ರಿಪ್ಪನ್ಪೇಟೆ; ಶರನ್ನವರಾತ್ರಿ ಸಂಭ್ರಮಾಚರಣೆಯೊಂದಿಗೆ ಸಂಪನ್ನ
ರಿಪ್ಪನ್ಪೇಟೆ;-ಇತಿಹಾಸ ಪ್ರಸಿದ್ದ ಶ್ರೀ ಸಿದ್ದಿವಿನಾಯಕ ಸ್ವಾಮಿ ಮತ್ತು ಜಗನ್ಮಾತೆ ಆನ್ನಪೂರ್ಣೇಶವರಿ ಅಮ್ಮನವರ ದೇವಸ್ಥಾನದಲ್ಲಿ ಶರನ್ನವರಾತ್ರಿ ವಿಶೇಷ ಪೂಜಾ ಕಾರ್ಯಕ್ರಮ ಮತ್ತು ಆಯುಧ ಪೂಜೆ ಹಾಗೂ ವಿಜಯದಶಮಿಯ ಪ್ರಯುಕ್ತ ಲೋಕಕಲ್ಯಾಣಾರ್ಥವಾಗಿ `ಚಂಡಿಕಾ ಹೋಮ’ಇನ್ನಿತರ ಪೂಜಾ ಕೈಂಕರ್ಯಗಳು ಸಂಭ್ರಮಾಚರಣೆಯೊಂದಿಗೆ ಸಂಪನ್ನಗೊಂಡಿತು.
ದೇವಸ್ಥಾನದ ಪ್ರಧಾನ ಅರ್ಚಕ ಗುರುರಾಜ ಭಟ್ ಇವರ ನೇತೃತ್ವದಲ್ಲಿ ನಿತ್ಯ ಅಮ್ಮನವರ ಸನ್ನಿಧಾನದಲ್ಲಿ ಚಂಡಿಕಾ ಪಾರಾಯಣ ಮತ್ತು ವಿಶೇಷ ಪೂಜಾ ಕಾರ್ಯಗಳು ನಡೆದು ವಿಜಯ ದಶಮಿಯಂದು ಲೋಕಕಲ್ಯಾಣಾರ್ಥವಾಗಿ “ಚಂಡಿಕಾ ಹೋಮ’’ ನಂತರ ತೀರ್ಥಪ್ರಸಾದ ವಿತರಣೆ ಹಾಗೂ ಸಾಮೂಹಿಕ ಅನ್ನ ಸಂತರ್ಪಣೆ ಸಂಜೆ ಸಿದ್ದಿವಿನಾಯಕ ಸ್ವಾಮಿಯ ರಥೋತ್ಸವ ಜರುಗಿತು.
ಶ್ರೀ ಸ್ವಾಮಿಯ ರಥೋತ್ಸವವು ದೇವಸ್ಥಾನದಿಂದ ಹೊರಟು ಹಿಂಭಾಗದ ಬನ್ನಿ ಮಂಟಪಕ್ಕೆ ತೆರಳಿ ಬನ್ನಿ ಗಿಡಕ್ಕೆ ಪೂಜೆ ಸಲ್ಲಿಸಿ ದೇವಸ್ಥಾನದ ಧರ್ಮದರ್ಶಿ ಸಮಿತಿಯವರು ಅಂಭುಛೇದನಗೊಳಿಸಿ ಬನ್ನಿ ಪತ್ರೆಯನ್ನು ಪರಸ್ಪರ ವಿನಮಯ ಮಾಡಿಕೊಳ್ಳುವುದರೊಂದಿಗೆ ಬನ್ನಿಕೊಟ್ಟು ಬಂಗಾರದಂತಾಗಲಿ ಎಂದು ಶುಭಹಾರೈಸಿಕೊಂಡ ದೃಶ್ಯ ವಿಶೇಷವಾಗಿತು.
ನಂತರ ಉತ್ಸವವು ವಿನಾಯಕ ವೃತ್ತದವರೆಗೆ ತೆರಳಿ ವಾಪಾಸ್ಸು ದೇವಸ್ಥಾನಕ್ಕೆ ಮರಳಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಧರ್ಮದರ್ಶಿ ಸಮಿತಿಯವರು ಭಕ್ತ ಸಮೂಹ ಪಾಲ್ಗೊಂಡಿದ್ದರು.
ರ್ಯಾಂಕ್ಸ್ ಇನ್ಸ್ಟಿಟ್ಯೂಟ್–ಜೆಸಿಐ ಹೊಸನಗರ ಡೈಮಂಡ್ ಸಹಯೋಗದಲ್ಲಿ ‘Gen Z Connect’ ತರಬೇತಿ ಯಶಸ್ವಿ Ranks Institute–JCI Hosanagara Diamond Hosts…
ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur…
ಗರ್ತಿಕೆರೆಯಲ್ಲಿ ಮಾರಣಾಂತಿಕ ಹಲ್ಲೆ: ಅಟ್ಟಹಾಸ ಮೆರೆದಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು Police arrest Raghavendra alias Apple Raghu…
ಅಕ್ರಮ ಗೋ ಸಾಗಾಟ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ - ಬಿ ವೈ ವಿಜಯೇಂದ್ರ ಆಕ್ರೋಶ…
ಗರ್ತಿಕೆರೆಯಲ್ಲಿ ವ್ಯಕ್ತಿಯ ಮೇಲೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ; ತಲೆಯ ಮೇಲೆ ಕಾಲಿಟ್ಟು ಅಟ್ಟಹಾಸ ಮೆರೆದ ಭೂಫ A…
ಚುಂಚಾದ್ರಿ ಮಹಿಳಾ ಒಕ್ಕಲಿಗರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ Ripponpete Chunchadri Mahila Okkaligar Vedike celebrated the 80th Independence…