ಅಡಕೆ ತೋಟದಲ್ಲಿ ವಿದ್ಯುತ್ ಸ್ಪರ್ಶದಿಂದ ಕಾರ್ಮಿಕ ಸಾವು
ಶಿವಮೊಗ್ಗ : , ಸೆಪ್ಟೆಂಬರ್ 17: ವಿದ್ಯುತ್ ಸ್ಪರ್ಶದಿಂದ ಕಾರ್ಮಿಕನೋರ್ವ ಮೃತಪಟ್ಟ ಘಟನೆ, ಶಿವಮೊಗ್ಗ ತಾಲೂಕಿನ ಹೊಳಲೂರು ಗ್ರಾಮದ ಅಡಕೆ ತೋಟವೊಂದರಲ್ಲಿ ನಡೆದಿದೆ.
ಹರಮಘಟ್ಟ ಗ್ರಾಮದ ನಿವಾಸಿ ವೆಂಕಟೇಶ್ (45) ಮೃತಪಟ್ಟ ಕಾರ್ಮಿಕ ಎಂದು ಗುರುತಿಸಲಾಗಿದೆ. ವಿದ್ಯುತ್ ಸ್ಪರ್ಶದಿಂದ ಗಂಭೀರ ಸ್ಥಿತಿಯಲ್ಲಿದ್ದ ವೆಂಕಟೇಶ್ ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಪರೀಕ್ಷಿಸಿದ ವೈದ್ಯರು ಕಾರ್ಮಿಕ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.
ಮೃತ ಕಾರ್ಮಿಕನು ತೋಟದಲ್ಲಿ ಅಡಕೆ ಗೊನೆಗಳನ್ನು ಕೊಯ್ಯುವ ವೇಳೆ, ಅಡಕೆ ಕತ್ತರಿಸುವ ಫೈಬರ್ ಕೋಲು ಸಮೀಪದಲ್ಲಿಯೇ ಹಾದು ಹೋಗಿದ್ದ ವಿದ್ಯುತ್ ತಂತಿಗೆ ಆಕಸ್ಮಿಕವಾಗಿ ಸ್ಪರ್ಶವಾಗಿ ವಿದ್ಯುತ್ ಪ್ರವಹಿಸಿ ದುರಂತ ಸಂಭವಿಸಿದೆ ಎಂದು ಸ್ಥಳೀಯ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್ನಲ್ಲಿ ತಂಗಿದ್ದ…