HUMACHA | ಎರಡು ಕಾಡುಕೋಣಗಳ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ – ವಿಷಪ್ರಯೋಗ ಶಂಕೆ!

HUMACHA | ಕೊಳೆತ ಸ್ಥಿತಿಯಲ್ಲಿ ಎರಡು ಕಾಡುಕೋಣಗಳ ಕಳೇಬರ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ

ತೋಟವೊಂದರ ಹೊಂಡದಲ್ಲಿ ಕೊಳೆತ ಸ್ಥಿತಿಯಲ್ಲಿ ಎರಡು ಕಾಡುಕೋಣಗಳ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಸರ್ವೆ ನಂಬರ 52 /2 ರ ರಾಮಪ್ಪ ಬಿನ್ ಮರಿಯಪ್ಪ ಎಂಬುವವರ ಅಡಿಕೆ ತೋಟದ ಹೊಂಡವೊಂದರಲ್ಲಿ ಎರಡು ಕಾಡುಕೋಣಗಳ ಮೃತದೇಹ ಪತ್ತೆಯಾಗಿದ್ದು ಹಲವಾರು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ.

ಕಾಡುಕೋಣ ಮೃತಪಟ್ಟು ನಾಲ್ಕೈದು ದಿನಗಳಾಗಿರಬಹುದು ಎನ್ನಲಾಗುತಿದ್ದು , ವಿಷಪ್ರಾಶನ ಮಾಡಿದ್ದರಿಂದ ಕಾಡುಕೋಣಗಳು ಮೃತಪಟ್ಟಿರಬಹುದು ಎನ್ನಲಾಗುತಿದ್ದು ಮೃತದೇಹದ ಮರಣೋತ್ತರ ಪರೀಕ್ಷೆ ನಂತರ ಸಾವಿನ ನಿಖರವಾದ ಕಾರಣ ತಿಳಿದುಬರಲಿದೆ.

ಅರಣ್ಯ ಇಲಾಖೆ ಸಿಬ್ಬಂದಿಗಳ ಪ್ರಕಾರ ಕಾಡುಕೋಣಗಳು ಮೇವನ್ನು ಅರಸಿ ತೋಟಕ್ಕೆ ಬಂದು ನೀರು ಕುಡಿಯಲು 20 ಅಡಿ ಆಳವಿರುವ ಹೊಂಡದಲ್ಲಿ ನೀರಿಗಾಗಿ ಇಳಿದು ಮೇಲಕ್ಕೆ ಏಳಲು ಆಗದೇ ಮುಳುಗಿ‌ ಮೃತಪಟ್ಟಿರಬಹುದು ಎಂದು ಹೇಳುತಿದ್ದು ಮರಣೋತ್ತರ ಪರೀಕ್ಷೆಯ ನಂತರ ನೈಜ ಸತ್ಯ ಹೊರಬೀಳಲಿದೆ.

ಹುಂಚ ವ್ಯಾಪ್ತಿಯಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ ಕಾಡುಕೋಣಗಳ ಮಾರಣ ಹೋಮ

2024 ರ ಜೂನ್ ತಿಂಗಳಿನಲ್ಲಿ ಹುಂ‍ಚ, ನಾಗರಹಳ್ಳಿ ವ್ಯಾಪ್ತಿಯಲ್ಲಿ ಕೆಲವು ಕಿಡಿಗೇಡಿಗಳು ನಾಲ್ಕಕ್ಕೂ ಹೆಚ್ಚು ಕಾಡುಕೋಣಗಳನ್ನು ಅಕ್ರಮ ಬಂದೂಕು ಬಳಸಿ ಹತ್ಯೆಗೈದಿದ್ದಾರೆ, ಕಾಡುಕೋಣಗಳ ಮಾರಣಹೋಮವೇ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು.ಈ ಬಗ್ಗೆ ಮಾಹಿತಿ ತಿಳಿದ ಪೋಸ್ಟ್ ಮ್ಯಾನ್ ನ್ಯೂಸ್ ತಂಡ ಸ್ಥಳಕ್ಕೆ ತೆರಳಿ ಕಾಡು ಪ್ರದೇಶಗಳಲ್ಲಿ ಹುಡುಕಾಟ ನಡೆಸಿದಾಗ ಕಾಡುಕೋಣದ ಕಳೇಬರಗಳು ದೊರಕಿದ ಹಿನ್ನಲೆಯಲ್ಲಿ ಕಾಡುಕೋಣಗಳ ಮಾರಣಹೋಮ ನಡೆದಿರುವುದು ಖಚಿತವಾದ ಬಗ್ಗೆ ಸ್ಥಳದಿಂದಲೇ ಆಗಿನ ಅರಣ್ಯ ಇಲಾಖೆಯ ಡಿಸಿಎಫ಼್ ಸಂತೋಷ್ ಕೆಂಚಪ್ಪಣ್ಣನವರ್ , RFO ರಾಘವೇಂದ್ರ ರವರಿಗೆ ಮಾಹಿತಿ ತಿಳಿಸಲಾಗಿತ್ತು.ಕೂಡಲೇ ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿ ಸಂತೋಷ್ ಕೆಂಚಣ್ಣನವರ್ ಹಾಗೂ Rfo ರಾಘವೇಂದ್ರ ಸ್ಥಳ ಪರಿಶೀಲನೆ ನಡೆಸಿ ಕಾಡುಕೋಣದ ಕಳೇಬರಗಳನ್ನು ಪರೀಕ್ಷೆಗಾಗಿ ಲ್ಯಾಬ್ ಗೆ ಕಳುಹಿಸಿಕೊಟ್ಟಿದ್ದರು.

ಕಾಡುಕೋಣಗಳ ಮಾರಣಹೋಮ ಕುರಿತು ವರದಿ ಕೇಳಿದ್ದ ಅರಣ್ಯ ಸಚಿವ ಈಶ್ವರ್ ಖಂಡ್ರೆ

ಜೂನ್ 2024 ರಲ್ಲಿ ಹೊಸನಗರ ತಾಲೂಕಿನ ಹುಂಚ ವ್ಯಾಪ್ತಿಯ ನಾಗರಹಳ್ಳಿ ಗ್ರಾಮದ ಕಾಡುಕೋಣಗಳ ಮಾರಣಹೋಮ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ವರದಿಯನ್ನಾಧರಿಸಿ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪ್ರಕರಣ ನಡೆದಿರುವ ಸ್ಥಳಗಳಲ್ಲಿ ಕಳ್ಳಬೇಟೆ ತಡೆ ಶಿಬಿರಗಳಿದ್ದರೂ ಇಂತಹ ಪ್ರಕರಣ ನಡೆಯುತ್ತಿರುವುದ ಆತಂಕದ ಸಂಗತಿಯಾಗಿದ್ದು ಈ ಕೂಡಲೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ವರದಿಯನ್ನು ಸಲ್ಲಿಸುವಂತೆ ಹಾಗೂ ಸದರಿ ಸ್ಥಳಗಳಲ್ಲಿ ಗಸ್ತು ಹೆಚ್ಚಿಸುವಂತೆ ಸೂಚಿಸಿದ್ದರು.

ಒಟ್ಟಾರೆಯಾಗಿ ಈ ಭಾಗದಲ್ಲಿ ಪ್ರತ್ಯಕ್ಷಗೊಳ್ಳುತಿದ್ದ ಇಪ್ಪತ್ತಕ್ಕೂ ಹೆಚ್ಚಿನ ಕಾಡುಕೋಣಗಳ ಹಿಂಡು ಬೇಟೆಗಾರರ ಕೆಂಗಣ್ಣಿಗೆ ಗುರಿಯಾಗಿ ಅಳಿವಿನಂಚಿಗೆ ಬಂದಿದೆ.ಇನ್ನಾದರೂ ಅರಣ್ಯ ಇಲಾಖೆಯವರು ಈ ಬಗ್ಗೆ ಗಮನಹರಿಸಬೇಕಾಗಿದೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

17 hours ago

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ

ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಪಿಯು ಕಾಲೇಜು ಪ್ರಾಂಶುಪಾಲರ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಪ್ರಕರಣ Shivamogga police have registered…

18 hours ago

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ

ಕಾರ್ಮಿಕರ ಕಾರ್ಡ್ ಹೆಸರಿನಲ್ಲಿ ವಂಚನೆ ಆರೋಪ: ರಿಪ್ಪನ್‌ಪೇಟೆಯಲ್ಲಿ ಕಾರ್ಮಿಕರ ಆಕ್ರೋಶ Workers in Ripponpete allege money was collected…

18 hours ago

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್ ಕತ್ತರಿಸಬೇಕೋ?

ಹುಂಚದ ಶವಾಗಾರಕ್ಕೆ 6 ವರ್ಷವಾದರೂ ಉದ್ಘಾಟನೆ ಭಾಗ್ಯ ಇಲ್ಲ –  ಮುಹೂರ್ತ ಸಿಕ್ಕಿಲ್ಲವೋ, ಅಥವಾ ಸತ್ತವರೇ ಎದ್ದು ಬಂದು ರಿಬ್ಬನ್…

20 hours ago

ಈದ್ ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಸೂಚನೆ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ

ಈದ್ ಮಿಲಾದ್ ಹಬ್ಬ: ಸೌಹಾರ್ದತೆ ಕಾಪಾಡಲು ಪಿಎಸ್‌ಐ ರಾಜುರೆಡ್ಡಿ ಕರೆ Ripponpete PSI Rajureddy appeals for peaceful and…

24 hours ago

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೈಕ್ ಕಳ್ಳ ಕೊನೆಗೂ ಪೊಲೀಸರ ಬಲೆಗೆ Bhadravati New Town Police have arrested a…

1 day ago