January 11, 2026

ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ

ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ

ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯಲ್ಲಿ ಮತ್ತು ಮುಜರಾಯಿ ಇಲಾಖೆಯವರ ಅದೇಶದನ್ವಯ ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಸಂಭ್ರಮಸಿದರು.

ಪಟ್ಟಣದ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಗೋವುಗಳನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು.

ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ, ಗಣೇಶ್ ಎನ್.ಕಾಮತ್, ಸುಧೀಂದ್ರ ಪೂಜಾರಿ,,ಜಯಲಕ್ಷಿ, ಮುರುಳಿ ಕೆರೆಹಳ್ಳಿ , ರಮೇಶ್ ಫ್ಯಾನ್ಸಿ , ದೇವರಾಜ್ ಕೆರೆಹಳ್ಳಿ ,  ರಾಘವೇಂದ್ರ, ರಂಜನ್, ವೈ.ಜೆ.ಕೃಷ್ಣ, ರಾಘವೇಂದ್ರ ಆರ್.ಸರಸ್ವತಿ,ಇನ್ನಿತರರು ಹಾಜರಿದ್ದರು.

[ರಿಪ್ಪನ್ ಪೇಟೆ ಗ್ರಾಪಂ ಮಾಜಿ ಉಪಾಧ್ಯಕ್ಷ ರವೀಂದ್ರ ಕೆರೆಹಳ್ಳಿ ಕುಟುಂಬಸ್ಥರು ಗೋಪೂಜೆ ನೆರವೇರಿಸಿದರು]
[ಹೊಸನಗರ ತಾಪಂ ಮಾಜಿ ಸದಸ್ಯರು ಹಾಗೂ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ ಚಂದ್ರಮೌಳಿ ಕುಟುಂಬಸ್ಥರು ಗೋಪೂಜೆ ನೆರವೇರಿಸಿದರು.]
[ಕುಕ್ಕಳಲೆಯ ಕೀರ್ತಿ ಗೌಡ ರವರ ಕುಟುಂಬಸ್ಥರು ಗೋಪೂಜೆ ನೆರವೇರಿಸಿದರು]
ರಿಪ್ಪನ್‌ಪೇಟೆ ಗ್ರಾಪಂ ಸದಸ್ಯ ಸುಂದರೇಶ್ ಮತ್ತು ಮಕ್ಕಳು ಗೋಪೂಜೆ ನೆರವೇರಿಸಿದರು
ರಿಪ್ಪನ್‌ಪೇಟೆ ಗ್ರಾಪಂ ಸದಸ್ಯ ಮಲ್ಲಿಕಾರ್ಜುನ್ ಹಾಗೂ ಕುಟುಂಬಸ್ಥರು ಗೋಪೂಜೆ ನೆರವೇರಿಸಿದರು
ರಿಪ್ಪನ್‌ಪೇಟೆ ಗ್ರಾಪಂ ಮಾಜಿ ಅಧ್ಯಕ್ಷ ಎಲ್ ವೆಂಕಟೇಶ್ ಹಾಗೂ ಗ್ರಾಪಂ ಸದಸ್ಯ ನಿರೂಪ್ ಕುಮಾರ್ ಕುಟುಂಬಸ್ಥರು ಗೋಪೂಜೆ ನೆರವೇರಿಸಿದರು.

About The Author