ರಸ್ತೇ ಅಪಘಾತ: ಆಟವಾಡುತ್ತಿದ್ದಾಗ ಕಾರು ಡಿಕ್ಕಿ – 2 ವರ್ಷದ ಮಗು ದಾರುಣ ಅಂತ್ಯ
ಶಿವಮೊಗ್ಗ ಜಿಲ್ಲೆಯಲ್ಲಿ ಸಂಭವಿಸಿದ ದುರಂತ ಘಟನೆಯಲ್ಲಿ ಎರಡು ವರ್ಷದ ಬಾಲಕನೊಬ್ಬ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಪ್ರಾಣ ಕಳೆದುಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಕೋಟೆ ಗಂಗೂರು – ಸಾಗರ ರಸ್ತೆಯ ವಿರುಪಿನಕೊಪ್ಪ ಗ್ರಾಮದಲ್ಲಿ ಈ ಘಟನೆ ಶನಿವಾರ ಸಂಜೆ ನಡೆದಿದೆ.
ಷಣ್ಮುಖ ಎಂಬುವವರ ಪುತ್ರ ವಿನಯ್ (2) ಮೃತ ದುರ್ದೈವಿ.
ಮಗು ಮನೆಯ ಎದುರಿನ ರಸ್ತೆಯ ಬದಿಯಲ್ಲಿ ಆಟವಾಡುತಿದ್ದ ಸಮಯದಲ್ಲಿ ಕೋಟೆ ಗಂಗೂರು ದಿಕ್ಕಿನಿಂದ ಸಾಗರದತ್ತ ಬರುತ್ತಿದ್ದ ಕಾರು ಅಕಸ್ಮಾತ್ತಾಗಿ ಮಗುವಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಮಗುವಿನ ಕಾಲು, ಮೈ ಹಾಗೂ ಕೈಗಳಿಗೆ ಭಾರೀ ಪೆಟ್ಟು ತಗುಲಿತ್ತು. ಸ್ಥಳೀಯರು ತಕ್ಷಣ ಮಗುವನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದರೂ, ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ.
ಘಟನೆಯಿಂದ ಗ್ರಾಮದಲ್ಲಿ ತೀವ್ರ ದುಃಖದ ವಾತಾವರಣ ಮೂಡಿದೆ. ಮಗು ಕಳೆದುಕೊಂಡ ದುಃಖದಲ್ಲಿ ಕುಟುಂಬಸ್ಥರು ಶೋಕಸಮುದ್ರದಲ್ಲಿ ಮುಳುಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ರಿಪ್ಪನ್ ಪೇಟೆಯಲ್ಲಿ ಸರ್ಕಾರಿ ಜಾಗದ ಬೇಲಿ ತೆರವು; ಹಕ್ಕುಪತ್ರ–9/11 ದಾಖಲೆ ಕುರಿತು ವಾಗ್ವಾದ Revenue officials removed a fence…
ರಿಪ್ಪನ್ಪೇಟೆಯಲ್ಲಿ ಮೋದಿ ಜನ್ಮದಿನಾಚರಣೆ : ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ Special pooja was offered at Varasiddhi…
ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan…
ಮೋದಿ ಹುಟ್ಟುಹಬ್ಬ ‘ನಿರುದ್ಯೋಗಿಗಳ ದಿನ’ವಾಗಿ ಆಚರಣೆ; ಯುವ ಕಾಂಗ್ರೆಸ್ ಪ್ರತಿಭಟನೆ Youth Congress and NSUI workers in Shivamogga…
ಶಿವಮೊಗ್ಗ ಲೋಕಾಯುಕ್ತ ಎಸ್ಪಿಯಾಗಿ ಆಂಟನಿ ಜಾನ್ ನೇಮಕ Anthony John has been appointed as the new Lokayukta…
ಕಡವೆ ಬೇಟೆ ಮಾಡಿ ಮಾಂಸ ಕತ್ತರಿಸುತ್ತಿದ್ದಾಗಲೇ ದಾಳಿ! ಮೂವರ ಬಂಧನ | 70 ಕೆ.ಜಿ. ಮಾಂಸ , ಬಂದೂಕು ಜಪ್ತಿ…