬ ಶಿಕ್ಷಕರ ನಿಯೋಜನೆ ಮಾಡಲು ಶಿಫಾರಸು ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಈ ಪ್ರತಿಭಟನೆಯಲ್ಲಿ ಯುವ ಮುಖಂಡ ನಗರ ನಿತಿನ್ , ಆನೆಗದ್ದೆ ಶಾಲೆಯ ಎಸ್‌ಡಿಎಂಸಿ ಸದಸ್ಯರಾದ ರಮೇಶ್, ಪ್ರಸಾಂತ್, ಲಕ್ಷ್ಮೀಶ, ಶೇಖರಪ್ಪ, ಚಂದ್ರಶೇಖರ, ವೇದಾವತಿ, ರಮೇಶ್, ಮಲ್ಲಪ್ಪಗೌಡ, ಇಂದಿರಮ್ಮ, ಅಶೋಕ, ಚೈತ್ರಾ, ಜ್ಯೋತಿ, ಇಂದಿರಾ, ವೆಂಕಟೇಶ್ ಹಾಗೂ ಆನೆಗದ್ದೆ ಶಾಲೆಯ 41 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

17 hours ago

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…

17 hours ago

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…

18 hours ago

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

20 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

24 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

1 day ago