RIPPONPETE | 22 ವರ್ಷ ರಾಷ್ಟ್ರ ಸೇವೆ ಸಲ್ಲಿಸಿ ತವರಿಗೆ ಹಿಂದಿರುಗಿದ ಹೆಮ್ಮೆಯ ಯೋಧನಿಗೆ ಅದ್ದೂರಿ ಸ್ವಾಗತ

RIPPONPETE | 22 ವರ್ಷದ ರಾಷ್ಟ್ರ ಸೇವೆ ಸಲ್ಲಿಸಿ ತವರಿಗೆ ಹಿಂದಿರುಗಿದ ಹೆಮ್ಮೆಯ ಯೋಧನಿಗೆ ಅದ್ದೂರಿ ಸ್ವಾಗತ

ರಿಪ್ಪನ್‌ಪೇಟೆ: ದೇಶರಕ್ಷಣೆಯ ಕರ್ತವ್ಯವನ್ನು 22 ದೀರ್ಘ ವರ್ಷಗಳ ಕಾಲ ನಿರಂತರವಾಗಿ ನಿಭಾಯಿಸಿ ಗೌರವಪೂರ್ವಕ ನಿವೃತ್ತರಾಗಿರುವ ಗಿರೀಶ್ ಅವರು ತಮ್ಮ ಹೆಮ್ಮೆಯ ನಾಡಿಗೆ ಭಾನುವಾರ ಸಂಜೆ ಆಗಮಿಸಿದ್ದು ಗ್ರಾಮಸ್ಥರು ಅದ್ಭುತವಾದ ಗೌರವ ಸಮರ್ಪಣೆಯ ಮೂಲಕ ಅದ್ದೂರಿಯಾಗಿ ಬರಮಾಡಿಕೊಂಡರು.

ಮೆಸ್ಕಾಂನ ನಿವೃತ್ತ ಉದ್ಯೋಗಿ ಮೋಹನ್ ಹಾಗೂ ಜಯಲಕ್ಷ್ಮಿ ದಂಪತಿಗಳ ಪುತ್ರನಾದ ಗಿರೀಶ್, 2003ರಲ್ಲಿ ಭಾರತೀಯ ಸೇನೆಗೆ ಸೇರಿದ್ದು ದೇಶದ ವಿವಿಧ ಗಡಿಭಾಗಗಳಲ್ಲಿ ಸೇವೆ ಸಲ್ಲಿಸಿ ಅನೇಕ ಸವಾಲುಗಳನ್ನು ಎದುರಿಸಿದ್ದರು. ಜಮ್ಮು-ಕಾಶ್ಮೀರದ ಹಿಮಪರ್ವತಗಳಿಂದ ಹಿಡಿದು ರಾಜಸ್ಥಾನದ ಉಷ್ಣ ಮರುಭೂಮಿವರೆಗೆ, ದೇಶದ ಸುರಕ್ಷತೆಗಾಗಿ ತಮ್ಮ ಜೀವನದ ಶ್ರೇಷ್ಠ ವರ್ಷಗಳನ್ನು ಕರ್ತವ್ಯಕ್ಕೆ ಸಮರ್ಪಿಸಿದ್ದರು.

ರಿಪ್ಪನ್‌ಪೇಟೆಯ ವಿನಾಯಕ ವೃತ್ತಕ್ಕೆ ಗಿರೀಶ್ ಆಗಮಿಸುತಿದ್ದಂತೆ ಗ್ರಾಮಸ್ಥರು ಪಟಾಕಿ ಸಿಡಿಸಿ, ದೇಶಪರ ಘೋಷಣೆಯೊಂದಿಗೆ , ಸನ್ಮಾನದೊಂದಿಗೆ ಅವರನ್ನು ಊರ ಹೃದಯಬಾಗಿಲು ತೆರೆದು ಸ್ವಾಗತಿಸಿದರು. ಸಿಹಿ ಹಂಚಿ ಹರ್ಷಭರಿತ ಕ್ಷಣವನ್ನು ಸಂಭ್ರಮಿಸಿದರು. ಯುವಕರು “ಭಾರತ ಮಾತಾ ಕಿ ಜಯ”, “ಜೈ ಜವಾನ್” ಘೋಷಣೆಗಳನ್ನು ಕೂಗುತ್ತ ಊರಿನ ಶಕ್ತಿ ಮತ್ತು ಸಂಭ್ರಮವನ್ನು ಹೆಚ್ಚಿಸಿದರು.

ಈ ಸಂಧರ್ಭದಲ್ಲಿ ಸ್ಥಳೀಯರು ಮಾತನಾಡಿ “ಇಂದು ನಮ್ಮ ಗ್ರಾಮದ ಮಣ್ಣಿನ ಒಡಲು ಗರ್ವದಿಂದ ತಲೆ ಎತ್ತಿದೆ , ನಿಜವಾದ ರಿಯಲ್ ಹೀರೋ ಎಂದರೆ ಇಂತಹ ಯೋಧರು” , “ನಮ್ಮ ನೆಲದ ಮಗ ಸೇನೆಗೆ ಹೋಗಿ ಗೌರವದೊಂದಿಗೆ ಮರಳಿರುವುದು ನಮ್ಮ ಅದೃಷ್ಟ ಹಾಗೂ ಹೆಮ್ಮೆ” ಎಂದರು.

ನಿವೃತ್ತ ಯೋಧ ಗಿರೀಶ್ ಮಾತನಾಡಿ, “ಈ ಗೌರವ ನನ್ನ ವೈಯಕ್ತಿಕದ್ದು ಅಲ್ಲ, ಇದು ಭಾರತೀಯ ಸೇನೆಗೆ ಸಲ್ಲುವ ಗೌರವ. ಈ ನೆಲ, ಈ ಮಣ್ಣು, ಈ ಜನರ ಆಶೀರ್ವಾದದ ಕಾರಣಕ್ಕೆ ನಾನು ದೇಶಕ್ಕೆ ಸುಧೀರ್ಘ ಸೇವೆ ಸಲ್ಲಿಸಿದ್ದೇನೆ” ಎಂದು ಕೃತಜ್ಞತೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸ್ನೇಹಿತರು, ಗ್ರಾಮಪಂಚಾಯಿತಿ ಸದಸ್ಯರು, ಹಿತೈಷಿಗಳು , ಹಿರಿಯರು, ಮಹಿಳಾ ಸಂಘದ ಪ್ರತಿನಿಧಿಗಳು ಹಾಗೂ ಬಹುತೇಕ ಗ್ರಾಮಸ್ಥರು ಪಾಲ್ಗೊಂಡು ಶುಭ ಹಾರೈಸಿದರು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…

17 hours ago

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು

ಪೊಲೀಸರ ದಿಢೀರ್ ದಾಳಿ –  ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…

17 hours ago

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ

ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…

19 hours ago

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ

ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…

2 days ago

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ

ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…

2 days ago

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !!

ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…

2 days ago