Headlines

HOSANAGARA | ಯೂಟ್ಯೂಬ್ ಜಾಹೀರಾತು ನಂಬಿ 49 ಲಕ್ಷ ಕಳೆದುಕೊಂಡ ಮಹಿಳೆ

HOSANAGARA | ಯೂಟ್ಯೂಬ್ ಜಾಹೀರಾತು ನಂಬಿ 49 ಲಕ್ಷ ಕಳೆದುಕೊಂಡ ಮಹಿಳೆ ಹೊಸನಗರ: ಯೂಟ್ಯೂಬ್‌ನಲ್ಲಿ ಕಂಡ ‘ಹೆಚ್ಚು ಲಾಭಾಂಶ’ದ ಆಮಿಷ ನೀಡಿದ ಹೂಡಿಕೆ ಜಾಹೀರಾತನ್ನು ನಂಬಿ, ಹೊಸನಗರದ ಮಹಿಳೆಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು 49 ಲಕ್ಷ ರೂ.ಗೂ ಹೆಚ್ಚು ಮೊತ್ತ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯ ಹಿನ್ನಲೆ : ಮಹಿಳೆ ಯೂಟ್ಯೂಬ್ ವೀಕ್ಷಿಸುವ ವೇಳೆ ಷೇರು ಮಾರುಕಟ್ಟೆ ಮಾರ್ಗದರ್ಶನ ನೀಡುವುದಾಗಿ ಹೇಳಿಕೊಂಡಿದ್ದ ಜಾಹೀರಾತೊಂದು ತೋರ್ಪಡಿಸಿತು. ಜಾಹೀರಾತಿನ ಕೆಳಗೆ ನೀಡಿದ್ದ ವಾಟ್ಸ್‌ಆ್ಯಪ್ ಗುಂಪಿಗೆ ಸೇರುವ ಲಿಂಕ್‌ನ್ನು…

Read More

ರಸ್ತೇ ಅಪಘಾತ: ಆಟವಾಡುತ್ತಿದ್ದಾಗ ಕಾರು ಡಿಕ್ಕಿ – 2 ವರ್ಷದ ಮಗು ದಾರುಣ ಅಂತ್ಯ

ರಸ್ತೇ ಅಪಘಾತ: ಆಟವಾಡುತ್ತಿದ್ದಾಗ ಕಾರು ಡಿಕ್ಕಿ – 2 ವರ್ಷದ ಮಗು ದಾರುಣ ಅಂತ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಸಂಭವಿಸಿದ ದುರಂತ ಘಟನೆಯಲ್ಲಿ ಎರಡು ವರ್ಷದ ಬಾಲಕನೊಬ್ಬ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಪ್ರಾಣ ಕಳೆದುಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೋಟೆ ಗಂಗೂರು – ಸಾಗರ ರಸ್ತೆಯ ವಿರುಪಿನಕೊಪ್ಪ ಗ್ರಾಮದಲ್ಲಿ ಈ ಘಟನೆ ಶನಿವಾರ ಸಂಜೆ ನಡೆದಿದೆ. ಷಣ್ಮುಖ ಎಂಬುವವರ ಪುತ್ರ ವಿನಯ್‌ (2) ಮೃತ ದುರ್ದೈವಿ. ಮಗು ಮನೆಯ ಎದುರಿನ ರಸ್ತೆಯ ಬದಿಯಲ್ಲಿ ಆಟವಾಡುತಿದ್ದ…

Read More

15 ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ರಸ್ತೆ ಬದಿಯಲ್ಲಿ ಶವವಾಗಿ ಪತ್ತೆ

ಕಾಣೆಯಾದ ವ್ಯಕ್ತಿ ಶವವಾಗಿ ಪತ್ತೆ ಸಾಗರ: ಹಲವು ದಿನಗಳಿಂದ ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ರಸ್ತೆ ಪಕ್ಕದಲ್ಲಿ ಪತ್ತೆಯಾಗಿರುವ ದುರ್ಘಟನೆ ಬೆಳಕಿಗೆ ಬಂದಿದೆ. ಸಾಗರ ತಾಲೂಕಿನ ಯಲಗಳಲೆ ಗ್ರಾಮದ ಸಮೀಪ ರಸ್ತೆ ಬದಿಯಲ್ಲಿ ಪತ್ತೆಯಾದ ಶವವನ್ನು, ಜಂಬಗಾರು ಗ್ರಾಮದ ಹನುಮಂತಪ್ಪ (65) ಎಂದು ಗುರುತಿಸಲಾಗಿದೆ. ಹನುಮಂತಪ್ಪ ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದ್ದು, 15 ದಿನಗಳ ಹಿಂದೆ ಕಾಣೆಯಾಗಿದ್ದಾರೆಂದು ಕುಟುಂಬದವರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಲವ್ ಮ್ಯಾರೇಜ್ ಆಗಿ ಎರಡೇ ವರ್ಷಕ್ಕೆ ಗೃಹಿಣಿ ನಿಗೂಢ ಸಾವು –  ನಂಬಿದಾಕೆಗೆ ಚಟ್ಟ ಕಟ್ಟಿದ್ನಾ ಪತಿ?

ಲವ್ ಮ್ಯಾರೇಜ್ ಆಗಿ ಎರಡೇ ವರ್ಷಕ್ಕೆ ಗೃಹಿಣಿ ನಿಗೂಢ ಸಾವು –  ನಂಬಿದಾಕೆಗೆ ಚಟ್ಟ ಕಟ್ಟಿದ್ನಾ ಪತಿ? Housewife mysteriously dies after just two years of love marriage ಇಬ್ಬರು ಪರಸ್ಪರ ಪ್ರೀತಿಸಿ ಎರಡು ವರ್ಷ ಹಿಂದೆ ಅಷ್ಟೇ ಮದುವೆಯಾಗಿದ್ದರು. ಪ್ರೀತಿಯ ಮದುವೆಗೊಂದು ಒಂದೂವರೆ ವರ್ಷದ ಮಗು ಸಹ ಇದೆ. ಸ್ವರ್ಗಕ್ಕೆ ಕಿಚ್ಚು ಹಚ್ಚುವಂಥಾ ಸಂಸಾರ ಇದ್ದಾಗ ಮಹಿಳೆ ನಿಗೂಢವಾಗಿ ಸಾವನ್ನಪ್ಪಿದ್ದಾಳೆ. ದಾವಣಗೆರೆ ಜಿಲ್ಲೆಯ ಚನ್ನಗರಿ ತಾಲೂಕಿನ ಹೊನ್ನೆಬಾಗಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

Read More

ನಾಪತ್ತೆಯಾದ ವಿದ್ಯಾರ್ಥಿನಿ ಸೌಜನ್ಯ ಕಾಲುವೆಯಲ್ಲಿ ಶವವಾಗಿ ಪತ್ತೆ – ಸಂಚಲನ ಸೃಷ್ಟಿಸಿದ ಸೌಜನ್ಯ ಕೊಲೆ ಪ್ರಕರಣ

ನಾಪತ್ತೆಯಾದ ವಿದ್ಯಾರ್ಥಿನಿ ಸೌಜನ್ಯ ಕಾಲುವೆಯಲ್ಲಿ ಶವವಾಗಿ ಪತ್ತೆ – ಸಂಚಲನ ಸೃಷ್ಟಿಸಿದ ಸೌಜನ್ಯ ಕೊಲೆ ಪ್ರಕರಣ ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ದೀಪಾವಳಿ ಅಮವಾಸ್ಯೆ ದಿನ ಮನೆಯಿಂದ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಶನಿವಾರ ಶವವಾಗಿ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಕೊಡೇಕಲ್‌ ಗ್ರಾಮದ ಶರಣಪ್ಪ ಹಡಪದ ಎಂಬುವರ ಮಗಳು ಸೌಜನ್ಯ (17) ಶಹಾಪೂರ ತಾಲೂಕಿನ ಗೋಗಿ ಬಳಿಯ ಕೃಷ್ಣಾ ಎಡದಂಡೆ ಕಾಲುವೆಯಲ್ಲಿ ಶವ ಪತ್ತೆಯಾಗಿದೆ. ಪಿಯುಸಿ ಓದುತ್ತಿದ್ದ ಸೌಜನ್ಯ ಕೊಡೇಕಲ್ ಗ್ರಾಮದ ನಿವಾಸಿ ಶರಣಪ್ಪ ಹಡಪದ ಪುತ್ರಿ…

Read More

RIPPONPETE | ಪತ್ರಕರ್ತ ಚಿದಾನಂದ ಸ್ವಾಮಿರವರಿಗೆ ಮಾತೃ ವಿಯೋಗ

ಪತ್ರಕರ್ತ ಚಿದಾನಂದ ಸ್ವಾಮಿರವರಿಗೆ ಮಾತೃ ವಿಯೋಗ ರಿಪ್ಪನ್‌ಪೇಟೆ: ಪಟ್ಟಣದಲ್ಲಿ ವಿಜಯವಾಣಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಚಿದಾನಂದ ಸ್ವಾಮಿ ಅವರ ತಾಯಿ ಮುರಿಗೆಮ್ಮ (85) ಅವರು ನಿಧನರಾಗಿದ್ದಾರೆ. ಶಿವಮೊಗ್ಗ ರಸ್ತೆಯ ನಿವಾಸಿಗಿದ್ದ ದಿ. ಗುರುಪಾದಯ್ಯರವರ ಧರ್ಮಪತ್ನಿ ಹಾಗೂ ಪತ್ರಕರ್ತ ಚಿದಾನಂದ ಸ್ವಾಮಿಯವರ ತಾಯಿ ಮುರಿಗೆಮ್ಮ (85) ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು ಅವರು ಭಾನುವಾರ ಸಂಜೆ ತಮ್ಮ ಸ್ವಗೃಹದಲ್ಲಿ ಲಿಂಗೈಕ್ಯರಾದರು. ಮೃತರು ಪುತ್ರರು, ಸೊಸೆ, ಮಕ್ಕಳು , ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಸಂತಾಪ :ಅಲ್ಪಕಾಲದ ಅನಾರೋಗ್ಯದಿಂದ ಲಿಂಗೈಕ್ಯರಾದ…

Read More

ಮದುವೆಯಾದ 6 ತಿಂಗಳಲ್ಲೇ ನವವಿವಾಹಿತೆ ಬಲಿ – ಕಿರುಕುಳ ಆರೋಪ, ಪತಿ ಬಂಧನ

ಮದುವೆಯಾದ 6 ತಿಂಗಳಲ್ಲೇ ನವವಿವಾಹಿತೆ ಬಲಿ – ಕಿರುಕುಳ ಆರೋಪ, ಪತಿ ಬಂಧನ ಶಿವಮೊಗ್ಗ: ಮದುವೆಯಾದ ಕೇವಲ ೬ ತಿಂಗಳಲ್ಲೇ ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಕುರಂಬಳ್ಳಿ ಸಮೀಪದ ಗೂಜಾನುಮಕ್ಕಿಯಲ್ಲಿ ನಡೆದಿದೆ.  ಮೃತ ಗೃಹಿಣಿಯನ್ನು ಸಾಗರ ತಾಲೂಕು ಕಟ್ಟಿನಕಾರು ಗ್ರಾಮದ ಯಡಮನೆ ನಿವಾಸಿ ಮಾಲಾಶ್ರೀ (೨೩) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಪತಿ ಮತ್ತು ಅತ್ತೆಯ ಕಿರುಕುಳವೇ ಕಾರಣ ಎಂದು ಆರೋಪಿಸಲಾಗಿದೆ. ಯಡಮನೆ ಗ್ರಾಮದ ಮಾಲಾಶ್ರೀ ಕುರಂಬಳ್ಳಿಯ ಗೂಜಾನುಮಕ್ಕಿಯ ಅಶೋಕ್ ಎಂಬಾತನೊಂದಿಗೆ ಏಪ್ರಿಲ್…

Read More

ತೋಟಗಾರಿಕೆಯಲ್ಲಿ ಮಿಶ್ರ ಬೆಳೆಗೆ ಆಧ್ಯತೆ ನೀಡಿ – ಆರಗ ಜ್ಞಾನೇಂದ್ರ

ತೋಟಗಾರಿಕೆಯಲ್ಲಿ ಮಿಶ್ರ ಬೆಳೆಗೆ ಆಧ್ಯತೆ ನೀಡಿ – ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆಯ ಸೆಲಿ ಜೊಸೇಫ್ ತೋಟದಲ್ಲಿ ರೈತರೊಂದಿಗೆ ಆರಗ ಜ್ಞಾನೇಂದ್ರ ಸಮಾಲೋಚನೆ ರಿಪ್ಪನ್‌ಪೇಟೆ : ಇತ್ತೀಚೆನ ವರ್ಷಗಳಲ್ಲಿ ಆಡಿಕೆ ಬೆಳೆಗೆ ಎಲೆಚುಕ್ಕೆ ರೋಗದಿಂದಾಗಿ ಇಳುವರಿ ಕುಂಠಿತಗೊಂಡಿದ್ದು ಅಲ್ಲದೆ ಅಡಿಕೆ ಸೇವನೆಯಂದ ಮಾರಕ ರೋಗ ಕ್ಯಾನ್ಸರ್ ನಂತಹ ಕಾಯಿಲೆ  ಬರುತ್ತದೆಂದು ಸುಪ್ರೀಂ ಕೋರ್ಟ್ ನಲ್ಲಿ ದೂರು ದಾಖಲಾಗಿರುವ ಬಗ್ಗೆ ಅಡಿಕೆ ಬೆಳೆಗಾರರಲ್ಲಿ  ಗೊಂದಲ ನಿರ್ಮಾಣವಾಗಿದೆ. ಕಳೆದ ವರ್ಷದಲ್ಲಿ ಮಲೆನಾಡಿನ ವ್ಯಾಪ್ತಿಯಲ್ಲಿನ ಹೊಸನಗರ ಸಾಗರ   ತೀರ್ಥಿಹಳ್ಳಿ ಕೊಪ್ಪ ಶೃಂಗೇರಿ ಹಲವು  …

Read More

ಅಪರೂಪದ ಥಲಸ್ಸೆಮಿಯಾ ರೋಗ ಪೀಡಿತರಿಗಾಗಿ ಹಿರೇಸಾನಿಯಲ್ಲಿ ರಕ್ತದಾನ ಶಿಬಿರ

ಅಪರೂಪದ ಥಲಸ್ಸೆಮಿಯಾ ರೋಗ ಪೀಡಿತರಿಗಾಗಿ ಹಿರೇಸಾನಿಯಲ್ಲಿ ರಕ್ತದಾನ ಶಿಬಿರ ರಿಪ್ಪನ್ ಪೇಟೆ: ಇಲ್ಲಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಸಾನಿ ಎಂಬ ಕುಗ್ರಾಮಕ್ಕೆ ಇಂದಿಗೂ ಚಿಮುಣಿ ಬುಡ್ಡಿಯಂತೆ ಉರಿಯುವ ವಿದ್ಯುತ್  ದೀಪಗಳು, ರಸ್ತೆ, ಸಾರಿಗೆ, ದೂರವಾಣಿ ಹಾಗೂ ನೆಟ್ವರ್ಕ್  ಸೌಕರ್ಯವಿಲ್ಲ. ಪ್ರತಿ ಚುನಾವಣೆಯಲ್ಲಿ ಮತದಾನ ಮಾಡುವ ಮುನ್ನ ಭರವಸೆ ನೀಡುವ ನಾಯಕರು ನಂತರ ಇತ್ತಕಡೆ ತಲೆ ಹಾಕಿ ಮಲಗಿದ ಉದಾಹರಣೆಯೂ ಇಲ್ಲ. ಆದರೂ, ಈ ಗ್ರಾಮದ ಯುವಕರ  ಚಿಂತನೆ  ಗ್ರಾಮಸ್ಥರ ಸಹಮತದೊಂದಿಗೆ ಯಶಸ್ವಿ ರಕ್ತದಾನ ಶಿಬಿರಕ್ಕೆ ಮುನ್ನುಡಿ …

Read More

ಖಾಸಗಿ ಫೋಟೋ , ವೀಡಿಯೋ ವೈರಲ್ ಮಾಡಿ ₹2 ಲಕ್ಷಕ್ಕೆ ಬೇಡಿಕೆ – ಬ್ಲ್ಯಾಕ್‌ಮೇಲ್ ಕೇಸ್ ದಾಖಲು

ಖಾಸಗಿ ಫೋಟೋ-ವೀಡಿಯೋ ವೈರಲ್ ಮಾಡಿ ₹2 ಲಕ್ಷಕ್ಕೆ ಬೇಡಿಕೆ – ಶಿವಮೊಗ್ಗದಲ್ಲಿ ಬ್ಲ್ಯಾಕ್‌ಮೇಲ್ ಕೇಸ್ ಶಿವಮೊಗ್ಗ ಜಿಲ್ಲೆಯ ತಾಲೂಕಿನೊಂದರಲ್ಲಿ ಮಹಿಳೆಯೊಬ್ಬರ ಖಾಸಗಿ ಫೋಟೋ ಹಾಗೂ ವೀಡಿಯೋಗಳನ್ನು ಕದ್ದುಕೊಂಡು, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲು ಯತ್ನಿಸಿ, ಹಣಕ್ಕೆ ಬೇಡಿಕೆ ಇಟ್ಟಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಶಿವಮೊಗ್ಗ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನ ಪ್ರಕಾರ, ಅಪರಿಚಿತ ಮೊಬೈಲ್ ನಂಬರ್‌ನಿಂದ ಮಹಿಳೆಯ ವಾಟ್ಸಾಪ್‌ಗೆ ಆಕೆಯ ಖಾಸಗಿ ಫೋಟೋ ಹಾಗೂ ವೀಡಿಯೋಗಳನ್ನು ಕಳುಹಿಸಿ,…

Read More